AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಗಭದ್ರಾ ಡ್ಯಾಂ ನೀರು ಉಳಿಸಲು ಸಾಹಸ, ಭೋರ್ಗರೆಯುವ ನೀರಿನಲ್ಲೇ ಗೇಟ್‌ ಅಳವಡಿಸಲು ಸಿದ್ಧವಾಗಿದೆ ಮಾಸ್ಟರ್ ಪ್ಲ್ಯಾನ್

ತುಂಗಭದ್ರಾ ಡ್ಯಾಂನ ಗೇಟ್ ಮುರಿದು ಇವತ್ತಿಗೆ 4 ದಿನವಾಯಿತು. ಜೀವನಾಡಿ ಟಿಬಿ ಡ್ಯಾಂ ನೀರಿನ ಮಟ್ಟ ಇಳಿಯುತ್ತಿದೆ. ಕ್ರಸ್ಟ್ ಗೇಟ್ ಮುರಿದಿದ್ದರಿಂದ ಹೆಚ್ಚು ಕಮ್ಮಿ 21 ಟಿಎಂಸಿ ನೀರು ಹರಿದು ಹೋಗಿದೆ. ತುಂಗಭದ್ರೆಯ ಒಡಲು ಕಾಪಾಡಲು ಸಾಹಸವೇ ನಡೆಯುತ್ತಿದೆ. ಭೋರ್ಗೆದು ಹರಿಯುತ್ತಿರುವ ನೀರಿನಲ್ಲೇ ತಾತ್ಕಾಲಿಕ ಗೇಟ್ ಅಳವಡಿಕೆಗೆ ಸಾಹಸ ನಡೆಯಲಿದೆ.

ತುಂಗಭದ್ರಾ ಡ್ಯಾಂ ನೀರು ಉಳಿಸಲು ಸಾಹಸ, ಭೋರ್ಗರೆಯುವ ನೀರಿನಲ್ಲೇ ಗೇಟ್‌ ಅಳವಡಿಸಲು ಸಿದ್ಧವಾಗಿದೆ ಮಾಸ್ಟರ್ ಪ್ಲ್ಯಾನ್
ತುಂಗಭದ್ರಾ ಡ್ಯಾಂ
ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 14, 2024 | 6:57 AM

Share

ಕೊಪ್ಪಳ / ಬಳ್ಳಾರಿ, ಆಗಸ್ಟ್ 14: ತುಂಗಭದ್ರಾ ಡ್ಯಾಂ ಕಲ್ಯಾಣ ಕರ್ನಾಟಕ ಜನರಿಗೆ ಜೀವಜಲದ ಪ್ರಮುಖ ಸೆಲೆ. ಡ್ಯಾಂನ 19ನೇ ಗೇಟ್ ಮುರಿದು 4 ದಿನಗಳು ಕಳೆದಿವೆ. ಅನಿವಾರ್ಯವಾಗಿ ಡ್ಯಾಂನ 29 ಗೇಟ್​​ಗಳಿಂದ ನೀರನ್ನು ಹೊರಬಿಡಲಾಗುತ್ತಿದೆ. ಇದರಿಂದ ಹೆಚ್ಚು ಕಮ್ಮಿ 21 ಟಿಎಂಸಿಯಷ್ಟು ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಭೋರ್ಗರೆಯುವ ನೀರನ್ನು ತಡೆದು ಗೇಟ್ ಅಳವಡಿಸುವುದೇ ದೊಡ್ಡ ಸವಾಲಾಗಿದೆ. ಏನಾದರೂ ಮಾಡಿ ಹರಿಯುವ ನೀರಿಗೆ ತಾತ್ಕಾಲಿಕ ಬ್ರೇಕ್ ಹಾಕಲು ತಂತ್ರಜ್ಞರು ಮುಂದಾಗಿದ್ದಾರೆ. ಇದಕ್ಕಾಗಿ ತಾತ್ಕಾಲಿಕ ಗೇಟ್ ರೆಡಿಯಾಗುತ್ತಿದ್ದು, ಇಂದಿನಿಂದಲೇ ತಾತ್ಕಾಲಿಕ ಗೇಟ್ ಅಳವಡಿಕೆ ಆರಂಭವಾಗಲಿದೆ. 2 ಕ್ರೇನ್‌ಗಳ ಮೂಲಕ ಗೇಟ್ ಅಳವಡಿಕೆ ಕಾರ್ಯ ನಡೆಯಲಿದೆ.

ಗೇಟ್ ಅಳವಡಿಕೆ ಪ್ಲ್ಯಾನ್ 1

ಗೇಟ್ ಅಳವಡಿಕೆ ಪ್ಲ್ಯಾನ್ 1 ಪ್ರಕಾರ, 60 ಅಡಿ ಉದ್ದದ ಗೇಟನ್ನ 12 ಪ್ಲೇಟ್‌ ಮಾಡಲಾಗಿದೆ. ಭೋರ್ಗರೆದು ಹರಿಯುವ ನೀರಿನಲ್ಲೇ 5 ಪ್ಲೇಟ್ ಇಳಿಸಲಾಗುತ್ತದೆ. ಆಪರೇಷನ್‌ ಸಕ್ಸಸ್‌ ಆದ್ರೆ ಉಳಿದ ಪ್ಲೇಟ್ ಅಳವಡಿಕೆ ಮಾಡಲಾಗುತ್ತದೆ. ಆ ಮೂಲಕ ಡ್ಯಾಂನಲ್ಲಿ ನೀರು ಇರೋವಾಗ್ಲೇ ಕಂಟ್ರೋಲ್‌ ಮಾಡಲಾಗುತ್ತದೆ. ಒಂದು ವೇಳೆ ನೀರಿನ ರಭಸಕ್ಕೆ ಪ್ಲೇಟ್‌ಗಳು ಕೊಚ್ಚಿ ಹೋದ್ರೆ ಪ್ಲ್ಯಾನ್‌-1 ಆಪರೇಷನ್‌ ಬಂದ್‌ ಆಗಲಿದೆ.

ಗೇಟ್ ಅಳವಡಿಕೆ ಪ್ಲ್ಯಾನ್ 2

ಗೇಟ್ ಅಳವಡಿಕೆ ಪ್ಲ್ಯಾನ್‌ 2 ಪ್ರಕಾರ, ಡ್ಯಾಂನಲ್ಲಿನ 65 ಟಿಎಂಸಿ ನೀರು ಖಾಲಿ ಮಾಡಲಾಗುತ್ತದೆ. ಡ್ಯಾಂನ ನೀರು 40 ಟಿಎಂಸಿಗೆ ಇಳಿಸಲಾಗುತ್ತೆ. ನೀರಿನ ರಭಸ ನಿಲ್ಲುತ್ತಿದ್ದಂತೆಯೇ ಕಾರ್ಯಾಚರಣೆ ಶುರುವಾಗುತ್ತದೆ. ಆಗ ಶಾಶ್ವತವಾಗಿ ಕ್ರಸ್ಟ್‌ ಗೇಟ್ ಅಳವಡಿಸುತ್ತಾರೆ. ವಿಷಯ ಏನೆಂದರೆ, 2ನೇ ಕಾರ್ಯಾಚರಣೆ ಆರಂಭ ಮಾಡಬೇಕು ಎಂದರೆ ಇನ್ನೂ ಮೂರು ದಿನ ಕಾಯಲೇ ಬೇಕು.

ಕೊಚ್ಚಿ ಹೋದ 19ನೇ ಕ್ರಸ್ಟ್ ಗೇಟ್ ವೀಕ್ಷಿಸಿದ ಸಿಎಂ

Tungabhadra Dam: master plan is ready to install a gate in the overflowing water, Kannada news

ಸಿಎಂ ಸಿದ್ದರಾಮಯ್ಯರಿಂದ ತುಂಗಭದ್ರಾ ಡ್ಯಾಂ ವೀಕ್ಷಣೆ

ತುಂಗಭದ್ರಾ ಡ್ಯಾಂ ವೀಕ್ಷಣೆಗೆ ಮಂಗಳವಾರ ಸಿಎಂ ಸಿದ್ದರಾಮಯ್ಯ ಆಗಮಿಸಿ, ಮುರಿದು ಹೋದ ಗೇಟ್ ವೀಕ್ಷಿಸಿದ್ರು. ನೀರು ಉಳಿಸಲು ನಡೆಯುತ್ತಿರುವ ಕಾರ್ಯದ ಬಗ್ಗೆ ತಜ್ಞರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಸಿಎಂ, ನಾಲ್ಕೈದು ದಿನಗಳಲ್ಲಿ ರೆಡಿಯಾಗಲಿದೆ. ಆತಂಕ ಬೇಡ ಎಂದು ಭರವಸೆ ನೀಡಿದರು.

ಇದನ್ನೂ ಓದಿ: ತುಂಗಭದ್ರಾ ಜಲಾಶಯದ ಆಯುಷ್ಯ ಮುಗಿದಿದೆ: ಜಲತಜ್ಞರು ನೀಡಿದ ಅಚ್ಚರಿಯ ಮಾಹಿತಿ ಇಲ್ಲಿದೆ

ಈ ಮಧ್ಯೆ ಡ್ಯಾಂ ವಿಚಾರವೂ ರಾಜಕೀಯ ಬಣ್ಣ ಪಡೆದಿದೆ. ಡ್ಯಾಂ ನಿರ್ವಹಣೆ ಅನುಮಾನ ವ್ಯಕ್ತಪಡಿಸಿರೋ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ತನಿಖೆಗೆ ಆಗ್ರಹಿಸಿದ್ದರೆ, ಜಲಸಂಪನ್ಮೂಲ ಸಚಿವರು ಬರೀ ಸಂಪನ್ಮೂಲದ ಬಗ್ಗೆಯೇ ಹೆಚ್ಚು ತಲೆಕೆಡಿಸಿಕೊಂಡಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕುಟುಕಿದ್ದಾರೆ.

ಒಟ್ಟಿನಲ್ಲಿ ಇಂದಿನಿಂದ ಟಿಬಿ ಡ್ಯಾಂನಲ್ಲಿ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಶುರುವಾಗಲಿದ್ದು, ಭಾನುವಾರದ ವೇಳೆಗೆ ಗೇಟ್ ಅಳವಡಿಕೆ ಮುಗಿಯಬಹುದು ಎಂದು ನಿರೀಕ್ಷಿಸಲಾಗಿದೆ.

ಬಳ್ಳಾರಿಯಿಂದ ವಿನಾಯಕ್‌ ಬಡಿಗೇರ್‌ ಜತೆ ಸಂಜಯ್‌ ‘ಟಿವಿ9’ ಕೊಪ್ಪಳ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ