ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಆರೋಪಿ ವಶಕ್ಕೆ

ಗೃಹಸಚಿವ ಡಾ.ಜಿ.ಪರಮೇಶ್ವರ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಪೊಲೀಸರಿಗೆ ಪೊಲೀಸರೇ ರಕ್ಷಣೆ ಕೊಡುವ ಕಾಲ ಬಂದಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಮಹಿಳಾ ಪಿಎಸ್‌ಐ ಮೇಲೆಯೇ ಲೈಂಗಿಕ ಕಿರುಕುಳ ನೀಡಿ ಪ್ರಕರಣ ನಡೆದಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ತುಮಕೂರು: ಮಹಿಳಾ ಪಿಎಸ್‌ಐಗೆ ಲೈಂಗಿಕ ಕಿರುಕುಳ, ಆರೋಪಿ ವಶಕ್ಕೆ
ಸಾಂದರ್ಭಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ Edited By: Rakesh Nayak Manchi

Updated on: Oct 05, 2023 | 2:51 PM

ತುಮಕೂರು, ಅಕ್ಟೋಬರ್ 05: ಗೃಹಸಚಿವ ಡಾ.ಜಿ.ಪರಮೇಶ್ವರ ಅವರ ತವರು ಜಿಲ್ಲೆ ತುಮಕೂರಿನಲ್ಲಿ (Tumkur) ಪೊಲೀಸರಿಗೆ ಪೊಲೀಸರೇ ರಕ್ಷಣೆ ಕೊಡುವ ಕಾಲ ಬಂದಿದೆ. ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಮಹಿಳಾ ಪಿಎಸ್‌ಐ ಮೇಲೆಯೇ ಲೈಂಗಿಕ ಕಿರುಕುಳ ನೀಡಿ ಪ್ರಕರಣ ನಡೆದಿದ್ದು, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.

ನಾಗರಕಟ್ಟೆಯ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ಡಿಜೆ ವಾಹನದ ಬಳಿ ಮಹಿಳಾ ಪಿಎಸ್‌ಐ ಭದ್ರತಾ ಕರ್ತವ್ಯದಲ್ಲಿದ್ದರು. ಮೆರವಣಿಗೆಯು ಎಂಜಿ ರಸ್ತೆಯ ಮಹದೇವ ಸ್ಟೇಷನರಿ ಅಂಗಡಿ ಬಳಿ ತಲುಪುತ್ತಿದ್ದಂತೆ ಪಿಎಸ್​ಐಗೆ ಲೈಂಗಿಕ ಕಿರುಕುಳ ನೀಡಲಾಗಿದೆ.

ಇದನ್ನೂ ಓದಿ: ತುಮಕೂರು: ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಮಕ್ಕಳು, ಪತ್ನಿಯನ್ನು ಮನೆಯಿಂದ ಹೊರ ಹಾಕಿದ ಪತಿ

ಹನುಮಂತಪುರದ ದರ್ಶನ್ ಎಂಬಾತನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us