AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ

ಅರ್ಬನ್ ರೆಸಾರ್ಟ್ ಬಳಿ ಸ್ಕೂಟಿಯಲ್ಲಿ ಬಂದ ಮೂವರು ಕಿಡಿಗೇಡಿಗಳು ವಿದ್ಯಾರ್ಥಿ ಭೀಮಾಶಂಕರನ ಮೊಬೈಲನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಭೀಮಾಶಂಕರ ಮೊಬೈಲ್ ಕೊಡದೇ ಇದ್ದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ
ಹಲ್ಲೆಗೊಳಗಾದ ಸಿದ್ದಗಂಗಾ ಮಠದ ವಿದ್ಯಾರ್ಥಿ
Follow us
TV9 Web
| Updated By: sandhya thejappa

Updated on:Jan 23, 2022 | 4:40 PM

ತುಮಕೂರು: ಸಿದ್ದಗಂಗಾ ಮಠದ (Siddaganga Matha) ವಿದ್ಯಾರ್ಥಿ (Student) ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸಿದ್ದಗಂಗಾ ಜೂನಿಯರ್ ಕಾಲೇಜಿನ ಭೀಮಾಶಂಕರ ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿ ಬಳಿಯಿದ್ದ ಮೊಬೈಲ್​ನ ಕಸಿದು ಪರಾರಿಯಾಗಿದ್ದಾರೆ. ಬೆಂಗಳೂರು ತುಮಕೂರು ರಸ್ತೆಗೆ ಹೊಂದಿಕೊಂಡಿರುವ ಎಚ್ಎಂಟಿ ಬಸ್ ನಿಲ್ದಾಣದ ಬಳಿ ಬಸ್​ನಿಂದ ಇಳಿದು ಮಠಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅರ್ಬನ್ ರೆಸಾರ್ಟ್ ಬಳಿ ಸ್ಕೂಟಿಯಲ್ಲಿ ಬಂದ ಮೂವರು ಕಿಡಿಗೇಡಿಗಳು ವಿದ್ಯಾರ್ಥಿ ಭೀಮಾಶಂಕರನ ಮೊಬೈಲನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಭೀಮಾಶಂಕರ ಮೊಬೈಲ್ ಕೊಡದೇ ಇದ್ದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಯ ಕೈಗೆ ಗಾಯವಾಗಿದ್ದು, ಕಿಡಿಗೇಡಿಗಳು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಬಿಜಾಪುರ ಮೂಲದವನು. ಗಾಯಾಳು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಹಾಡಹಗಲೇ ಈ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ.

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ, ಇಬ್ಬರ ದುರ್ಮರಣ

ಕಾಶಪುರ ಬಳಿ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು, ಇಬ್ಬರ ದುರ್ಮರಣ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಾಶಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸ್​ ಡಿಕ್ಕಿಯಾಗಿ ರೈತ ಗೋಪಾಲ ನಾಯ್ಕ ಮತ್ತು ಭಿಕ್ಷುಕನೊಬ್ಬ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಸ್ ಕಂಡಕ್ಟರ್​ ಕಾಲು ಮುರಿದಿದ್ದು. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸರ್ಕಾರಿ ಬಸ್ ಇಬ್ಬರಿಗೆ ಗುದ್ದಿದ ಬಳಿಕ ಮರಕ್ಕೆ ಡಿಕ್ಕಿಯಾಗಿದೆ. 10 ಪ್ರಯಾಣಿಕರಿಗೆ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ

ಆರೂವರೆ ತಿಂಗಳಿಗೆ ಜನಿಸಿತಾ ಪ್ರಿಯಾಂಕಾ ಚೋಪ್ರಾ ಮಗು? ಹಲವು ಸತ್ಯಗಳನ್ನು ಮುಚ್ಚಿಟ್ಟ ನಟಿ

ಅಪ್ರಾಪ್ತ ಮಗಳ ಮೇಲೆ ರೇಪ್​ ಮಾಡಿದ್ದವನನ್ನು ಗೋರಖ್​ಪುರ ಕೋರ್ಟ್ ಆವರಣದಲ್ಲಿಯೇ ಕೊಂದ ಮಾಜಿ ಬಿಎಸ್​ಎಫ್​ ಯೋಧ

Published On - 2:15 pm, Sun, 23 January 22

ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ