AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ನಾಡಿನ, ಜನರ ಅಭಿಮಾನದ ಸುದ್ದಿ ಮಾಧ್ಯಮ ಟಿವಿ 9: ಗೃಹ ಸಚಿವ ಆರಗ ಜ್ಞಾನೇಂದ್ರ

ಟಿವಿ 9 ವಾಹಿನಿಯ ನವನಕ್ಷತ್ರ-9 ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರ, ಒಂದು ಸುದ್ದಿ ದೃಶ್ಯ ಮಾಧ್ಯಮ ಇಂಥ ಕಾರ್ಯಕ್ರಮಗಳನ್ನು ಮಾಡುತ್ತದೆ ಎನ್ನುವುದೇ ವಿಶೇಷ ಎಂದು ಹೇಳಿದರು.

ಈ ನಾಡಿನ, ಜನರ ಅಭಿಮಾನದ ಸುದ್ದಿ ಮಾಧ್ಯಮ ಟಿವಿ 9: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Updated By: Lakshmi Hegde|

Updated on:Jan 04, 2022 | 2:45 PM

Share

2006ರಲ್ಲಿ ಪ್ರಾರಂಭವಾಗಿರುವ ಟಿವಿ 9 (Tv9 Kannada News Channel) ಜನಮನ ಗೆದ್ದ ಸುದ್ದಿ ವಾಹಿನಿ. ಪ್ರತಿವರ್ಷವೂ ಅದರ ವೀಕ್ಷಕರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ ಎಂದು ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ (Araga jnanendra) ಹೇಳಿದರು.  ಟಿವಿ 9  ದೃಶ್ಯ ಸುದ್ದಿ ಮಾಧ್ಯಮ ಪ್ರಾರಂಭವಾಗಿ 15 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಾಹಿನಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವನಕ್ಷತ್ರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಹಿನಿಗೆ ಶುಭಕೋರಿದರು.

ಟಿವಿ 9 ಸುದ್ದಿ ವಾಹಿನಿಯ ಕಾರ್ಯಕ್ರಮಗಳ ಗುಣಮಟ್ಟ ಬಹಳ ಅತ್ಯುತ್ತಮವಾಗಿದೆ. ಸುದ್ದಿ ಪ್ರಸಾರವೇ ಆಗಿರಲಿ, ಸಾಂಸ್ಕೃತಿಕ ಸೇರಿ ಇನ್ನಿತರ ಯಾವುದೇ ಕಾರ್ಯಕ್ರಮಗಳ ಪ್ರಸಾರವಾಗಿರಲಿ, ಬಹಳ ಚೆನ್ನಾಗಿ ಮೂಡಿಬರುತ್ತಿದೆ. ನಾನು ಎಲ್ಲ ಚಾನೆಲ್​ಗಳನ್ನೂ ನೋಡುತ್ತೇನೆ. ಆದರೆ ಟಿವಿ9 ನೋಡದೆ ಇರಲು ಸಾಧ್ಯವೇ ಇಲ್ಲ. ಅಷ್ಟರಮಟ್ಟಿಗೆ ನಮ್ಮನ್ನು ಹಿಡಿದಿಟ್ಟಿದೆ. ನಮ್ಮಂಥ ರಾಜಕಾರಣಿಗಳನ್ನು ಎಚ್ಚರಿಸುವಂಥ ಅನೇಕ ಕಾರ್ಯಕ್ರಮಗಳನ್ನು ಟಿವಿ 9 ಮಾಡುತ್ತಿದೆ. ಇಡೀ ರಾಜ್ಯದ, ಜನತೆಯ ಅಭಿಮಾನದ ಚಾನೆಲ್​ ಇದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಟಿವಿ 9 ವಾಹಿನಿಯ ನವನಕ್ಷತ್ರ-9 ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರ, ಒಂದು ಸುದ್ದಿ ದೃಶ್ಯ ಮಾಧ್ಯಮ ಇಂಥ ಕಾರ್ಯಕ್ರಮಗಳನ್ನು ಮಾಡುತ್ತದೆ ಎನ್ನುವುದೇ ವಿಶೇಷ. ಟಿವಿ 9 ತನ್ನ 15ವರ್ಷಗಳ ಪ್ರಯಾಣದಲ್ಲಿ, ಈ ವರ್ಷ ವಿಶೇಷವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ತನ್ಮೂಲಕ ಅವರನ್ನು ನಾಡಿಗೆ ಇನ್ನಷ್ಟು ಸರಿಯಾಗಿ ಪರಿಚಯ ಮಾಡಿಕೊಡುತ್ತಿದೆ. ಇದು ನಿಜಕ್ಕೂ ಅತ್ಯುತ್ತಮ ಕಾರ್ಯಕ್ರಮ ಎಂದು ತಿಳಿಸಿದರು.

ಇದನ್ನೂ ಓದಿ: ಟಿವಿ9 ಮುಂಚೂಣಿ ಸ್ಥಾನದಲ್ಲಿ ಇದೆ ಎಂಬುದನ್ನು ಹೆಗ್ಗಳಿಕೆಯಿಂದ ಹೇಳಬೇಕಿದೆ- ತುಮಕೂರು ಸಿದ್ದಗಂಗಾ ಶ್ರೀಗಳ ಆಶೀರ್ವಚನ

Published On - 2:42 pm, Tue, 4 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ