AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ, ಕಾರ್ಪೊರೇಟರ್​ಗಳ ನಡುವಿನ ಅಘೋಷಿತ ತಿಕ್ಕಾಟವೇ ಗಲಭೆಗೆ ಕಾರಣ: ಅಶೋಕ

[lazy-load-videos-and-sticky-control id=”DInh6877suk”] ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಗಳಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್ ಆಶೋಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಶಾಸಕ, ಕಾರ್ಪೊರೇಟರ್​ಗಳ ನಡುವೆ ನಡೆಯುತ್ತಿರುವ ಶೀತಲ ಸಮರವೇ ಗಲಭೆಗೆ ಕಾರಣ ಎಂದರು. “ಮೊದಲಿನಿಂದಲೂ ಪುಲಕೇಶಿ ನಗರದಲ್ಲಿ ಕ್ಷೇತ್ರದಲ್ಲಿ ಮುಸುಕಿನ ಗುದ್ದಾಟವಿತ್ತು, ಮಂಗಳವಾರದಂದು ನಡೆದ ಘಟನೆಯಿಂದ ಅದು ಬಹಿರಂಗಗೊಂಡಿದೆ, ಅವತ್ತು ನಡೆದ ಗಲಭೆ–ದೊಂಬಿಗಳಿಗೆ ಕೋಮುದಳ್ಳುರಿಯ ಲೇಪ ಮೆತ್ತುವ ಪ್ರಯತ್ನ ಬೇಡ, ಅದು ಪೂರ್ವನಿಯೋಜಿತ ಕೃತ್ಯವೇ ಹೊರತು ಧರ್ಮಗಳಿಗೆ ಸಂಬಂಧಿಸಿದ ವಿಚಾರವೇ ಅಲ್ಲ,” ಎಂದು […]

ಶಾಸಕ, ಕಾರ್ಪೊರೇಟರ್​ಗಳ ನಡುವಿನ ಅಘೋಷಿತ ತಿಕ್ಕಾಟವೇ ಗಲಭೆಗೆ ಕಾರಣ: ಅಶೋಕ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Aug 14, 2020 | 3:55 PM

Share

[lazy-load-videos-and-sticky-control id=”DInh6877suk”]

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಗಳಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಆರ್ ಆಶೋಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಶಾಸಕ, ಕಾರ್ಪೊರೇಟರ್​ಗಳ ನಡುವೆ ನಡೆಯುತ್ತಿರುವ ಶೀತಲ ಸಮರವೇ ಗಲಭೆಗೆ ಕಾರಣ ಎಂದರು.

ಮೊದಲಿನಿಂದಲೂ ಪುಲಕೇಶಿ ನಗರದಲ್ಲಿ ಕ್ಷೇತ್ರದಲ್ಲಿ ಮುಸುಕಿನ ಗುದ್ದಾಟವಿತ್ತು, ಮಂಗಳವಾರದಂದು ನಡೆದ ಘಟನೆಯಿಂದ ಅದು ಬಹಿರಂಗಗೊಂಡಿದೆ, ಅವತ್ತು ನಡೆದ ಗಲಭೆದೊಂಬಿಗಳಿಗೆ ಕೋಮುದಳ್ಳುರಿಯ ಲೇಪ ಮೆತ್ತುವ ಪ್ರಯತ್ನ ಬೇಡ, ಅದು ಪೂರ್ವನಿಯೋಜಿತ ಕೃತ್ಯವೇ ಹೊರತು ಧರ್ಮಗಳಿಗೆ ಸಂಬಂಧಿಸಿದ ವಿಚಾರವೇ ಅಲ್ಲ,” ಎಂದು ಅಶೋಕ ಹೇಳಿದರು.

ಕಾಂಗ್ರೆಸ್ ಮತ್ತು ಎಸ್ ಡಿ ಪಿ ಐ ಮಧ್ಯೆ ನಡೆಯುತ್ತಿರುವ ಸಂಘರ್ಷ ಇದು, ಇದಕ್ಕೆ ಮೊದಲು ಗುರಿಯಾದವರು ಶಾಸಕ ತನ್ವೀರ್ ಸೇಠ್. ಎರಡನೇ ಸಲದ ದಾಳಿಗೆ ಆಯ್ಕೆ ಮಾಡಿಕೊಂಡಿದ್ದು ದಲಿತ ನಾಯಕ ಅಖಂಡ ಶ್ರೀನಿವಾಸ ಮೂರ್ತಿ ಮತ್ತು ಅವರ ಕುಟುಂಬವನ್ನು. ಅಂದು ಸ್ವಲ್ಪವೇ ತಡವಾಗಿದ್ದರೂ ಮೂರ್ತಿಯ ಇಡೀ ಕುಟುಂಬ ಬೆಂಕಿಗಾಹುತಿಯಾಗುತಿತ್ತು, ಎಂದು ಅಶೋಕ ಹೇಳಿದರು.

ಎಸ್ ಡಿ ಪಿ ಐ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಮಾತಾಡಿದ ಅಶೋಕ, ಈ ನಿಟ್ಟಿನಲ್ಲಿ ಅವರ ಸರಕಾರ ಒಂದು ಹೆಜ್ಜೆ ಮುಂದೆ ಸಾಗಿದೆ ಎಂದರು. ” ಎಸ್ ಡಿ ಪಿ ಐ ದೇಶಕ್ಕೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ, ಇದರಿಂದ ಸಮಾಜಕ್ಕೆ ಒಳಿತೇನೂ ಇಲ್ಲ. ನಿಷೇಧ ಹೇರುವ ಮೊದಲು ಸಂಘಟನೆಯ ಬಗ್ಗೆ ಸಮಗ್ರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ, ಮುಖ್ಯಮಂತ್ರಿಗಳ ಸೂಚನೆಗಾಗಿ ಕಾಯುತ್ತಿದ್ದೇವೆ, ಅದು ದೊರೆತ ಕೂಡಲೇ ಮುಂದುವರಿಯುತ್ತೇವೆ,” ಎಂದು ಸಚಿವರು ಹೇಳಿದರು.

ಮುಂದುವರಿದು ಹೇಳಿದ ಕಂದಾಯ ಮಂತ್ರಿಗಳು, “ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳಲು ಸಜ್ಜಾಗಿದೆ, ಈ ಪ್ರಕರಣವನ್ನು ಒಂದು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದು ಸರಕಾರದ ಅಚಲ ನಿರ್ಧಾರವಾಗಿದೆ. ಕಾನೂನು ಮೀರಿ ನಡೆಯುವವರನ್ನು ಸರ್ಕಾರ ಬಿಡಲ್ಲ, ಸಂವಿಧಾನ ಎಲ್ಲರಿಗೂ ಒಂದೇ, ಸಂವಿಧಾನ ದೇವರ ಹೆಸರಲ್ಲಿ ರಚನೆಯಾಗಿಲ್ಲ ಹಾಗೂ ಧರ್ಮದ ಹೆಸರಲ್ಲಿ ಕಾನೂನು ರಚನೆ ಮಾಡುವುದಕ್ಕೆ ಇದು ಪಾಕಿಸ್ತಾನ ಅಲ್ಲ, ಭಾರತ,” ಎಂದರು

ಪೊಲೀಸ್ ಗುಂಡಿಗೆ ಸತ್ತವರು ಅಮಾಯಕರು ಎಂದು ಹೇಳುತ್ತಿರುವ ಕಾಂಗ್ರೆಸ್ ಪಕ್ಷದ ವಾದವನ್ನು ತಳ್ಳಿಹಾಕಿದ ಅಶೋಕ, ಅಮಾಯಕರು ರಾತ್ರಿ ೧೨ ಗಂಟೆಗೆ ಹೊರಬಂದು ಬೀದಿಗಳಲ್ಲಿ ಸುತ್ತಾಡುತ್ತಾರೆಯೇ ಅಂತ ಪ್ರಶ್ನಿಸಿದರು. ಮಾಜಿ ಮೇಯರ್ ಸಂಪತ್​ರಾಜು ಅವರ ಹೆಸರು ಪ್ರಕರಣದಲ್ಲಿ ಕೇಳಿಬರುತ್ತಿದೆ. ಮಾಧ್ಯಮಗಳಲ್ಲಿ ಒಬ್ಬ ಹಿರಿಯ ಕಾಂಗ್ರೆಸ್ ನಾಯಕನ ಹೆಸರು ಸಹ ಹರಿದಾಡುತ್ತಿದೆ, ತನಿಖೆಯ ನಂತರ ಎಲ್ಲವೂ ಹೊರಬೀಳುತ್ತದೆ ಎಂದು ಅವರು ಹೇಳಿದರು.

Published On - 2:50 pm, Fri, 14 August 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ