AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

105 TMC ಸಾಮರ್ಥ್ಯದ ಟಿಬಿ ಡ್ಯಾಂನಲ್ಲಿ 80 ಟಿಎಂಸಿ ಮಾತ್ರ ನೀರು ಸಂಗ್ರಹ: ಕಾರಣವೇನು? ಇಲ್ಲಿದೆ ವಿವರ

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ತುಂಗಭದ್ರಾ ಜಲಾಶಯ 105 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಆದರೂ ಕೂಡ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಉಳಿದ 25 ಟಿಎಂಸಿ ನೀರನ್ನು ಸಂಗ್ರಹಿಸದಿರುವ ಬಗ್ಗೆ ಪ್ರಶ್ನಿಸುತ್ತಿದ್ದಾರೆ.

105 TMC ಸಾಮರ್ಥ್ಯದ ಟಿಬಿ ಡ್ಯಾಂನಲ್ಲಿ 80 ಟಿಎಂಸಿ ಮಾತ್ರ ನೀರು ಸಂಗ್ರಹ: ಕಾರಣವೇನು? ಇಲ್ಲಿದೆ ವಿವರ
ತುಂಗಭದ್ರಾ ಜಲಾಶಯ
ವಿನಾಯಕ ಬಡಿಗೇರ್​
| Edited By: |

Updated on:Jul 07, 2025 | 11:04 AM

Share

ಬಳ್ಳಾರಿ, ಜುಲೈ 07: ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಜೀವನಾಡಿ ಆಗಿರುವ ಕೊಪ್ಪಳ (Koppal) ತಾಲೂಕಿನ ಮುನಿರಾಬಾದ ಬಳಿಯಿರುವ ತುಂಗಭದ್ರಾ ಜಲಾಶಯ (Tungabhadra Dam) ಭರ್ತಿ ಹಂತಕ್ಕೆ ಬಂದಿದೆ. 105 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 80 ಟಿಎಂಸಿ ಮಾತ್ರ ನೀರು ಸಂಗ್ರಹಿಸಲಾಗಿದೆ. ಟಿ.ಬಿ ಬೋರ್ಡ್​ ಬಾಕಿ 25 ಟಿಎಂಸಿ ನೀರನ್ನು ಏಕೆ ಸಂಗ್ರಹಿಸುತ್ತಿಲ್ಲ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇದಕ್ಕೆ ಉತ್ತರ ಇಲ್ಲಿದೆ.

2024 ರ ಆಗಸ್ಟ್ 10 ರಂದು ರಾತ್ರಿ ಡ್ಯಾಂನ 19 ನೇ ಕ್ರೆಸ್ಟ್​ ಗೇಟ್ ಕೊಚ್ಚಿಕೊಂಡು ಹೋಗಿತ್ತು. ಹೀಗಾಗಿ, ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹೋಗಿತ್ತು. ಕ್ರೆಸ್ಟ್ ಗೇಟ್ ಸಂಖ್ಯೆ 19ಕ್ಕೆ ಐದು ಸ್ಟಾಪ್‌ಲಾಗ್‌ಗಳನ್ನು ಯಶಸ್ವಿಯಾಗಿ ಅಳವಡಿಸಿದ್ದರು. ಕ್ರೆಸ್ಟ್ ​ಗೇಟ್ ​ದುರಸ್ಥಿ ನಂತರ ರಾಜ್ಯ ಸರ್ಕಾರ ಜಲಾಶಯದ ಎಲ್ಲ ಕ್ರೆಸ್ಟ್​ ಗೇಟ್​ಗಳನ್ನು ಬದಲಾಯಿಸುವುದಾಗಿ ಹೇಳಿತ್ತು. ತಾಂತ್ರಿಕ ತಜ್ಞರ ತಂಡ ಕೂಡ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಡ್ಯಾಂ ಕಾರ್ಯದರ್ಶಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು 2024ರ ನವೆಂಬರ್ ಮೊದಲ ವಾರದಲ್ಲಿ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

70 ವರ್ಷ ಹಳೆಯದಾದ 33 ಕ್ರೆಸ್ಟ್ ಗೇಟ್‌ಗಳು ಇನ್ನೂವರೆಗೂ ಹಾಗೆ ಇವೆ. ಯಾವುದೇ ಜಲಾಯಶದ ಕ್ರೆಸ್ಟ್ ​ಗೇಟ್ ​ಮತ್ತು ಚೈನ್​ಲಿಂಕ್​ ಅನ್ನು 50 ವರ್ಷಕ್ಕೊಮ್ಮೆ ಬದಲಾಯಿಸಬೇಕು ಎಂದು ತಜ್ಞರು ಹೇಳಿದ್ದರು. ಆದರೆ, ಇನ್ನೂವರೆಗೂ ಜಲಾಶಯದ 33 ಕ್ರೆಸ್ಟ್ ಗೇಟ್‌ಗಳನ್ನು ಬದಲಾಯಿಸಿಲ್ಲ. ಮತ್ತು ಕ್ರೆಸ್ಟ್ ಗೇಟ್‌ ನಂಬರ್​ 19ಕ್ಕೆ ಮತ್ತೆ ಸಮಸ್ಯೆಯಾಗಬಾರದೆಂದು ಕೇವಲ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹಿಸಲು ನಿರ್ಧರಿಸಲಾಗಿದೆ. ಸದ್ಯ ಜಲಾಶಯದಲ್ಲಿ 77 ಟಿಎಂಸಿ ನೀರು ಸಂಗ್ರಹವಾಗಿದೆ. ಜಾಲಾಶಯದ 19 ಕ್ರೆಸ್ಟ್ ಗೇಟ್​ಗಳ ಮೂಲಕ 62,000 ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ.

ಇದನ್ನೂ ಓದಿ
Image
ನಿರ್ಬಂಧ ಉಲ್ಲಂಘಿಸಿ TB ಡ್ಯಾಂ ಆವರಣದಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ
Image
ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ನಂತರ 7 ಟಿಎಂಸಿಗೂ ಹೆಚ್ಚು ನೀರು ಸಂಗ್ರಹ
Image
ತುಂಗಭದ್ರಾ ಜಲಾಶಯದ ಆಯುಷ್ಯ ಮುಗಿದಿದೆ: ಜಲತಜ್ಞರು ನೀಡಿದ ಮಾಹಿತಿ ಇಲ್ಲಿದೆ
Image
ತುಂಗಭದ್ರಾ ಡ್ಯಾಂ ಗೇಟ್​ನ ಚೈನ್​ ಕಟ್​: ದುರಸ್ತಿ ಕಾರ್ಯಕ್ಕೆ ಬೇಕು 1 ವಾರ!

ಇದನ್ನೂ ಓದಿ: ತುಂಗಭದ್ರಾ ಆಯ್ತು, ಅಪಾಯದಲ್ಲಿದೆ ರಾಜ್ಯದ ಮತ್ತೊಂದು ಪ್ರಮುಖ ಡ್ಯಾಂ

ರಾಜ್ಯ ಸರ್ಕಾರ ಇನ್ನಾದರೂ ತುಂಗಭದ್ರಾ ಜಲಾಶಯದ 33 ಕ್ರೆಸ್ಟ್​ ಗೇಟ್​ಗಳನ್ನು ಬದಲಾಯಿಸಿ, ಹೊಸ ಕ್ರೆಸ್ಟ್​ ಗೇಟ್​ಗಳನ್ನು ಅಳವಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Mon, 7 July 25

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?