AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ.15ರಿಂದ 20ರಷ್ಟು KSRTC ಬಸ್​ ಟಿಕೆಟ್​​ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ -ಎಸ್.ಆರ್.ಶ್ರೀನಿವಾಸ್

ಕೆಎಸ್​ಆರ್​ಟಿಸಿ ಬಸ್​ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಆದಷ್ಟು ಬೇಗ ಟಿಕೆಟ್ ದರ ಹೆಚ್ಚಾಗಲಿದೆ. 2019ರಲ್ಲಿ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕಟ್ ದರ ಹೆಚ್ಚಳ ಮಾಡದೆ 5 ವರ್ಷ ಆಗಿದೆ. ತೈಲ ಬೆಲೆ ಏರಿಕೆ ಆಗಿರುವುದರಿಂದ ದರ ಏರಿಕೆ ಅನಿವಾರ್ಯ ಎಂದು ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.

ಶೇ.15ರಿಂದ 20ರಷ್ಟು KSRTC ಬಸ್​ ಟಿಕೆಟ್​​ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ -ಎಸ್.ಆರ್.ಶ್ರೀನಿವಾಸ್
ಎಸ್.ಆರ್.ಶ್ರೀನಿವಾಸ್
ಮಹೇಶ್ ಇ, ಭೂಮನಹಳ್ಳಿ
| Updated By: ಆಯೇಷಾ ಬಾನು|

Updated on: Jul 14, 2024 | 1:46 PM

Share

ತುಮಕೂರು, ಜುಲೈ.14: ಹಾಲು, ಪೆಟ್ರೋಲ್-ಡೀಸೆಲ್​ ಬೆಲೆ ಏರಿಕೆ ಬೆನ್ನಲ್ಲೇ ಈಗ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳದ ಬರೆ ಬಿದ್ದಿದೆ. ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್‌ಗಳ ಟಿಕೆಟ್ ದರ (Bus Ticket Fare) ಹೆಚ್ಚಾಗುವ ಸಾಧ್ಯತೆ ಇದೆ. ಶೇ.15ರಿಂದ 20ರಷ್ಟು KSRTC ಬಸ್​ ಟಿಕೆಟ್​​ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತುಮಕೂರಿನಲ್ಲಿ ಗುಬ್ಬಿ ‘ಕೈ’ ಶಾಸಕ, ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ತಿಳಿಸಿದ್ದಾರೆ.

ಮೊನ್ನೆ ಬೋರ್ಡ್ ಮೀಟಿಂಗ್ ಮಾಡಿ, ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಈ ಹಿಂದೆ 2019ರಲ್ಲಿ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕಟ್ ದರ ಹೆಚ್ಚಳ ಮಾಡದೆ 5 ವರ್ಷ ಆಗಿದೆ. ತೈಲ ಬೆಲೆ ಏರಿಕೆ ಆಗಿರುವುದರಿಂದ ದರ ಏರಿಕೆ ಅನಿವಾರ್ಯ. ನೌಕರರಿಗೆ ಸಂಬಳ ಹೆಚ್ಚಳ ಮತ್ತು ಸವಲತ್ತು ಕೊಡುವುದನ್ನ ಮಾಡಬೇಕಾದರೆ ದರ ಹೆಚ್ಚಳ ಆಗಲೇಬೇಕು.

ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ 2020ರಲ್ಲಿ ಮಾಡಬೇಕಿತ್ತು. ಇಲ್ಲಿ ತನಕ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡ್ತಿವಿ. ಹಾಗಾಗಿ ಟಿಕೆಟ್ ದರ ಹೆಚ್ಚಳ ಆಗುತ್ತೆ. ಕಾಲಕಾಲಕ್ಕೆ ಹೆಚ್ಚಳ ಮಾಡಿದ್ರೆ ಹೀಗೆಲ್ಲ ಆಗ್ತಿರಲಿಲ್ಲ. ಕಳೆದ ತ್ರೈ ಮಾಸಿಕದಲ್ಲಿ ಕೆಎಸ್‌ಆರ್​ಟಿಸಿಗೆ 295 ಕೋಟಿ ನಷ್ಟ ಆಗಿದೆ. 40 ಹೊಸ ವೋಲ್ವೋ ಬಸ್‌ಗಳಿಗೆ ಪ್ರಸ್ಥಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೆ 600 ಸಾಮಾನ್ಯ ಬಸ್‌ಗಳನ್ನು ಕೊಂಡುಕೊಳ್ಳಲಾಗಿದೆ. 15%-20 ದರ ಹೆಚ್ಚಳ ಮಾಡಲು ಪ್ರಸ್ಥಾವನೆ ಸಲ್ಲಿಸಲಾಗಿದೆ ಎಂದರು.

ಇದನ್ನೂ ಓದಿ: ಶ್ರೀಘ್ರದಲ್ಲೇ ರಸ್ತೆಗೆ ಇಳಿಯಲಿದೆ ಕೆಎಸ್​ಆರ್​ಟಿಸಿ ಹೊಸ ವೋಲ್ವೋ ಬಸ್​, ಇಲ್ಲಿದೆ ವಿಶೇಷತೆ

ಇನ್ನು ಉಳಿದದ್ದು ಸಿಎಂ ವಿವೇಚನೆಗೆ ಬಿಟ್ಟಿದ್ದು ರೇಟ್ ಜಾಸ್ತಿ ಮಾಡಿರುವುದರಿಂದ ಪುರುಷ ಪ್ರಯಾಣಿಕರಿಗೆ ಹೊರೆಯಾಗುತ್ತದೆ ಅನ್ನೋ ಪ್ರಶ್ನೆಯೇ ಇಲ್ಲ. ಶಕ್ತಿ ಯೋಜನೆಯಲ್ಲಿನ ಮಹಿಳಾ ಪ್ರಯಾಣಿಕರ ಟಿಕೆಟ್ ದರ ಹೆಚ್ಚಾಗುತ್ತೆ, ಸರ್ಕಾರ ಅದನ್ನು ತುಂಬಿಕೊಡುತ್ತೆ. ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯಬೇಕಾದರೆ ದರ ಹೆಚ್ಚಳ ಅನಿವಾರ್ಯ ಎಂದು ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ಬಸ್​ ಟಿಕೆಟ್​ ದರ ಏರಿಸುವ ಸುಳಿವು ನೀಡಿದ ಕಾಂಗ್ರೆಸ್ ಶಾಸಕ

ಇನ್ನು ಮತ್ತೊಂದೆಡೆ ಶಕ್ತಿ ಯೋಜನೆಯಿಂದ ನಿಗಮ ನಷ್ಟದಲ್ಲಿದೆ. ಡೀಸೆಲ್​ ಹಾಗೂ ಬಸ್​​ನ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಬಸ್​​ ಟಿಕೆಟ್ ದರ ಏರಿಕೆ ಮಾಡಿಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಆಸ್ತಿ ಪರಭಾರೆ ಮಾಡುತ್ತೇವೆ. ಸಂಸ್ಥೆಗೆ ಸೇರಿದ ಹಳೇ ಕಟ್ಟಡಗಳನ್ನು ನವೀಕರಿಸಿ ಬಾಡಿಗೆ ಕೊಡುತ್ತೇವೆ. ಬಸ್​ ​ ಟಿಕೆಟ್ ದರವನ್ನು ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ರಾಜು ಕಾಗೆ ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ