AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು 5ನೇ ತಾರೀಖು ಮನೆಯಲ್ಲಿ ಕೊಲೆಗೀಡಾಗಿದ್ದಳು. ಮನೆಯಲ್ಲಿ ಜಗಳ ತೆಗೆದು ಕತ್ತು ಹಿಸುಕಿ‌ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪದ ಮೇಲೆ ಪತಿ ಲಕ್ಷ್ಮೀಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ
ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ
TV9 Web
| Updated By: ಸಾಧು ಶ್ರೀನಾಥ್​|

Updated on: Nov 08, 2021 | 9:38 AM

Share

ತುಮಕೂರು: ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೋಕ್ಸೋ ಕಾಯಿದೆ ಅಡಿ ತುಮಕೂರು ಪೊಲೀಸರು ಬಂಧಿಸಿದ್ದಾರೆ. ಎಸ್​​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿದ್ದ ಭೂಪನೊಬ್ಬ, ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ತೆಗೆದು ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಕುಟುಂಬ ಸಮೇತ ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ಇದೀಗ ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು 5ನೇ ತಾರೀಖು ಮನೆಯಲ್ಲಿ ಕೊಲೆಗೀಡಾಗಿದ್ದಳು. ಮನೆಯಲ್ಲಿ ಜಗಳ ತೆಗೆದು ಕತ್ತು ಹಿಸುಕಿ‌ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪದ ಮೇಲೆ ಪತಿ ಲಕ್ಷ್ಮೀಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಅಕ್ಕನ ಮಗಳನ್ನೆ ಕೊಂದಿದ್ದ ಲಕ್ಷ್ಮೀ‘ಪತಿ‘! ಇನ್ನು ಲಕ್ಷ್ಮೀಪತಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ. ಗ್ರಾಮದಲ್ಲಿಯೇ ಇದ್ದ ತನ್ನ ಅಕ್ಕನ ಮಗಳಾದ ಶೋಭಾಳನ್ನ ಇನ್ನೂ ಓದುತ್ತಿರುವಾಗಲೇ 2020 ನೇ ಮಾರ್ಚ್ 23 ರಂದು ಮದುವೆಯಾಗಿದ್ದ. ಈ ಬಗ್ಗೆ ಸ್ಥಳೀಯ ಅಂಗನವಾಡಿ ಆಶಾ ಕಾರ್ಯಕರ್ತೆ ಮತ್ತು ಆರೋಗ್ಯ ಕಿರಿಯ ಸಹಾಯಕಿ ಮನವರಿಕೆ ಮಾಡಿಕೊಟ್ಟಿದ್ದರು. 18 ವರ್ಷ ತುಂಬುವವರೆಗೂ ಬಾಲಕಿಗೆ ಮದುವೆ ಮಾಡುವುದಿಲ್ಲ ಅಂತಾ ಪೋಷಕರಿಂದ ಪತ್ರ ಬರೆಸಿ ಕೊಂಡಿದ್ದರು. ಆದರೂ ಅಧಿಕಾರಿಗಳ ಸೂಚನೆ ಧಿಕ್ಕರಿಸಿ ಮದುವೆ ಆಗಿತ್ತು ಎನ್ನಲಾಗಿದೆ.

ಲಕ್ಷ್ಮೀ ಪತಿ ವಿರುದ್ಧ ಕೊಲೆ ಹಾಗೂ ಪೋಕ್ಸೋ ದೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ‌ನೀಡಿದ ದೂರಿನ ಅನ್ವಯ ಲಕ್ಷ್ಮೀಪತಿ ವಿರುದ್ಧ ಕೊಲೆ ಹಾಗೂ ಪೋಕ್ಸೋ ದೂರು ದಾಖಲಾಗಿದೆ. ಆತನ ತಂದೆ ಮತ್ತು ಬಾಲಕಿಯ ತಂದೆ ತಾಯಿ ವಿರುದ್ಧವೂ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ಒಟ್ಟಾರೆ ಇನ್ನೂ ಓದುತ್ತಿದ್ದ ಬಾಲಕಿಯನ್ನ ಮದುವೆಯಾಗಿ ಜೀವ ತೆಗೆದಿರುವ ದರ್ಮಾರ್ಗಿಗೆ ತಕ್ಕ ಶಿಕ್ಷೆಯಾಗಬೇಕಿದೆ.

-ಮಹೇಶ್

(under aged girl killed by husband in koratagere tumkur police arrest the accused husband)

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?