AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು 5ನೇ ತಾರೀಖು ಮನೆಯಲ್ಲಿ ಕೊಲೆಗೀಡಾಗಿದ್ದಳು. ಮನೆಯಲ್ಲಿ ಜಗಳ ತೆಗೆದು ಕತ್ತು ಹಿಸುಕಿ‌ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪದ ಮೇಲೆ ಪತಿ ಲಕ್ಷ್ಮೀಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ
ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯ ಸೆರೆ
TV9 Web
| Edited By: ಸಾಧು ಶ್ರೀನಾಥ್​|

Updated on: Nov 08, 2021 | 9:38 AM

Share

ತುಮಕೂರು: ಅಪ್ರಾಪ್ತ ವಯಸ್ಸಿನ ಪತ್ನಿಯ ಕೊಂದು ಪರಾರಿಯಾಗಿದ್ದ ಆರೋಪಿಯನ್ನು ಪೋಕ್ಸೋ ಕಾಯಿದೆ ಅಡಿ ತುಮಕೂರು ಪೊಲೀಸರು ಬಂಧಿಸಿದ್ದಾರೆ. ಎಸ್​​ಎಸ್​ಎಲ್​ಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗಿದ್ದ ಭೂಪನೊಬ್ಬ, ಕ್ಷುಲ್ಲಕ ಕಾರಣಕ್ಕೆ ಮನೆಯಲ್ಲಿ ಜಗಳ ತೆಗೆದು ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಕುಟುಂಬ ಸಮೇತ ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ಇದೀಗ ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು 5ನೇ ತಾರೀಖು ಮನೆಯಲ್ಲಿ ಕೊಲೆಗೀಡಾಗಿದ್ದಳು. ಮನೆಯಲ್ಲಿ ಜಗಳ ತೆಗೆದು ಕತ್ತು ಹಿಸುಕಿ‌ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪದ ಮೇಲೆ ಪತಿ ಲಕ್ಷ್ಮೀಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಅಕ್ಕನ ಮಗಳನ್ನೆ ಕೊಂದಿದ್ದ ಲಕ್ಷ್ಮೀ‘ಪತಿ‘! ಇನ್ನು ಲಕ್ಷ್ಮೀಪತಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ. ಗ್ರಾಮದಲ್ಲಿಯೇ ಇದ್ದ ತನ್ನ ಅಕ್ಕನ ಮಗಳಾದ ಶೋಭಾಳನ್ನ ಇನ್ನೂ ಓದುತ್ತಿರುವಾಗಲೇ 2020 ನೇ ಮಾರ್ಚ್ 23 ರಂದು ಮದುವೆಯಾಗಿದ್ದ. ಈ ಬಗ್ಗೆ ಸ್ಥಳೀಯ ಅಂಗನವಾಡಿ ಆಶಾ ಕಾರ್ಯಕರ್ತೆ ಮತ್ತು ಆರೋಗ್ಯ ಕಿರಿಯ ಸಹಾಯಕಿ ಮನವರಿಕೆ ಮಾಡಿಕೊಟ್ಟಿದ್ದರು. 18 ವರ್ಷ ತುಂಬುವವರೆಗೂ ಬಾಲಕಿಗೆ ಮದುವೆ ಮಾಡುವುದಿಲ್ಲ ಅಂತಾ ಪೋಷಕರಿಂದ ಪತ್ರ ಬರೆಸಿ ಕೊಂಡಿದ್ದರು. ಆದರೂ ಅಧಿಕಾರಿಗಳ ಸೂಚನೆ ಧಿಕ್ಕರಿಸಿ ಮದುವೆ ಆಗಿತ್ತು ಎನ್ನಲಾಗಿದೆ.

ಲಕ್ಷ್ಮೀ ಪತಿ ವಿರುದ್ಧ ಕೊಲೆ ಹಾಗೂ ಪೋಕ್ಸೋ ದೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ‌ನೀಡಿದ ದೂರಿನ ಅನ್ವಯ ಲಕ್ಷ್ಮೀಪತಿ ವಿರುದ್ಧ ಕೊಲೆ ಹಾಗೂ ಪೋಕ್ಸೋ ದೂರು ದಾಖಲಾಗಿದೆ. ಆತನ ತಂದೆ ಮತ್ತು ಬಾಲಕಿಯ ತಂದೆ ತಾಯಿ ವಿರುದ್ಧವೂ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿದೆ. ಒಟ್ಟಾರೆ ಇನ್ನೂ ಓದುತ್ತಿದ್ದ ಬಾಲಕಿಯನ್ನ ಮದುವೆಯಾಗಿ ಜೀವ ತೆಗೆದಿರುವ ದರ್ಮಾರ್ಗಿಗೆ ತಕ್ಕ ಶಿಕ್ಷೆಯಾಗಬೇಕಿದೆ.

-ಮಹೇಶ್

(under aged girl killed by husband in koratagere tumkur police arrest the accused husband)

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು