AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಯುವತಿ ಸಾವು ಪ್ರಕರಣ; ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲು

ಯುವತಿ ಜತೆ ಲೈಂಗಿಕ ಸಂಪರ್ಕ ಹೊಂದಿದ್ದ ಆರೋಪಿ, ಯುವತಿ ಗರ್ಭಿಣಿಯಾದ ಹಿನ್ನೆಲೆ, ಗರ್ಭಪಾತಕ್ಕೆ ಯತ್ನಿಸಿದ್ದ ಎಂದು ಆರೋಪ ಕೇಳಿಬಂದಿದೆ. ಯುವತಿ ಮಾತ್ರೆ ಸೇವಿಸಿದ್ದ ಹಿನ್ನೆಲೆ ಅಡ್ಡಪರಿಣಾಮ ಉಂಟಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ತುಮಕೂರು: ಯುವತಿ ಸಾವು ಪ್ರಕರಣ; ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲು
ರಾಜೇಂದ್ರ ಕುಮಾರ್
TV9 Web
| Edited By: |

Updated on:Mar 09, 2022 | 2:33 PM

Share

ತುಮಕೂರು: ಇಲ್ಲಿನ ಯುವತಿ ಸಾವು ಪ್ರಕರಣದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ರಾಜೇಂದ್ರ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ತುಮಕೂರು ಟೌನ್ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪೊಲೀಸರಿಂದ ಆರೋಪಿ ರಾಜೇಂದ್ರ ಕುಮಾರ್‌ ಸೆರೆ ಹಿಡಿಯಲಾಗಿದೆ. ಯುವತಿ ಜತೆ ಲೈಂಗಿಕ ಸಂಪರ್ಕ ಹೊಂದಿದ್ದ ಆರೋಪಿ, ಯುವತಿ ಗರ್ಭಿಣಿಯಾದ ಹಿನ್ನೆಲೆ, ಗರ್ಭಪಾತಕ್ಕೆ ಯತ್ನಿಸಿದ್ದ ಎಂದು ಆರೋಪ ಕೇಳಿಬಂದಿದೆ. ಯುವತಿ ಗರ್ಭಪಾತಕ್ಕೆ ಮಾತ್ರೆ ಸೇವಿಸಿದ್ದ ಹಿನ್ನೆಲೆ ಅಡ್ಡಪರಿಣಾಮ ಉಂಟಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ್ದು, ಯುವತಿ ಮೊಬೈಲ್‌ನಲ್ಲಿದ್ದ ಮಾಹಿತಿ ಆಧರಿಸಿ ತನಿಖೆ ನಡೆಸಲಾಗುತ್ತಿದೆ.

ತುಮಕೂರಿನ ಸಿಎಸ್​ಐ ವೆಸ್ಲಿ ಚರ್ಚ್​​ನಲ್ಲಿ ಸಭಾಪಾಲನ ಸದಸ್ಯನಾಗಿದ್ದ ರಾಜೇಂದ್ರಕುಮಾರ್, 2013 ರಿಂದ 2018ರ ಅವಧಿಯಲ್ಲಿ ತುಮಕೂರು ಪಾಲಿಕೆಯ ನಾಮಿನಿ ಸದಸ್ಯನಾಗಿದ್ದ. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರಾಜೇಂದ್ರಕುಮಾರ್, 18 ವರ್ಷದ ಯುವತಿಗೆ ಎಂಬಾಕೆ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆಕೆಗೆ ಗರ್ಭಪಾತದ ಮಾತ್ರೆ ನೀಡಿದ್ದ ಎಂದು ತಿಳಿದುಬಂದಿದೆ. ಗರ್ಭಪಾತದ ಔಷಧಿಯ ಅಡ್ಡ ಪರಿಣಾಮದಿಂದ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಸಾವನ್ನಪ್ಪಿದ್ದಾರೆ. ಇದೀಗ ತುಮಕೂರಿನ ನಗರ ಪೊಲೀಸ್ ಠಾಣೆಯಲ್ಲಿ ರಾಜೇಂದ್ರ ಕುಮಾರ್ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದ್ದು, ರಾಜೇಂದ್ರ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 302,201,504,506,34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೊಬೈಲ್ ನಿಂದ ಪತ್ತೆಯಾಯ್ತು ಯುವತಿಯ ಸಾವಿನ ರಹಸ್ಯ

ಪ್ರಕರಣ ನಡೆದು ವಾರದ ಬಳಿಕ ಯುವತಿಯ ಮೊಬೈಲ್ ಪರಿಶೀಲಿಸುವ ವೇಳೆ ರಾಜೇಂದ್ರ ಕುಮಾರ್ ಮುಖವಾಡ ಬಯಲಾಗಿದೆ. ರಾಜೇಂದ್ರಕುಮಾರ್ ಜೊತೆಗೆ ಮಾತನಾಡಿದ್ದ ಆಡಿಯೋ ರೆಕಾರ್ಡ್ ಹಾಗೂ ಪೋಟೋ, ವಿಡಿಯೋ ಪತ್ತೆ ಆಗಿದೆ. ಮಗಳ ಸಾವು ಕೊಲೆ ಎಂದು ಶಂಕಿಸಿ ತುಮಕೂರು ನಗರ ಪೊಲೀಸರಿಗೆ ತಾಯಿ ದೂರು ನೀಡಿದ್ದಾರೆ. ರಾಜೇಂದ್ರ ಕುಮಾರ್ ಅನ್ನು ವಶಕ್ಕೆ ಪಡೆದು ವಿಚಾರ ವೇಳೆ ಅತ್ಯಾಚಾರ ಹಾಗೂ ಕೊಲೆ ಎಸಗಿರುವುದು ಬೆಳಕಿಗೆ ಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ತುಮಕೂರು‌ನಗರ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ: ತುಮಕೂರು: ಮಧ್ಯಾಹ್ನ ಬಿಸಿಯೂಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಇದನ್ನೂ ಓದಿ: ತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೆ ಪರದಾಟ; ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ನರಳಾಟ

Published On - 1:58 pm, Wed, 9 March 22

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು