ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ

ಅರ್ಬನ್ ರೆಸಾರ್ಟ್ ಬಳಿ ಸ್ಕೂಟಿಯಲ್ಲಿ ಬಂದ ಮೂವರು ಕಿಡಿಗೇಡಿಗಳು ವಿದ್ಯಾರ್ಥಿ ಭೀಮಾಶಂಕರನ ಮೊಬೈಲನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಭೀಮಾಶಂಕರ ಮೊಬೈಲ್ ಕೊಡದೇ ಇದ್ದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ
ಹಲ್ಲೆಗೊಳಗಾದ ಸಿದ್ದಗಂಗಾ ಮಠದ ವಿದ್ಯಾರ್ಥಿ
Follow us
| Updated By: sandhya thejappa

Updated on:Jan 23, 2022 | 4:40 PM

ತುಮಕೂರು: ಸಿದ್ದಗಂಗಾ ಮಠದ (Siddaganga Matha) ವಿದ್ಯಾರ್ಥಿ (Student) ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸಿದ್ದಗಂಗಾ ಜೂನಿಯರ್ ಕಾಲೇಜಿನ ಭೀಮಾಶಂಕರ ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿ ಬಳಿಯಿದ್ದ ಮೊಬೈಲ್​ನ ಕಸಿದು ಪರಾರಿಯಾಗಿದ್ದಾರೆ. ಬೆಂಗಳೂರು ತುಮಕೂರು ರಸ್ತೆಗೆ ಹೊಂದಿಕೊಂಡಿರುವ ಎಚ್ಎಂಟಿ ಬಸ್ ನಿಲ್ದಾಣದ ಬಳಿ ಬಸ್​ನಿಂದ ಇಳಿದು ಮಠಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅರ್ಬನ್ ರೆಸಾರ್ಟ್ ಬಳಿ ಸ್ಕೂಟಿಯಲ್ಲಿ ಬಂದ ಮೂವರು ಕಿಡಿಗೇಡಿಗಳು ವಿದ್ಯಾರ್ಥಿ ಭೀಮಾಶಂಕರನ ಮೊಬೈಲನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಭೀಮಾಶಂಕರ ಮೊಬೈಲ್ ಕೊಡದೇ ಇದ್ದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಯ ಕೈಗೆ ಗಾಯವಾಗಿದ್ದು, ಕಿಡಿಗೇಡಿಗಳು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಬಿಜಾಪುರ ಮೂಲದವನು. ಗಾಯಾಳು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಹಾಡಹಗಲೇ ಈ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ.

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ, ಇಬ್ಬರ ದುರ್ಮರಣ

ಕಾಶಪುರ ಬಳಿ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು, ಇಬ್ಬರ ದುರ್ಮರಣ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಾಶಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸ್​ ಡಿಕ್ಕಿಯಾಗಿ ರೈತ ಗೋಪಾಲ ನಾಯ್ಕ ಮತ್ತು ಭಿಕ್ಷುಕನೊಬ್ಬ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಸ್ ಕಂಡಕ್ಟರ್​ ಕಾಲು ಮುರಿದಿದ್ದು. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸರ್ಕಾರಿ ಬಸ್ ಇಬ್ಬರಿಗೆ ಗುದ್ದಿದ ಬಳಿಕ ಮರಕ್ಕೆ ಡಿಕ್ಕಿಯಾಗಿದೆ. 10 ಪ್ರಯಾಣಿಕರಿಗೆ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ

ಆರೂವರೆ ತಿಂಗಳಿಗೆ ಜನಿಸಿತಾ ಪ್ರಿಯಾಂಕಾ ಚೋಪ್ರಾ ಮಗು? ಹಲವು ಸತ್ಯಗಳನ್ನು ಮುಚ್ಚಿಟ್ಟ ನಟಿ

ಅಪ್ರಾಪ್ತ ಮಗಳ ಮೇಲೆ ರೇಪ್​ ಮಾಡಿದ್ದವನನ್ನು ಗೋರಖ್​ಪುರ ಕೋರ್ಟ್ ಆವರಣದಲ್ಲಿಯೇ ಕೊಂದ ಮಾಜಿ ಬಿಎಸ್​ಎಫ್​ ಯೋಧ

Published On - 2:15 pm, Sun, 23 January 22