AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಯ ಕಾಪಾಡಬೇಕಿದ್ದ ಇಲಾಖೆಯಲ್ಲೇ ಭ್ರಷ್ಟಚಾರ.. ಆರೋಪಿಯನ್ನ ಬಂಧಿಸದೆ ಪೊಲೀಸರ ನಿರ್ಲಕ್ಷ್ಯ

ಅಕ್ರಮಗಳನ್ನು ಬೇಧಿಸಿ ನ್ಯಾಯ ಕಾಪಾಡಬೇಕಿದ್ದ ಪೊಲೀಸ್‌ ಇಲಾಖೆಯಲ್ಲೇ ಭ್ರಷ್ಟಚಾರ ನಡೆದಿದೆ. ತುಮಕೂರು ಎಸ್ಪಿ ಕಚೇರಿಯ ಎಫ್​ಡಿಎ ಪೊಲೀಸ್ ಇಲಾಖೆಗೆ ಉಂಡೆನಾಮ ತಿಕ್ಕಿದ್ದಾರೆ. ಇಷ್ಟಾದ್ರೂ ಆಕೆಯನ್ನ ಬಂಧಿಸದ ಜಿಲ್ಲಾ ಪೊಲೀಸರ ನಿರ್ಲಕ್ಷ್ಯಕ್ಕೆ ತುಮಕೂರು ನ್ಯಾಯಾಲಯ ಛೀಮಾರಿ ಹಾಕಿದೆ.

ನ್ಯಾಯ ಕಾಪಾಡಬೇಕಿದ್ದ ಇಲಾಖೆಯಲ್ಲೇ ಭ್ರಷ್ಟಚಾರ.. ಆರೋಪಿಯನ್ನ ಬಂಧಿಸದೆ ಪೊಲೀಸರ ನಿರ್ಲಕ್ಷ್ಯ
ತುಮಕೂರು ನಗರ ಪೊಲೀಸ್‌ ಠಾಣೆ
ಆಯೇಷಾ ಬಾನು
|

Updated on: Jan 05, 2021 | 7:58 AM

Share

ತುಮಕೂರು ಪೊಲೀಸ್‌ ಸಿಬ್ಬಂದಿ ಪ್ರವಾಸ ಭತ್ಯೆಯಲ್ಲಿ ವಂಚನೆ ಮಾಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು 1 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.

ಅಲ್ದೆ, ಆರೋಪಿ ರಕ್ಷಣೆಗೆ ಪೊಲೀಸ್ ಇಲಾಖೆ ನಿಂತಿರೋದು ಬೆಳಕಿಗೆ ಬಂದಿದೆ‌. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಎಫ್​ಡಿಎ ಎಸ್.ಟಿ.ಯಶಸ್ವಿನಿ, 2020ರ ಜನವರಿಯಲ್ಲಿ ತುಮಕೂರು ಖಜಾನೆಗೆ ಹೆಚ್ಚುವರಿ ಪೊಲೀಸ್ ಭತ್ಯೆ ಬಿಲ್ ಸಲ್ಲಿಸಿ 20 ಲಕ್ಷದ 50 ಸಾವಿರ ರೂಪಾಯಿ ವಂಚಿಸಿದ್ರು. ಕಳೆದ ಎರಡೂವರೆ ವರ್ಷಗಳಿಂದ ಈ ವಂಚನೆ ನಡೆದಿರೋದು ಬೆಳಕಿಗೆ ಬಂದಿತ್ತು.

ಆರೋಪಿಯನ್ನ ಬಂಧಿಸದೆ ಪೊಲೀಸರ ನಿರ್ಲಕ್ಷ್ಯ ಈ ಆರೋಪದ ಕುರಿತು ಹೊಸ ಬಡಾವಣೆ ಠಾಣೆಯಲ್ಲಿ 5 ತಿಂಗಳ ಹಿಂದೆ ಮೊಕದ್ದಮೆ ದಾಖಲಾಗಿತ್ತು. ಅಂದಿನಿಂದ ತಲೆಮರೆಸಿಕೊಂಡಿರೋ ಯಶಸ್ವಿನಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಅರ್ಜಿ ತಿರಸ್ಕರಿಸಿದೆ. ಆದ್ರೂ, ಈವರೆಗೆ ಆರೋಪಿಯನ್ನ ಬಂಧಿಸದ ಪೊಲೀಸರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಿಡಿದೆ.

ಎಸ್​ಪಿ ಕಚೇರಿಯಲ್ಲಿ ಅಕ್ರಮ ನಡೆಸಿದವರನ್ನೆ ಬಂಧಿಸದಿದ್ದರೆ, ಜನ ಸಾಮಾನ್ಯರಿಗೆ ಹೇಗೆ ರಕ್ಷಣೆ ಕೊಡ್ತೀರಿ ಅಂತಾ ನ್ಯಾಯಾಲಯ ಪ್ರಶ್ನಿಸಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿ ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆಯಿದೆ. ತನಿಖಾ ಹಂತದಲ್ಲೇ ಜಾಮೀನು ನೀಡಿದರೆ ತನಿಖೆಗೆ ಸಹಕಾರ ನೀಡಲ್ಲ. ಹೀಗಾಗಿ ಆರೋಪಿಯನ್ನ ಶೀಘ್ರ ಬಂಧಿಸಲು ಆದೇಶಿಸಿದೆ. ಸದ್ಯ ಪೊಲೀಸರು ಯಶಸ್ವಿನಿಯನ್ನ ಹುಡುಕಲು ಯತ್ನಿಸುತ್ತಿದ್ದಾರೆ. ಇದರ ನಡುವೆ ತುಮಕೂರಿನಲ್ಲಿ ಹಾಡಹಗಲೇ ಕಳ್ಳನೊಬ್ಬ ಹಣದ ಬ್ಯಾಗ್​ಗಳನ್ನ ಕದ್ದೊಯ್ಯುತ್ತಿರೋದು ಪೊಲೀಸರಿಗೆ ತಲೆನೋವಾಗಿದೆ.

ಎಸ್​ಪಿ ಕಚೇರಿಯಲ್ಲಿ ನಡೆದಿರೋ ಪೊಲೀಸರ ಪ್ರವಾಸಿ ಭತ್ಯೆಯ ಬಿಲ್ ತಯಾರಿಕೆಗೆ ಇತರ ಅಧಿಕಾರಿಗಳ ಸಹಕಾರವಿದೆ ಅನ್ನೋ ಸಂಶಯ ದಟ್ಟವಾಗಿದೆ. ಪ್ರಕರಣ ಮಾಧ್ಯಮಗಳಿಗೆ ಗೊತ್ತಾಗದಂತೆ ಪೊಲೀಸರು ಸಾಕಷ್ಟು ಜಾಗ್ರತೆ ವಹಿಸಿರೋದು ಕೂಡ ಕಂಡುಬಂದಿದೆ. ಹೀಗಾಗಿ ಪೊಲೀಸ್ ಇಲಾಖೆ ಕುರಿತು ಜನರಿಗೆ ಅನುಮಾನಗಳು ಶುರುವಾಗಿರೋದು ಮಾತ್ರ ಸುಳ್ಳಲ್ಲ.

ಮುಂಬೈ ಡ್ರಗ್ಸ್ ಮಾಫಿಯಾ ಕೇಸ್: ನಟಿಯೊಬ್ಬರನ್ನ ಬಂಧಿಸಿದ NCB

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!