Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಸಾಯಿಸಿ, ಶವವನ್ನ ಕಸದಂತೆ ಚರಂಡಿಗೆ ಹಾಕಿದ ತುಮಕೂರು ಮಹಿಳೆ

ಕಳೆದ 8 ವರ್ಷಗಳಿಂದ ಪ್ರತಿನಿತ್ಯ ಜಗಳವಾಗುತ್ತಿತ್ತು. ಅಲ್ಲದೆ ಅನ್ನಪೂರ್ಣಗೆ ಅಕ್ರಮ ಸಂಬಂಧ ಇತ್ತು, ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಗಂಡನ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಸಾಯಿಸಿ, ಶವವನ್ನ ಕಸದಂತೆ ಚರಂಡಿಗೆ ಹಾಕಿದ ತುಮಕೂರು ಮಹಿಳೆ
ನಾರಾಯಣ ಮತ್ತು ಅನ್ನಪೂರ್ಣ
Follow us
TV9 Web
| Updated By: preethi shettigar

Updated on:Sep 13, 2021 | 11:19 AM

ತುಮಕೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ನಡೆದಿದೆ. ಪತಿ ನಾರಾಯಣ(52) ಹತ್ಯೆಗೈದ ಪತ್ನಿ ಅನ್ನಪೂರ್ಣ, ಶವವನ್ನು ಚರಂಡಿಗೆ ಎಸೆದಿದ್ದಾಳೆ. ಸದ್ಯ ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಲಮಂಗಲ ಬಳಿಯ ಟೋಲ್​ನಲ್ಲಿ ಪತಿ ನಾರಾಯಣ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಮನೆಯಲ್ಲಿ ಪ್ರತಿದಿನ ಜಗಳವಾಗುತ್ತಿತ್ತು. ಕಳೆದ 8 ವರ್ಷಗಳಿಂದ ಪ್ರತಿನಿತ್ಯ ಜಗಳವಾಗುತ್ತಿತ್ತು. ಅಲ್ಲದೆ ಅನ್ನಪೂರ್ಣಗೆ ಅಕ್ರಮ ಸಂಬಂಧ ಇತ್ತು, ಇದೇ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ನೆಲಮಂಗಲ: ಪತಿ, ಪತ್ನಿಯ ಮಧ್ಯೆ ಗಲಾಟೆ; ಪತಿಯ ಮೇಲೆ ಹಲ್ಲೆ ಮಾವ-ಬಾಮೈದ ಸೇರಿ ಅಳಿಯನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಇಸ್ಲಾಂಪುರದ ಇದಾಯತ್ ಉಲ್ಲಾ ಖಾನ್ (30) ಹಲ್ಲೆಗೊಳಗಾದ ವ್ಯಕ್ತಿ. ಸದ್ಯ ಇಸ್ಲಾಂಪುರದ ಇದಾಯತ್ ಉಲ್ಲಾ ಖಾನ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಂದೇ ಗ್ರಾಮದ ದಂಪತಿಗಳು ಹತ್ತು ವರ್ಷದ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಸರಿಯಾಗಿ ಕುಟುಂಬ ನಿರ್ವಹಣೆ ಮಾಡಿರಲಿಲ್ಲ. ಆಗಾಗ್ಗೆ ಕುಟುಂಬದಲ್ಲಿ ಪತಿ-ಪತ್ನಿಯರ ನಡುವೆ ಗಲಾಟೆ, ಬಡಿದಾಟ ನಡೆದಿತ್ತು. ಹೀಗಾಗಿ ಪತ್ನಿ ಉನ್ನಿಸ ಪೋಷಕರಿಗೆ ಪತಿ ವಿರುದ್ಧ ದೂರಿದ್ದಾಳೆ. ಮಗಳ ದೂರಿನ್ವಯ ಪೋಷಕರ ನಡುವೆ ವಾಗ್ವಾದ ನಡೆದಿದ್ದು, ಮಾವ ಅನ್ಸರ್, ಬಾಮೈದ ಆಸ್ಕರ್ ಪಾಶ, ಹಲ್ಲೆ ನಡೆಸಿರುವ ಅರೋಪ ಕೇಳಿ ಬಂದಿದೆ. ಸದ್ಯ ನೆಲಮಂಗಲ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Crime: ರೇಪಿಸ್ಟ್​ ಎಂದು ರೇಗಿಸಿದ ಕಾರಣಕ್ಕೆ ಕೊಲೆ; ಅಣ್ಣ, ತಮ್ಮ ಸೇರಿದಂತೆ ಮೂವರು ಆರೋಪಿಗಳ ಬಂಧನ

Crime News: ಹುಡುಗಿಗೆ ಮೆಸೇಜ್ ಕಳಿಸಿದ್ದಕ್ಕೆ ಕೇರಳದ ಯುವಕನ ಕತ್ತು ಹಿಸುಕಿ ಕೊಲೆ

Published On - 11:11 am, Mon, 13 September 21

ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ