AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Impact ಭ್ರಷ್ಟಾಚಾರ ಆರೋಪ ಹೊತ್ತಿದ್ದ BDA ಅಧಿಕಾರಿಗೆ ಎತ್ತಂಗಡಿ ಶಿಕ್ಷೆ

ಟಿವಿ9 ವರದಿ ಬಳಿಕ BDAನಲ್ಲಿ ಭಾರಿ ಬದಲಾವಣೆ ಸಂಭವಿಸಿದೆ. ನಿಮ್ಮ ಸುದ್ದಿವಾಹಿನಿಯ ವರದಿ ಬೆನ್ನಲ್ಲೇ ಭ್ರಷ್ಟಾಚಾರ ಆರೋಪ ಹೊತ್ತಿದ್ದ BDA ಅಧಿಕಾರಿಗೆ ಎತ್ತಂಗಡಿ ಶಿಕ್ಷೆ ಸಿಕ್ಕಿದೆ. ಭ್ರಷ್ಟಾಚಾರ ಆರೋಪ ಹೊತ್ತಿದ್ದ N.S.ಚಿದಾನಂದ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

TV9 Impact ಭ್ರಷ್ಟಾಚಾರ ಆರೋಪ ಹೊತ್ತಿದ್ದ BDA ಅಧಿಕಾರಿಗೆ ಎತ್ತಂಗಡಿ ಶಿಕ್ಷೆ
ಬಿಡಿಎ ಹೆಡ್ ಆಫೀಸ್
KUSHAL V
|

Updated on:Feb 16, 2021 | 7:46 PM

Share

ಬೆಂಗಳೂರು: ಟಿವಿ9 ವರದಿ ಬಳಿಕ BDAನಲ್ಲಿ ಭಾರಿ ಬದಲಾವಣೆ ಸಂಭವಿಸಿದೆ. ನಿಮ್ಮ ಸುದ್ದಿವಾಹಿನಿಯ ವರದಿ ಬೆನ್ನಲ್ಲೇ ಭ್ರಷ್ಟಾಚಾರ ಆರೋಪ ಹೊತ್ತಿದ್ದ BDA ಅಧಿಕಾರಿಗೆ ಎತ್ತಂಗಡಿ ಶಿಕ್ಷೆ ಸಿಕ್ಕಿದೆ. ಭ್ರಷ್ಟಾಚಾರ ಆರೋಪ ಹೊತ್ತಿದ್ದ N.S.ಚಿದಾನಂದ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಹಲವು ಹಗರಣಗಳಲ್ಲಿ ಚಿದಾನಂದ್​ ಹೆಸರು ಕೇಳಿ ಬಂದಿತ್ತು. ಈ ನಡುವೆ, BDA ಅಧ್ಯಕ್ಷ S.R.ವಿಶ್ವನಾಥ್ ಸಹ ನೇರ ಆರೋಪ ಮಾಡಿದ್ದರು. ಚಿದಾನಂದ್ BDA ನಲ್ಲಿ ಉಪ ಕಾರ್ಯದರ್ಶಿ-1 ಹುದ್ದೆಯಲ್ಲಿದ್ದರು. ಈ ವೇಳೆ, ಭವಾನಿ ಹೌಸಿಂಗ್ ಸೊಸೈಟಿ ಗೋಲ್​ಮಾಲ್​ನಲ್ಲಿ ಭಾಗಿಯಾಗಿದ್ದರು ಎಂದು ವಿಶ್ವನಾಥ್ ಆರೋಪಿಸಿದ್ದರು. ಈ ಕುರಿತು, ಟಿವಿ9ನಲ್ಲಿ ನಿರಂತರ ವರದಿ ಪ್ರಸಾರ ಮಾಡಲಾಗಿತ್ತು. ಇದೀಗ, ಚಿದಾನಂದ್​ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಎನ್.ಎಸ್.ಚಿದಾನಂದ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ಉಪ ನಿರ್ದೇಶಕರಾಗಿ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಜೊತೆಗೆ, BDA ಗೆ 3 ಹೊಸ ಉಪ ಕಾರ್ಯದರ್ಶಿಗಳ ನೇಮಕವಾಗಿದೆ. ಉಪಕಾರ್ಯದರ್ಶಿ-1 ಆಗಿದ್ದ N.S.ಚಿದಾನಂದ್ ಸ್ಥಾನಕ್ಕೆ ಡಾ.ಮಧು.ಎನ್.ಎನ್ ನೇಮಕಗೊಂಡಿದ್ದಾರೆ. ಇದಲ್ಲದೆ, ಖಾಲಿಯಿದ್ದ ಉಪಕಾರ್ಯದರ್ಶಿ-3ರ ಹುದ್ದೆಗೆ ಡಾ.B.R.ಹರೀಶ್ ಮತ್ತು ಖಾಲಿ ಇದ್ದ ಉಪಕಾರ್ಯದರ್ಶಿ-4ರ ಹುದ್ದೆಗೆ ಗೀತಾ ಹುಡೇದ್ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ, ಉಪಕಾರ್ಯದರ್ಶಿ 3, 4ರ ಹುದ್ದೆಯಲ್ಲಿದ್ದ ರಾಜು ಹಾಗೂ ಶಿವೇಗೌಡನನ್ನು ಅಮಾನತು ಮಾಡಲಾಗಿತ್ತು.

ಇದನ್ನೂ ಓದಿ: Bhaskar Rao ರೈಲ್ವೆ ADGP ಆಗಿ ಭಾಸ್ಕರ್ ರಾವ್ ವರ್ಗಾವಣೆ

Published On - 7:35 pm, Tue, 16 February 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ