AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಡ್ಯಾಂ: ಇಂದು ಸಂಜೆ ತಾತ್ಕಾಲಿಕ ಗೇಟ್​​​​ ಅಳವಡಿಕೆ, ನೀರು ಪೋಲು ತಡೆಗೆ ಕ್ರಮ

ತುಂಗಭದ್ರಾ ಡ್ಯಾಂ ಗೇಟ್ ತುಂಡಾಗಿ ನೀರು ಪೋಲಾಗುತ್ತಿರುವುದು ರೈತರು, ಅಧಿಕಾರಿಗಳು ಸೇರಿದಂತೆ ಎಲ್ಲರನ್ನೂ ಚಿಂತೆಗೀಡುಮಾಡಿದೆ. ಈ ಮಧ್ಯೆ, ನೀರು ಪೋಲಾಗದಂತೆ ಹೇಗಾದರೂ ಮಾಡಿ ತಡೆಯಲು ಶತಾಯಗತಾಯ ಯತ್ನ ನಡೆಯುತ್ತಿದ್ದು, ತಾತ್ಕಾಲಿಕ ಗೇಟ್ ತಯಾರಿ ಭರದಿಂದ ಸಾಗಿದೆ. ಇಂದು ಸಂಜೆ ವೇಳೆಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ನಡೆಯಲಿದೆ.

ತುಂಗಭದ್ರಾ ಡ್ಯಾಂ: ಇಂದು ಸಂಜೆ ತಾತ್ಕಾಲಿಕ ಗೇಟ್​​​​ ಅಳವಡಿಕೆ, ನೀರು ಪೋಲು ತಡೆಗೆ ಕ್ರಮ
ತುಂಗಭದ್ರಾ ಡ್ಯಾಂ
ಸಂಜಯ್ಯಾ ಚಿಕ್ಕಮಠ
| Updated By: ಆಯೇಷಾ ಬಾನು|

Updated on:Aug 13, 2024 | 8:41 AM

Share

ಕೊಪ್ಪಳ, ಆಗಸ್ಟ್ 23: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್​ಗೇಟ್ ತುಂಡಾಗಿ ನೀರುಪೋಲಾಗುತ್ತಿರುವ ಕಾರಣ ಸದ್ಯ ತಾತ್ಕಾಲಿಕ ಗೇಟ್ ಅಳವಡಿಕೆಗೆ ತುಂಗಭದ್ರಾ ಡ್ಯಾಮ್​​​​ ಮಂಡಳಿ ನಿರ್ಧಾರ ಕೈಗೊಂಡಿದೆ. 19ನೇ ಕ್ರಸ್ಟ್ ಗೇಟ್​ಗೆ ತಾತ್ಕಾಲಿಕ ಗೇಟ್​​​​ ಅಳವಡಿಕೆ ಕಾರ್ಯ ಇಂದು (ಮಂಗಳವಾರ) ಸಂಜೆಯಿಂದ ಆರಂಭವಾಗಲಿದೆ. ಜಲಾಯಶಯದ ನೀರು ಖಾಲಿಯಾಗುವ ಮೊದಲೇ ತಾತ್ಕಾಲಿಕ ಗೇಟ್​ ಅಳವಡಿಕೆಗೆ ಯತ್ನಿಸಲಾಗುತ್ತಿದೆ. ನೀರಿನಲ್ಲೇ ಗೇಟ್​​ ಇಳಿಸಿ ತಾತ್ಕಾಲಿಕ ಗೇಟ್ ಅಳವಡಿಕೆಗೆ ತಜ್ಞರ ತಂಡ ಪ್ರಯತ್ನಿಸಲಿದೆ. ತಾತ್ಕಾಲಿಕ ಹೊಸ ಗೇಟ್ ಹೊಸಪೇಟೆ ಮತ್ತು ಹೊಸಳ್ಳಿಯಲ್ಲಿ ತಯಾರಾಗಿದೆ. ​​​​ ನಾರಾಯಣ ಇಂಜಿನಿಯರ್ಸ್​, ಹಿಂದೂಸ್ತಾನ್ ಇಂಜಿನಿಯರ್ಸ್​, ಜಿಂದಾಲ್​ ತಂತ್ರಜ್ಞರ ತಂಡದಿಂದ ಗೇಟ್ ಅಳವಡಿಕೆ ಕೆಲಸ ನಡೆಯಲಿದೆ. ಗೇಟ್​ ಅಳವಡಿಕೆ ಯಶಸ್ವಿಯಾದರೆ ಅಪಾರ ಪ್ರಮಾಣದ ನೀರು ಉಳಿಯಲಿದೆ. ಹೀಗಾಗಿ ತಾತ್ಕಾಲಿಕ ಹೊಸ ಗೇಟ್​ ಅಳವಡಿಕೆಗೆ ಡ್ಯಾಮ್​ ಮಂಡಳಿ ಮುಂದಾಗಿದೆ.

ಎರಡು ದಿನಗಳಲ್ಲಿ 14 ಟಿಎಂಸಿ ನೀರು ಪೋಲು

ಕೊಪ್ಪಳ ತಾಲೂಕಿನ ಮುಶಿರಾಬಾದ್​​ ಬಳಿಯಿರುವ ತುಂಗಭದ್ರಾ ಡ್ಯಾಮ್​ನ 19ನೇ ಕ್ರಸ್ಟ್ ಗೇಟ್ ತುಂಡಾಗಿ ಎರಡು ದಿನದಲ್ಲಿ 14 ಟಿಎಂಸಿ ನೀರು ಹೊರಕ್ಕೆ ಹರಿದುಹೋಗಿದೆ. ಆಗಸ್ಟ್ 10ರಂದು ಡ್ಯಾಮ್​ನಲ್ಲಿ ಬರೋಬ್ಬರಿ 105 ಟಿಎಂಸಿ ನೀರು ಸಂಗ್ರಹವಿತ್ತು. ಈ ಜಲಾಶಯ 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಸದ್ಯ ಡ್ಯಾಂನಲ್ಲಿ 91.979 ಟಿಎಂಸಿ ನೀರು ಸಂಗ್ರಹ ಇದೆ.

ಟಿಬಿ ಡ್ಯಾಮ್​​ನಲ್ಲಿ ಸದ್ಯ 36 ಸಾವಿರ ಕ್ಯೂಸೆಕ್ ನೀರು ಒಳ ಹರಿವು ಇದೆ. ಡ್ಯಾಮ್​ನಿಂದ ನದಿಗೆ 1.14 ಲಕ್ಷ ಕ್ಯೂಸೆಕ್ ನೀರಿನ ಹೊರ ಹರಿವು ಇದೆ. ಕೆನಲ್​​ಗಳಿಗೆ 10 ಸಾವಿರ ಕ್ಯೂಸೆಕ್​​ ನೀರು ಬಿಟ್ಟಿರುವ ಮಾಹಿತಿಯನ್ನು ಜಲಾಶಯ ಮಂಡಳಿ ನೀಡಿದೆ.

ಇದನ್ನೂ ಓದಿ: ತುಂಗಭದ್ರಾ ಡ್ಯಾಂನಲ್ಲಿ 50 ಟಿಎಂಸಿ ನೀರು ಉಳಿಸಿಕೊಳ್ಳಲು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಸೂಚನೆ

ಇಂದು ಸಿಎಂ ಸಿದ್ದರಾಮಯ್ಯ ಭೇಟಿ

ಇಂದು ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ನಿಗದಿಯಂತೆ ಸಿಎಂ ಟಿಬಿ ಡ್ಯಾಮ್​ಗೆ ಬಾಗಿನ ಅರ್ಪಿಸಬೇಕಿತ್ತು. ಆದರೆ ಟಿಬಿ ಡ್ಯಾಮ್ ಪರಿಶೀಲನೆಗೆ ಆಗಮಿಸಲಿದ್ದಾರೆ. ಕೊಪ್ಪಳ ತಾಲೂಕಿನ ಗಿಣಗೇರಾ ಏರ್​​ಸ್ಟ್ರಿಪ್​​​​​ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಆಗಮಿಸುವ ಸಿಎಂ, ಮಧ್ಯಾಹ್ನ 12.30ಕ್ಕೆ ಟಿಬಿ ಡ್ಯಾಮ್​ಗೆ ಭೇಟಿ ನೀಡಲಿದ್ದಾರೆ. ಡ್ಯಾಮ್​ ಪರಿಶೀಲನೆ ಬಳಿಕ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 am, Tue, 13 August 24

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು