AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ

ಅರ್ಬನ್ ರೆಸಾರ್ಟ್ ಬಳಿ ಸ್ಕೂಟಿಯಲ್ಲಿ ಬಂದ ಮೂವರು ಕಿಡಿಗೇಡಿಗಳು ವಿದ್ಯಾರ್ಥಿ ಭೀಮಾಶಂಕರನ ಮೊಬೈಲನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಭೀಮಾಶಂಕರ ಮೊಬೈಲ್ ಕೊಡದೇ ಇದ್ದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.

ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ
ಹಲ್ಲೆಗೊಳಗಾದ ಸಿದ್ದಗಂಗಾ ಮಠದ ವಿದ್ಯಾರ್ಥಿ
TV9 Web
| Edited By: |

Updated on:Jan 23, 2022 | 4:40 PM

Share

ತುಮಕೂರು: ಸಿದ್ದಗಂಗಾ ಮಠದ (Siddaganga Matha) ವಿದ್ಯಾರ್ಥಿ (Student) ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಸಿದ್ದಗಂಗಾ ಜೂನಿಯರ್ ಕಾಲೇಜಿನ ಭೀಮಾಶಂಕರ ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿ ಬಳಿಯಿದ್ದ ಮೊಬೈಲ್​ನ ಕಸಿದು ಪರಾರಿಯಾಗಿದ್ದಾರೆ. ಬೆಂಗಳೂರು ತುಮಕೂರು ರಸ್ತೆಗೆ ಹೊಂದಿಕೊಂಡಿರುವ ಎಚ್ಎಂಟಿ ಬಸ್ ನಿಲ್ದಾಣದ ಬಳಿ ಬಸ್​ನಿಂದ ಇಳಿದು ಮಠಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಅರ್ಬನ್ ರೆಸಾರ್ಟ್ ಬಳಿ ಸ್ಕೂಟಿಯಲ್ಲಿ ಬಂದ ಮೂವರು ಕಿಡಿಗೇಡಿಗಳು ವಿದ್ಯಾರ್ಥಿ ಭೀಮಾಶಂಕರನ ಮೊಬೈಲನ್ನು ಕಸಿದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ಭೀಮಾಶಂಕರ ಮೊಬೈಲ್ ಕೊಡದೇ ಇದ್ದಾಗ ಆತನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ವಿದ್ಯಾರ್ಥಿಯ ಕೈಗೆ ಗಾಯವಾಗಿದ್ದು, ಕಿಡಿಗೇಡಿಗಳು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ವಿದ್ಯಾರ್ಥಿ ಬಿಜಾಪುರ ಮೂಲದವನು. ಗಾಯಾಳು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಹಾಡಹಗಲೇ ಈ ಘಟನೆ ನಡೆದಿರುವುದು ಸ್ಥಳೀಯರಲ್ಲಿ ಭೀತಿ ಹುಟ್ಟಿಸಿದೆ.

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ, ಇಬ್ಬರ ದುರ್ಮರಣ

ಕಾಶಪುರ ಬಳಿ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು, ಇಬ್ಬರ ದುರ್ಮರಣ ಹೊಂದಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಾಶಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಸ್​ ಡಿಕ್ಕಿಯಾಗಿ ರೈತ ಗೋಪಾಲ ನಾಯ್ಕ ಮತ್ತು ಭಿಕ್ಷುಕನೊಬ್ಬ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಸ್ ಕಂಡಕ್ಟರ್​ ಕಾಲು ಮುರಿದಿದ್ದು. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸರ್ಕಾರಿ ಬಸ್ ಇಬ್ಬರಿಗೆ ಗುದ್ದಿದ ಬಳಿಕ ಮರಕ್ಕೆ ಡಿಕ್ಕಿಯಾಗಿದೆ. 10 ಪ್ರಯಾಣಿಕರಿಗೆ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಬಳಿಕ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ

ಆರೂವರೆ ತಿಂಗಳಿಗೆ ಜನಿಸಿತಾ ಪ್ರಿಯಾಂಕಾ ಚೋಪ್ರಾ ಮಗು? ಹಲವು ಸತ್ಯಗಳನ್ನು ಮುಚ್ಚಿಟ್ಟ ನಟಿ

ಅಪ್ರಾಪ್ತ ಮಗಳ ಮೇಲೆ ರೇಪ್​ ಮಾಡಿದ್ದವನನ್ನು ಗೋರಖ್​ಪುರ ಕೋರ್ಟ್ ಆವರಣದಲ್ಲಿಯೇ ಕೊಂದ ಮಾಜಿ ಬಿಎಸ್​ಎಫ್​ ಯೋಧ

Published On - 2:15 pm, Sun, 23 January 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!