Tv9 Digital Live | 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆಗೆ ಕೇಂದ್ರ ಸರ್ಕಾರ ಅನುಮತಿ

45 ವರ್ಷ ವಯಸ್ಸಿನ ಮೇಲ್ಪಟ್ಟವರು ಚುಚ್ಚುಮದ್ದು ಹಾಕಲು ಸರಕಾರ ಅನುಮತಿ ನೀಡಿದೆ. ಈ ಕುರಿತಾಗಿ ಟಿವಿ9 ಕನ್ನಡ ಡಿಜಿಟಲ್ ಲೈವ್​ನಲ್ಲಿ ಚರ್ಚೆ ನಡೆಸಲಾಗಿದೆ.

Tv9 Digital Live | 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆಗೆ ಕೇಂದ್ರ ಸರ್ಕಾರ ಅನುಮತಿ
ಡಾ. ಚೇತನ್, ಆ್ಯಂಕರ್​ ಆನಂದ್​ ಬುರಲಿ ಮತ್ತು ಡಾ. ಸುನೀಲ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 24, 2021 | 9:07 PM

ಕೇಂದ್ರ ಸರಕಾರ ಕೊವಿಡ್​ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. 45 ವರ್ಷ ವಯಸ್ಸಿನ ಮೇಲ್ಪಟ್ಟವರು ಚುಚ್ಚುಮದ್ದು ಹಾಕಲು ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು (ಮಾರ್ಚ್ 24) ಟಿವಿ9 ಕನ್ನಡ ಡಿಜಿಟಲ್​ ಲೈವ್​ನಲ್ಲಿ ಚರ್ಚಿಸಲಾಗಿದೆ. ಚರ್ಚೆಯಲ್ಲಿ ಡಾ. ಚೇತನ್​, ಡಾ.ಸುನೀಲ್​, ಡಾ.ಸುಶೀಲ್ ಹಾಗೂ ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ ಪಾಲ್ಗೊಂಡಿದ್ದರು. ಚರ್ಚೆಯನ್ನು ಆ್ಯಂಕರ್​ ಆನಂದ್​ ಬುರಲಿ ನಡೆಸಿಕೊಟ್ಟರು.

ಈ ಮುಂಚೆ 60 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್ ಪಡೆಯಬಹುದಿತ್ತು. ಇತರೆ ಕಾಯಿಲೆಗೆ ಒಳಪಟ್ಟವರಿಗೆ ಲಸಿಕೆ ಪಡೆಯಲು ಅವಕಾಶ ಮಾಡಿಕೊಡಲಾಗುತ್ತಿತ್ತು. ಇದೀಗ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಪಡೆಯಲು ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತಂತೆ ತಜ್ಞರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಡಾ.ಸುನೀಲ್ ಮಾತನಾಡಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ಪಡೆಯಲು ಹೇಳಿರುವ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ನಾವು ಮೊದಲಿನಿಂದಲೂ 50 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಬೇಕು ಎಂದು ಮಾತಾಡಿದ್ದೆವು. ಆದರೆ ಇದೀಗ ಸರ್ಕಾರ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಪಡೆಯಲು ಹೇಳಿರುವುದು ಒಳ್ಳೆಯ ಸಂದೇಶ. 18 ವರ್ಷ ವಯಸ್ಸಿನವರಿಗೂ ವ್ಯಾಕ್ಸಿನ್ ಅವಶ್ಯಕತೆ ಇದ್ದರೆ ಅವರಿಗೆ ಲಸಿಕೆ ಕೊಡಬೇಕು.

ಸರಕಾರ ಇನ್ನಷ್ಟು ಸಡಿಲಿಕೆ ಮಾಡುತ್ತಾ ಎಲ್ಲರಿಗೂ ಲಸಿಕೆ ಕೊಡುವಂತೆ ಆಗುವ ಸಾಧ್ಯತೆ ಇದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಾ.ಚೇತನ್, ಇದೇ ವರ್ಷ ಎಲ್ಲ ವಯಸ್ಸಿನವರು ಲಸಿಕೆ ಪಡೆಯುವ ಅವಶ್ಯಕತೆ ಇದ್ದೇ ಇದೆ ಎಂದಾದಲ್ಲಿ ಲಸಿಕೆ ಪಡೆಯಬೇಕು ಎಂದು ಹೇಳಿದರು. ಇದೀಗ ಜನರಿಗೆ ಸ್ಥೈರ್ಯ ಜಾಸ್ತಿಯಾಗುತ್ತಿದೆ. ಹೆಚ್ಚು ಜನರು ಬಂದು ಲಸಿಕೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ನಮ್ಮ ಆರೋಗ್ಯದ ಮೇಲೆ ನಮಗೆ ಕಾಳಜಿ ಇರಬೇಕು. ಇದಕ್ಕೆ ಉತ್ತಮ ಆಹಾರ ವ್ಯವಸ್ಥೆ, ವ್ಯಾಯಾಮವನ್ನು ರೂಢಿಗೆ ತಂದುಕೊಳ್ಳಿ ಇದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಮಾತನಾಡಿದರು.

ಸಾವಿರಾರು ಜನ ಬಂದು ಲಸಿಕೆ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದು ಸತ್ಯವೇ ಎಂಬ ಮಾತಿಗೆ ಉತ್ತರಿಸಿದ ಡಾ.ಸುಶೀಲ್ ಮಾತನಾಡಿ, ಇದೀಗ ಹೆಚ್ಚು ಜನ ಬಂದು ಲಸಿಕೆ ಪಡೆಯುತ್ತಿದ್ದಾರೆ. ಮೊದಲು ಸ್ಲಂಗಳಲ್ಲಿ ವಾಸುತ್ತಿರುವ ಜನ ಅಥವಾ ಇತರೆ ಜನ ಲಸಿಕೆ ಪಡೆಯಲು ಹೆಚ್ಚು ಬರುತ್ತಿರಲಿಲ್ಲ. ಆದರೆ ಇದೀಗ ಕೇಂದ್ರ ಸರಕಾರ ತಂದ ಹೊಸ ಮಾರ್ಗಸೂಚಿಯಂತೆ ಹೆಚ್ಚು ಜನ ಬಂದು ಲಸಿಕೆ ಪಡೆಯುತ್ತಿದ್ದಾರೆ. ಕೊರೊನಾ ಕೇಸ್​ ದಿನೇದಿನೇ ಹೆಚ್ಚಾಗುತ್ತಿದೆ. ಅದರ ಜೊತೆ ಜೊತೆಗೇ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆಯೂ ವೇಗವಾಗಿ ಸಾಗಬೇಕು. ಜನರಲ್ಲಿ ಲಸಿಕೆಯ ಬಗ್ಗೆ ಜಾಗೃತಿ​ ಹೆಚ್ಚಾಗುತ್ತಾ ಹೋಗುತ್ತದೆ. ಮೊದಲು ಕೊರೊನಾಕ್ಕೆ ನಿಯಮಾವಳಿ ತಂದಾಗ ಯಾರೂ ನಿಯಮ ಪಾಲಿಸುತ್ತಿರಲಿಲ್ಲ. ಕೊರೊನಾ ಬಗ್ಗೆ ಜನರಿಗೆ ತಿಳಿಯುತ್ತಾ ಹೋದಂತೆ ಜನರೂ ಕೂಡಾ ಅರಿತರು. ಅದೇ ರೀತಿ ಲಸಿಕೆಯ ಬಗೆಗೂ ಜನರಿಗೆ ಅರಿವಾಗಲು ಸಮಯ ಹಿಡಿದಿದೆ. ಇದೀಗ ಜನ ಹೆಚ್ಚು ಲಸಿಕೆ ಪಡೆಯಲು ಬರುತ್ತಿದ್ದಾರೆ ಎಂದು ಅಭಿಪ್ರಾಯ ಹಂಚಿಕೊಂಡರು.

ಆರೋಗ್ಯ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ ಮಾತನಾಡಿ, ಅಂದಾಜಿಗೆ ಒಂದು ದಿನಕ್ಕೆ ಸುಮಾರು 2 ಲಕ್ಷ ಜನ ಲಸಿಕೆ ಪಡೆಯುತ್ತಿದ್ದಾರೆ.  ಕರ್ನಾಟಕದಲ್ಲಿ ಸರಿ ಸುಮಾರು 45 ವರ್ಷ ಮೇಲ್ಪಟ್ಟವರಲ್ಲಿ 70 ಲಕ್ಷ ಜನ ಇದ್ದಾರೆ. ಎಲ್ಲರಿಗೂ ಲಸಿಕೆ ಸೌಲಭ್ಯವಾಗುತ್ತದೆ ಯಾರಿಗೂ ಯಾವುದೇ ಕೊರತೆಯಾಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Tv9 Digital Live | ಪೊಲೀಸ್ ಇಲಾಖೆ ಮೇಲೆ ರಾಜಕಾರಣಿಗಳ ಹಿಡಿತ ತಪ್ಪಬೇಕಿದೆ

ಇದನ್ನೂ ಓದಿ: TV9 Digital Live | ಯುವಜನರಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಕೊರೊನಾ; ತಜ್ಞರ ಸಲಹೆ ಏನು?

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ