AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಡಿಯೂರಪ್ಪರನ್ನ ಕಣ್ಣೀರು ಹಾಕ್ಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ರು; ಬಿಜೆಪಿಗೆ ರಾಜಣ್ಣ ಟಾಂಗ್

ಎಲ್ಲಾ ವೈಮನಸ್ಸನ್ನ ಮರೆತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಪ್ರತಿಷ್ಟಾಪನೆ ಮಾಡಬೇಕಾಗಿದ್ದು, ನಾವೆಲ್ಲ ಒಂದಾಗಿ ಇಡೀ ಜಿಲ್ಲೆಯಲ್ಲಿನ 11 ಕ್ಷೇತ್ರವನ್ನ ಗೆಲ್ಲಿಸುವ ಕೆಲಸ ಮಾಡಬೇಕಾಗಿದೆ ಎಂದು ಮಾಜಿ ಶಾಸಕ ರಾಜಣ್ಣ ಹೇಳಿದರು.

ಯಡಿಯೂರಪ್ಪರನ್ನ ಕಣ್ಣೀರು ಹಾಕ್ಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ರು; ಬಿಜೆಪಿಗೆ ರಾಜಣ್ಣ ಟಾಂಗ್
ಮಾಜಿ ಶಾಸಕ ಕೆ.ಎನ್ ರಾಜಣ್ಣ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jan 24, 2023 | 3:37 PM

Share

ತುಮಕೂರು: ತಿಪಟೂರಿನಲ್ಲಿ ಬಹಳಷ್ಟು ವೀರಶೈವ ಲಿಂಗಾಯತ ಮತಗಳಿವೆ‌. ಷಡಕ್ಷರಿಗೆ ವೋಟ್ ಹಾಕಿದ್ರೆ ಒಬ್ಬ ಲಿಂಗಾಯತ ಎಂಎಲ್ಎ ಆಗ್ತಾನೆ. ಅದೇ ಬಿ.ಸಿ ನಾಗೇಶ್​ಗೆ ವೋಟ್ ಹಾಕಿದ್ರೆ ನಮ್ಮ ಸಮುದಾಯದವ್ರು ಮುಖ್ಯಮಂತ್ರಿ ಆಗುತ್ತಾರೆ ಅದಕ್ಕೂಸ್ಕರ ಈ ಹುಡುಗನನ್ನ ಗೆಲ್ಲಿಸಬೇಕು ಎಂದು ಹೇಳಿ ಹೋಗಿದ್ದರು. ಅದರಂತೆ ಯಡಿಯೂರಪ್ಪ ಮುಖ್ಯಮಂತ್ರಿ ಆದರೂ ಆದರೆ ಅವರನ್ನ ಬಿಜೆಪಿ ಕಣ್ಣೀರು ಹಾಕ್ಸಿ ಅವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ರು, ಹೀಗಾಗಿ ಇನ್ನುಮುಂದೆ ಬಿಜೆಪಿಯವ್ರು ಆ ಸಮುದಾಯದ ಬಳಿ ಹೇಗೆ ಮತ ಕೇಳ್ತಾರೆ ಗೊತ್ತಿಲ್ಲ ಎಂದು ಮಾಜಿ ಶಾಸಕ ರಾಜಣ್ಣ ಪ್ರಜಾಧ್ವನಿ ಸಮಾವೇಶದಲ್ಲಿ ಬಿಜೆಪಿಗೆ ಟಾಂಗ್​ ನೀಡಿದರು.

5 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸಿದ್ರು. ಮಣ್ಣಿನ ಮಕ್ಕಳ ಹೆಸರು ಹೇಳೋಕೆ ಎಲ್ಲರೂ ಹೆದರಿಕೊಳ್ತಾರೆ. ನಮ್ಮ ಜಯಚಂದ್ರ ಹೆದರೋರಲ್ಲ, ಆದ್ರೂ ಅವರು ಅವರ ಹೆಸರು ಎತ್ತಿಲ್ಲ. ಹೆಸರು ಹೇಳದೇ ಮಾಜಿ ಸಿಎಂ ಕುಮಾರಸ್ವಾಮಿ ಬಗ್ಗೆ ರಾಜಣ್ಣ ಮಾತಾಡಿದರು. ಇಡೀ ರಾಜ್ಯದಲ್ಲಿ ಅನ್ನಕ್ಕೋಸ್ಕರ ಭಿಕ್ಷೆ ಬೇಡೋದಾಗ್ಲಿ, ಹಸಿವಿನ ಬಗ್ಗೆ ಯೋಚನೆ ಮಾಡೋ ಪ್ರಮೇಯವಾಗಲಿ ಇಲ್ಲದೇ ಇರೋದಕ್ಕೆ ಕಾಂಗ್ರೆಸ್ ಸರ್ಕಾರ ಕೊಟ್ಟ ಕೊಡುಗೆಯೇ ಕಾರಣ. ನಾವೆಲ್ಲ ಒಂದಾಗಿ ಇಡೀ ಜಿಲ್ಲೆಯಲ್ಲಿ 11 ಕ್ಷೇತ್ರವನ್ನ ಗೆಲ್ಲಿಸುವ ಕೆಲಸ ಮಾಡ್ಬೇಕಿದೆ.

ಇದನ್ನೂ ಓದಿ:ಉಡುಪಿ: ಪ್ರಜಾಧ್ವನಿ ಯಾತ್ರೆಯಲ್ಲಿ ತಾಳ ಹಾಕುತ್ತಿದ್ದ ಸಿದ್ದುಗೆ ಡಿಕೆಶಿ ಕೈ ಹಿಡಿಯಿರಿ ಎಂದ ಸುರ್ಜೇವಾಲ

ಎಲ್ಲಾ ವೈಮನಸ್ಸನ್ನ ಮರೆತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಪ್ರತಿಷ್ಟಾಪನೆ ಮಾಡಬೇಕಾಗಿದೆ. ನಾವೆಲ್ಲರೂ ನಡ್ಡಾ ಅವರನ್ನ ಟೀಕೆ ಮಾಡ್ತೀವಿ. ಅವರದ್ದೇ ತವರಲ್ಲಿ ಗೆಲ್ಲೋಕಾಗಿಲ್ಲ ಅಂತಾ ಹೇಳ್ತಿವಿ. ಆದ್ರೆ ಈಗ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರು ನಮ್ಮವರೇ ಇದ್ದಾರೆ. ಹೀಗಾಗಿ ನಾವು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಗೆಲ್ಲಿಸುವ ಮೂಲಕ ಅವರಿಗೆ ಗೌರವ ತರಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್​ನ ಮುಖಂಡರು, ಪಕ್ಷದ ಕಾರ್ಯಕರ್ತರು ಇದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ