ಟಿವಿ9 ಅಭಿಯಾನದ ಬೆನ್ನಲ್ಲೆ ಎಚ್ಚೆತ್ತ ಬಿಬಿಎಂಪಿ: ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆಗೆ ಪಾಲಿಕೆ ಸಜ್ಜು

ಬೆಂಗಳೂರಿನ ಬೀದಿನಾಯಿಗಳ ಕಾಟದ ಬಗ್ಗೆ ಟಿವಿ9 ನಿರಂತರ ವರದಿ ಪ್ರಸಾರ ಮಾಡಿತ್ತು. ಇತ್ತೀಚೆಗೆ ಬಿಬಿಎಂಪಿ ಪಶುಪಾಲನಾ ವಿಭಾಗದ ಮೂಲಕ ಬೀದಿನಾಯಿ ಕಡಿತ ಪ್ರಕರಣಗಳ ನಿರ್ವಹಣೆಗೆ ಹೆಲ್ಪ್ ಲೈನ್ ರಿಲೀಸ್ ಮಾಡಲಾಗಿತ್ತು. ಇದೀಗ ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡಲಾಗುತ್ತಿದೆ. ಆ ಮೂಲಕ ಬೀದಿನಾಯಿಗಳ ಮೇಲೆ ನಿಗಾ ಇಡಲು ಪಾಲಿಕೆ ಸಜ್ಜಾಗಿದೆ.

ಟಿವಿ9 ಅಭಿಯಾನದ ಬೆನ್ನಲ್ಲೆ ಎಚ್ಚೆತ್ತ ಬಿಬಿಎಂಪಿ: ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆಗೆ ಪಾಲಿಕೆ ಸಜ್ಜು
ಟಿವಿ9 ಅಭಿಯಾನದ ಬೆನ್ನಲ್ಲೆ ಎಚ್ಚೆತ್ತ ಬಿಬಿಎಂಪಿ: ಬೆಂಗಳೂರಿನ ಬೀದಿನಾಯಿಗಳಿಗೆ ಮೈಕ್ರೋಚಿಪ್ ಅಳವಡಿಕೆಗೆ ಪಾಲಿಕೆ ಸಜ್ಜು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 21, 2024 | 5:20 PM

ಬೆಂಗಳೂರು, ಸೆಪ್ಟೆಂಬರ್ 21: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಯಿಗಳ (street Dogs) ಹಾವಳಿ ಕುರಿತಂತೆ ಟಿವಿ9 ಅಭಿಯಾನ ಮಾಡಿತ್ತು. ಟಿವಿ9 ಅಭಿಯಾನದ ಬೆನ್ನಲ್ಲೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ಇದೀಗ ಬೀದಿನಾಯಿಗಳಿಗೆ ಮೈಕ್ರೋ ಚಿಪ್ ಅಳವಡಿಕೆ ಮಾಡಲಾಗುತ್ತಿದೆ. ಇಂದು ಬಿಬಿಎಂಪಿ ವಿಶೇಷ ಆಯುಕ್ತ ಸುರಾಳ್ಕರ್​ ವಿಕಾಸ್ ಕಿಶೋರ್ ನೇತೃತ್ವದಲ್ಲಿ ಚಿಪ್ ಅಳವಡಿಕೆ ಚಾಲನೆ  ನೀಡಲಾಗಿದೆ.

ನಗರದ ಮಲ್ಲೇಶ್ವರ, ಮತ್ತಿಕೆರೆ ಸುತ್ತಮುತ್ತ ಮೈಕ್ರೋಚಿಪ್ ಅಳವಡಿಕೆ ಮಾಡಲಾಗುತ್ತಿದೆ. ಆ ಮೂಲಕ ಬೀದಿನಾಯಿಗಳ ಮೇಲೆ ನಿಗಾ ಇಡಲು ಪಾಲಿಕೆ ಸಜ್ಜಾಗಿದೆ. ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಎಬಿಸಿ ಸೇರಿ ಹಲವು ಮಾಹಿತಿ ಸಂಗ್ರಹಕ್ಕೆ ಚಿಪ್ ಸಹಕಾರಿ ಆಗಲಿದೆ. ಬಿಜ್ ಆರ್ಬಿಟ್ (BIZ ORBIT) ಸಂಸ್ಥೆ ಜೊತೆ ಸೇರಿ ಚಿಪ್ ಅಳವಡಿಕೆ ಬಿಬಿಎಂಪಿ ಮುಂದಾಗಿದ್ದು, ಪ್ರಯೋಗ ಯಶಸ್ವಿಯಾದರೆ ಎಲ್ಲಾ ವಲಯದ ಶ್ವಾನಗಳಿಗೆ ಅಳವಡಿಕೆಗೆ ಪ್ಲ್ಯಾನ್​ ಮಾಡಲಾಗುತ್ತಿದೆ.

ಇದನ್ನೂ ಓದಿ: ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ

ಬೆಂಗಳೂರಿನ ಬೀದಿನಾಯಿಗಳ ಕಾಟದ ಬಗ್ಗೆ ಟಿವಿ9 ನಿರಂತರ ವರದಿ ಪ್ರಸಾರ ಮಾಡಿತ್ತು. ಬೀದಿನಾಯಿಗಳ ಬಗ್ಗೆ ಸೈಲೆಂಟ್ ಆಗಿದ್ದ ಪಾಲಿಕೆ ಆಯುಕ್ತರಿಗೆ ಒದೊಂದು ದಿನ ಬೀದಿನಾಯಿಗಳ ರೋಷಾವೇಷದ ಪ್ರದರ್ಶನವಾಗಿತ್ತು. ಗುಂಡಿ ಮುಚ್ಚುವ ಕೆಲಸ ಪರಿಶೀಲನೆ ವೇಳೆ ಬೀದಿನಾಯಿಗಳು ಅಟ್ಯಾಕ್​ ಮಾಡಿದ್ದವು. ಆ ಘಟನೆ ನಡೆದ ಬಳಿಕ ಬಿಬಿಎಂಪಿ ಪಶುಪಾಲನಾ ವಿಭಾಗದ ಮೂಲಕ ಬೀದಿನಾಯಿ ಕಡಿತ ಪ್ರಕರಣಗಳ ನಿರ್ವಹಣೆಗೆ ಹೆಲ್ಪ್ ಲೈನ್ ರಿಲೀಸ್ ಮಾಡಲಾಗಿತ್ತು.

ಬೀದಿನಾಯಿಗಳ ರೋಷಾವೇಷವನ್ನ ಕಣ್ಣಾರೆ ಕಂಡ ಪಾಲಿಕೆ ಮುಖ್ಯ ಆಯುಕ್ತರು, ಬಿಬಿಎಂಪಿಯ ಪಶುಪಾಲನ ಇಲಾಖೆ ಮೂಲಕ ಬೀದಿನಾಯಿಗಳ ಕಡಿತ ಹಾಗೂ ರೇಬಿಸ್​ಗೆ ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿ ಪ್ರಕಟಣೆ ಹೊರಡಿಸಿದ್ದರು.

ಇದನ್ನೂ ಓದಿ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ BBMPಯಿಂದ 4 ವರ್ಷದಲ್ಲಿ 40 ಕೋಟಿ ರೂ. ಖರ್ಚು

6364893322 ಹಾಗೂ 1533 ಸಹಾಯವಾಣಿ ಬಿಡುಗಡೆ ಮಾಡಿರುವ ಪಾಲಿಕೆ, ಇದರ ಜೊತೆಗೆ ಬಿಬಿಎಂಪಿ ವ್ಯಾಪ್ತಿಯ ಡಾಗ್ ಕೆನಲ್ ಹೆಚ್ಚಳಕ್ಕೂ ತಯಾರಿ ನಡೆಸಿತ್ತು. ಇನ್ನು ಸಂತಾನಹರಣ, ರೋಗ ನಿರೋಧಕ ಚುಚ್ಚುಮದ್ದು ನೀಡುವುದನ್ನು ಕೂಡ ಹೆಚ್ಚಿಸಲು ಚಿಂತನೆ ನಡೆಸಿದ್ದು, ಟಿವಿ9 ವರದಿ ಬಳಿಕ ಪಾಲಿಕೆ ಅಲರ್ಟ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ