AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turkey Earthquake; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ನೋಡಲ್ ಅಧಿಕಾರಿ ನೇಮಕ, ಹೆಲ್ಪ್​ಲೈನ್ ವ್ಯವಸ್ಥೆ

Helpline Number: ಟರ್ಕಿಯಲ್ಲಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿ ನೇಮಿಸಲಾಗಿದೆ. ಹಾಗೆಯೇ 080-22340676 ಹೆಲ್ಪ್​ಲೈನ್ ನಂಬರ್ ಒದಗಿಸಲಾಗಿದೆ.

Turkey Earthquake; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದಿಂದ ನೋಡಲ್ ಅಧಿಕಾರಿ ನೇಮಕ, ಹೆಲ್ಪ್​ಲೈನ್ ವ್ಯವಸ್ಥೆ
ಟರ್ಕಿ ಭೂಕಂಪ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:Feb 09, 2023 | 9:08 AM

ಬೆಂಗಳೂರು: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೀಕರ ಭೂಕಂಪಕ್ಕೆ (Turkey Earthquake) ಸಾವಿರಾರು ಮಂದಿ ಅಸುನೀಗಿದ್ದಾರೆ. ಟರ್ಕಿಯಲ್ಲಿ 3 ಸಾವಿರ ಭಾರತೀಯರಿದ್ದು, ಅವರ ಪೈಕಿ ನೂರಾರು ಮಂದಿ ಕನ್ನಡಿಗರೂ ಇದ್ದಾರೆನ್ನಲಾಗಿದೆ. ಇವರ ಸುರಕ್ಷತೆಗೆ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು (Nodal Officer) ನೇಮಕ ಮಾಡಲಾಗಿದ್ದು, ಸಹಾಯವಾಣಿಯನ್ನೂ (Helpline Number) ಆರಂಭಿಸಲಾಗಿದೆ.

ದೆಹಲಿ ಕರ್ನಾಟಕ ಭವನ ಸ್ಥಾನಿಕ ಆಯುಕ್ತ ಹಾಗೂ ಐಎಎಸ್ ಅಧಿಕಾರಿ ಎಮ್ಕೊಂಗ್ಲಾ ಜಮೀರ್ ಅವರು ನೋಡಲ್ ಅಧಿಕಾರಿ ಆಗಿರಲಿದ್ದಾರೆ. 080-22340676 ಈ ಹೆಲ್ಪ್​ಲೈನ್ ನಂಬರ್ ಅನ್ನು ನೀಡಲಾಗಿದೆ. ಟರ್ಕಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದ್ದು, ಕನ್ನಡಿಗರು ಸುರಕ್ಷಿತವಾಗಿರುವುದನ್ನು ಖಚಿಪಡಿಸಲು ಎಲ್ಲಾ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ.

ಟರ್ಕಿ ಭೂಕಂಪ: ಕನ್ನಡಿಗರ ರಕ್ಷಣೆಗೆ ಕ್ರಮ

ನೋಡಲ್ ಅಧಿಕಾರಿ: ಎಮ್ಕೊಂಗ್ಲಾ ಜಮೀರ್ (ಐಎಎಸ್)

ಸಹಾಯವಾಣಿ ನಂಬರ್: 080-22340676

ಇದನ್ನೂ ಓದಿ: Turkey Earthquake: ಟರ್ಕಿಯಲ್ಲಿ ಬೆಂಗಳೂರಿನ ಒಬ್ಬ ವ್ಯಕ್ತಿ ನಾಪತ್ತೆ

ಇದೇ ವೇಳೆ, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಬಂದ ಮಾಹಿತಿ ಪ್ರಕಾರ ಬೆಂಗಳೂರು ಕಂಪನಿಯೊಂದರ ಒಬ್ಬ ಉದ್ಯೋಗಿಯು ಟರ್ಕಿಯಲ್ಲಿ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ. ಇತರ 10 ಮಂದಿ ಆ ದೇಶದ ದೂರ ಪ್ರದೇಶಗಳಲ್ಲಿ ಸಿಲುಕಿರುವ ಸಂಗತಿಯನ್ನು ಬಹಿರಂಗಪಡಿಸಲಾಗಿದೆ. ಈ ಹತ್ತು ಮಂದಿ ಸುರಕ್ಷಿತವಾಗಿರುವುದೂ ಖಚಿತಪಟ್ಟಿದೆ.

ಇನ್ನು, ಎರಡು ದಿನಗಳಿಂದ ಕಾಣಿಯಾಗಿರುವ ವ್ಯಕ್ತಿ ಬೆಂಗಳೂರು ಮೂಲದ ಕಂಪನಿಯ ಉದ್ಯೋಗಿಯಾಗಿದ್ದು, ಬಿಸಿನೆಸ್ ಟ್ರಿಪ್ ಸಂಬಂಧ ಟರ್ಕಿಗೆ ಹೋಗಿದ್ದರೆನ್ನಲಾಗಿದೆ. ಆದರೆ, ಇವರು ಕನ್ನಡಿಗರಲ್ಲ ಎನ್ನುವ ಮಾಹಿತಿಯನ್ನು ರಾಜ್ಯ ವಿಪತ್ತು ನಿರ್ಹಣಾ ಅಧಿಕಾರಿ ಟಿವಿ9 ಕನ್ನಡಕ್ಕೆ ಮಾಹಿತಿ ನೀಡಿದ್ದಾರೆ. ಈ ವ್ಯಕ್ತಿ ಬೇರೆ ರಾಜ್ಯದವರಾಗಿದ್ದು, ಬೆಂಗಳೂರಿನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.

ಟರ್ಕಿ ಮತ್ತು ಸಿರಿಯಾ ಭಾಗಗಳಲ್ಲಿ ಸಂಭವಿಸಿದ ನಾಲ್ಕು ಭೂಕಂಪಗಳಲ್ಲಿ ಇದರೂವರೆಗೆ 15 ಸಾವಿರಕ್ಕೂ ಹೆಚ್ಚು ಮಂದಿ ಸತ್ತಿರುವುದು ಅಧಿಕೃತಗೊಂಡಿದೆ. ಇನ್ನೂ ಬಹಳಷ್ಟು ಮಂದಿ ಬಲಿಯಾಗಿರುವ ಶಂಕೆ ಇದೆ.

Published On - 8:13 am, Thu, 9 February 23

ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ