ಡಾಕ್ಟರ್ ಎಡವಟ್ಟು: ಯುವಕ ಬರ್ಬಾದ್, ನೊಂದ ಕುಟುಂಬಕ್ಕೆ ವೈದ್ಯನ ಧಮ್ಕಿ

ತುಮಕೂರು: ಆಸೆ ಬೆಟ್ಟದಷ್ಟು.. ಕನಸು ನೂರಾರು.. ಸಾಧಿಸಬೇಕು ಅನ್ನೋ ಹುಮ್ಮಸ್ಸು.. ಕುಟುಂಬ ಸಲಹಬೇಕು ಅನ್ನೋ ಛಲ. ಇಂಥಾ ಟೈಮಲ್ಲಿ ಏನೂ ಮಾಡೋಕಾಗ್ತಿಲ್ಲ. ಕೈ ನೋವು ಜೀವ ಹಿಂಡುತ್ತಿದೆ. ನಿತ್ಯ ಮನೆಯಲ್ಲೇ ನರಳಾಡುವಂತಾಗಿದೆ. ಇದಕ್ಕೆಲ್ಲ ಕಾರಣ ವೈದ್ಯರು ಮಾಡಿದ ಅದೊಂದು ಎಡವಟ್ಟು. ಡಾಕ್ಟರ್ ಎಡವಟ್ಟಿನಿಂದ ಯುವಕನ ಕೈ ಬರ್ಬಾದ್! ತುಮಕೂರು ನಗರದ ರಾಜೀವ್ ಗಾಂಧಿನಗರದ ನಿವಾಸಿ ವಸೀಂ ಪಾಷಾ ಒಂದು ವರ್ಷದ ಹಿಂದೆ ಬೈಕ್​ನಿಂದ ಬಿದ್ದಿದ್ದ. ತಕ್ಷಣ ಮಂಜುನಾಥ ನಗರದಲ್ಲಿರುವ ಸುಕೃತ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ಮಾಡಿದ ಡಾ. […]

ಡಾಕ್ಟರ್ ಎಡವಟ್ಟು: ಯುವಕ ಬರ್ಬಾದ್, ನೊಂದ ಕುಟುಂಬಕ್ಕೆ ವೈದ್ಯನ ಧಮ್ಕಿ
ಸಾಧು ಶ್ರೀನಾಥ್​

Updated on: Feb 17, 2020 | 11:51 AM

ತುಮಕೂರು: ಆಸೆ ಬೆಟ್ಟದಷ್ಟು.. ಕನಸು ನೂರಾರು.. ಸಾಧಿಸಬೇಕು ಅನ್ನೋ ಹುಮ್ಮಸ್ಸು.. ಕುಟುಂಬ ಸಲಹಬೇಕು ಅನ್ನೋ ಛಲ. ಇಂಥಾ ಟೈಮಲ್ಲಿ ಏನೂ ಮಾಡೋಕಾಗ್ತಿಲ್ಲ. ಕೈ ನೋವು ಜೀವ ಹಿಂಡುತ್ತಿದೆ. ನಿತ್ಯ ಮನೆಯಲ್ಲೇ ನರಳಾಡುವಂತಾಗಿದೆ. ಇದಕ್ಕೆಲ್ಲ ಕಾರಣ ವೈದ್ಯರು ಮಾಡಿದ ಅದೊಂದು ಎಡವಟ್ಟು.

ಡಾಕ್ಟರ್ ಎಡವಟ್ಟಿನಿಂದ ಯುವಕನ ಕೈ ಬರ್ಬಾದ್!
ತುಮಕೂರು ನಗರದ ರಾಜೀವ್ ಗಾಂಧಿನಗರದ ನಿವಾಸಿ ವಸೀಂ ಪಾಷಾ ಒಂದು ವರ್ಷದ ಹಿಂದೆ ಬೈಕ್​ನಿಂದ ಬಿದ್ದಿದ್ದ. ತಕ್ಷಣ ಮಂಜುನಾಥ ನಗರದಲ್ಲಿರುವ ಸುಕೃತ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ಮಾಡಿದ ಡಾ. ಶ್ರೀನಿವಾಸ್, ತಕ್ಷಣ ಈತನ ಕೈಯನ್ನ ಸರ್ಜರಿ ಮಾಡ್ಲೇಬೇಕು. ಇಲ್ಲಾಂದ್ರೆ ಪ್ರಾಬ್ಲಂ ಆಗುತ್ತೆ ಅಂತಾ ಹೇಳಿ ಆವತ್ತು ರಾತ್ರಿಯೇ 35 ಸಾವಿರ ರೂಪಾಯಿ ಪೀಕಿ ಸರ್ಜರಿಯನ್ನೂ ಮಾಡಿದ್ದ.

ಕೈ ಸರಿಹೋಯ್ತು ಅನ್ನೋವಾಗ್ಲೇ ವಸೀಂ ಕೈನಲ್ಲಿ ಪದೇಪದೇ ರಕ್ತಸ್ರಾವ ಆಗೋದು. ಕೀವು ಸೋರೋದು. ನೋವು ಕಾಣಿಸಿಕೊಳ್ಳಲು ಶುರುವಾಗಿತ್ತು. ಮತ್ತೆ ಹೀಗಾಗ್ತಿದೆ ಅಂತಾ ಡಾ.ಶ್ರೀವಾಸ್ ಬಳಿ ಹೋದಾಗ, ಏನೂ ಆಗಲ್ಲ. ಧೈರ್ಯವಾಗಿರು ಅಂತ ಸುಳ್ಳು ಹೇಳಿ ಕಳಿಸಿದ್ನಂತೆ. ಕೊನೆಗೊಂದಿನ ಕೈ ನೋವು ತಾಳಲಾರದೆ ವಸೀಂ ಡಾಕ್ಟರ್ ಬಳಿಗೆ ಬಂದಿದ್ದಾನೆ. ಆಗ ಇದನ್ನ ಇಲ್ಲಿ ವಾಸಿ ಮಾಡೋಕೆ ಸಾಧ್ಯವೇ ಇಲ್ಲ. ಬೇರೆ ಕಡೆ ಹೋಗು. ಬೇಕಾದ್ರೆ 5ಲಕ್ಷ ಹಣವನ್ನ ನಾನೇ ಕೊಡ್ತೀನಿ. ಯಾರಬಳಿಯೂ ಹೇಳ್ಬೇಡಿ ಅಂದಿದ್ದಾರೆ ಅಂತಾ ವಸೀಂ ಆರೋಪಿಸಿದ್ದಾರೆ.

ಮತ್ತೆ ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ವಸೀಂಗೆ ಡಾಕ್ಟರ್ ಮತ್ತೊಂದು ಶಾಕ್ ಕೊಟ್ಟಿದ್ದಾರೆ. ನಿಮಗೆ ಹಣವೂ ಕೊಡಲ್ಲ. ಏನೂ ಕೊಡಲ್ಲ ಅಂತೇಳಿದ್ದಾನೆ. ಅಲ್ದೆ, ಎಂಪಿ ಗೊತ್ತು ಎಂಎಲ್ಎ ಗೊತ್ತು ಅದೇನ್ ಮಾಡ್ತಿಯೋ ಮಾಡ್ಕೊಳಿ ಅಂತಾ ಆವಾಜ್ ಹಾಕಿದ್ದಾನಂತೆ. ಸದ್ಯ, ದಿಕ್ಕು ಕಾಣದ ಈ ಕುಟುಂಬ ನ್ಯಾಯಕ್ಕಾಗಿ ಮೊರೆಯಿಟ್ಟಿದೆ.

ಒಟ್ನಲ್ಲಿ, ಮೊಬೈಲ್ ರಿಪೇರಿ ಮಾಡಿಕೊಂಡು ಮನೆ ಬಾಡಿಗೆ ಕಟ್ಟಿಕೊಂಡು. ಅಮ್ಮ, ತಂಗಿ, ತಮ್ಮನನ್ನ ಸಾಕೋ ಜವಾಬ್ದಾರಿ ಹೊತ್ತಿದ್ದ. ಆದ್ರೆ, ವೈದ್ಯರೇ ಇಲ್ಲಿ ಅಮಾಯಕನ ಬದುಕಿಗೆ ಮುಳ್ಳಾಗಿದ್ದಾರೆ.

Published On - 8:02 am, Mon, 17 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us