AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು 5ನೇ ತಾರೀಖು ಮನೆಯಲ್ಲಿ ಕೊಲೆಗೀಡಾಗಿದ್ದಳು. ಮನೆಯಲ್ಲಿ ಜಗಳ ತೆಗೆದು ಕತ್ತು ಹಿಸುಕಿ‌ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪದ ಮೇಲೆ ಪತಿ ಲಕ್ಷ್ಮೀಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ
ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ
TV9 Web
| Edited By: |

Updated on: Nov 08, 2021 | 9:38 AM

Share

ತುಮಕೂರು: ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೋಕ್ಸೋ ಕಾಯಿದೆ ಅಡಿ ತುಮಕೂರು ಪೊಲೀಸರು ಬಂಧಿಸಿದ್ದಾರೆ. ಎಸ್​​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿದ್ದ ಭೂಪನೊಬ್ಬ, ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ತೆಗೆದು ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಕುಟುಂಬ ಸಮೇತ ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ಇದೀಗ ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು 5ನೇ ತಾರೀಖು ಮನೆಯಲ್ಲಿ ಕೊಲೆಗೀಡಾಗಿದ್ದಳು. ಮನೆಯಲ್ಲಿ ಜಗಳ ತೆಗೆದು ಕತ್ತು ಹಿಸುಕಿ‌ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪದ ಮೇಲೆ ಪತಿ ಲಕ್ಷ್ಮೀಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಅಕ್ಕನ ಮಗಳನ್ನೆ ಕೊಂದಿದ್ದ ಲಕ್ಷ್ಮೀ‘ಪತಿ‘! ಇನ್ನು ಲಕ್ಷ್ಮೀಪತಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ. ಗ್ರಾಮದಲ್ಲಿಯೇ ಇದ್ದ ತನ್ನ ಅಕ್ಕನ ಮಗಳಾದ ಶೋಭಾಳನ್ನ ಇನ್ನೂ ಓದುತ್ತಿರುವಾಗಲೇ 2020 ನೇ ಮಾರ್ಚ್ 23 ರಂದು ಮದುವೆಯಾಗಿದ್ದ. ಈ ಬಗ್ಗೆ ಸ್ಥಳೀಯ ಅಂಗನವಾಡಿ ಆಶಾ ಕಾರ್ಯಕರ್ತೆ ಮತ್ತು ಆರೋಗ್ಯ ಕಿರಿಯ ಸಹಾಯಕಿ ಮನವರಿಕೆ ಮಾಡಿಕೊಟ್ಟಿದ್ದರು. 18 ವರ್ಷ ತುಂಬುವವರೆಗೂ ಬಾಲಕಿಗೆ ಮದುವೆ ಮಾಡುವುದಿಲ್ಲ ಅಂತಾ ಪೋಷಕರಿಂದ ಪತ್ರ ಬರೆಸಿ ಕೊಂಡಿದ್ದರು. ಆದರೂ ಅಧಿಕಾರಿಗಳ ಸೂಚನೆ ಧಿಕ್ಕರಿಸಿ ಮದುವೆ ಆಗಿತ್ತು ಎನ್ನಲಾಗಿದೆ.

ಲಕ್ಷ್ಮೀ ಪತಿ ವಿರುದ್ಧ ಕೊಲೆ ಹಾಗೂ ಪೋಕ್ಸೋ ದೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ‌ನೀಡಿದ ದೂರಿನ ಅನ್ವಯ ಲಕ್ಷ್ಮೀಪತಿ ವಿರುದ್ಧ ಕೊಲೆ ಹಾಗೂ ಪೋಕ್ಸೋ ದೂರು ದಾಖಲಾಗಿದೆ. ಆತನ ತಂದೆ ಮತ್ತು ಬಾಲಕಿಯ ತಂದೆ ತಾಯಿ ವಿರುದ್ಧವೂ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ಒಟ್ಟಾರೆ ಇನ್ನೂ ಓದುತ್ತಿದ್ದ ಬಾಲಕಿಯನ್ನ ಮದುವೆಯಾಗಿ ಜೀವ ತೆಗೆದಿರುವ ದರ್ಮಾರ್ಗಿಗೆ ತಕ್ಕ ಶಿಕ್ಷೆಯಾಗಬೇಕಿದೆ.

-ಮಹೇಶ್

(under aged girl killed by husband in koratagere tumkur police arrest the accused husband)

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?