ಈ ನಾಡಿನ, ಜನರ ಅಭಿಮಾನದ ಸುದ್ದಿ ಮಾಧ್ಯಮ ಟಿವಿ 9: ಗೃಹ ಸಚಿವ ಆರಗ ಜ್ಞಾನೇಂದ್ರ

ಟಿವಿ 9 ವಾಹಿನಿಯ ನವನಕ್ಷತ್ರ-9 ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರ, ಒಂದು ಸುದ್ದಿ ದೃಶ್ಯ ಮಾಧ್ಯಮ ಇಂಥ ಕಾರ್ಯಕ್ರಮಗಳನ್ನು ಮಾಡುತ್ತದೆ ಎನ್ನುವುದೇ ವಿಶೇಷ ಎಂದು ಹೇಳಿದರು.

ಈ ನಾಡಿನ, ಜನರ ಅಭಿಮಾನದ ಸುದ್ದಿ ಮಾಧ್ಯಮ ಟಿವಿ 9: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: Lakshmi Hegde

Updated on:Jan 04, 2022 | 2:45 PM

2006ರಲ್ಲಿ ಪ್ರಾರಂಭವಾಗಿರುವ ಟಿವಿ 9 (Tv9 Kannada News Channel) ಜನಮನ ಗೆದ್ದ ಸುದ್ದಿ ವಾಹಿನಿ. ಪ್ರತಿವರ್ಷವೂ ಅದರ ವೀಕ್ಷಕರ ಸಂಖ್ಯೆಯಲ್ಲಿ ಹೆಚ್ಚಾಗುತ್ತಿದೆ ಎಂದು ರಾಜ್ಯ ಗೃಹಸಚಿವ ಆರಗ ಜ್ಞಾನೇಂದ್ರ (Araga jnanendra) ಹೇಳಿದರು.  ಟಿವಿ 9  ದೃಶ್ಯ ಸುದ್ದಿ ಮಾಧ್ಯಮ ಪ್ರಾರಂಭವಾಗಿ 15 ವರ್ಷ ತುಂಬಿದ ಹಿನ್ನೆಲೆಯಲ್ಲಿ ವಾಹಿನಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವನಕ್ಷತ್ರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಾಹಿನಿಗೆ ಶುಭಕೋರಿದರು.

ಟಿವಿ 9 ಸುದ್ದಿ ವಾಹಿನಿಯ ಕಾರ್ಯಕ್ರಮಗಳ ಗುಣಮಟ್ಟ ಬಹಳ ಅತ್ಯುತ್ತಮವಾಗಿದೆ. ಸುದ್ದಿ ಪ್ರಸಾರವೇ ಆಗಿರಲಿ, ಸಾಂಸ್ಕೃತಿಕ ಸೇರಿ ಇನ್ನಿತರ ಯಾವುದೇ ಕಾರ್ಯಕ್ರಮಗಳ ಪ್ರಸಾರವಾಗಿರಲಿ, ಬಹಳ ಚೆನ್ನಾಗಿ ಮೂಡಿಬರುತ್ತಿದೆ. ನಾನು ಎಲ್ಲ ಚಾನೆಲ್​ಗಳನ್ನೂ ನೋಡುತ್ತೇನೆ. ಆದರೆ ಟಿವಿ9 ನೋಡದೆ ಇರಲು ಸಾಧ್ಯವೇ ಇಲ್ಲ. ಅಷ್ಟರಮಟ್ಟಿಗೆ ನಮ್ಮನ್ನು ಹಿಡಿದಿಟ್ಟಿದೆ. ನಮ್ಮಂಥ ರಾಜಕಾರಣಿಗಳನ್ನು ಎಚ್ಚರಿಸುವಂಥ ಅನೇಕ ಕಾರ್ಯಕ್ರಮಗಳನ್ನು ಟಿವಿ 9 ಮಾಡುತ್ತಿದೆ. ಇಡೀ ರಾಜ್ಯದ, ಜನತೆಯ ಅಭಿಮಾನದ ಚಾನೆಲ್​ ಇದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಟಿವಿ 9 ವಾಹಿನಿಯ ನವನಕ್ಷತ್ರ-9 ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಆರಗ ಜ್ಞಾನೇಂದ್ರ, ಒಂದು ಸುದ್ದಿ ದೃಶ್ಯ ಮಾಧ್ಯಮ ಇಂಥ ಕಾರ್ಯಕ್ರಮಗಳನ್ನು ಮಾಡುತ್ತದೆ ಎನ್ನುವುದೇ ವಿಶೇಷ. ಟಿವಿ 9 ತನ್ನ 15ವರ್ಷಗಳ ಪ್ರಯಾಣದಲ್ಲಿ, ಈ ವರ್ಷ ವಿಶೇಷವಾಗಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ. ತನ್ಮೂಲಕ ಅವರನ್ನು ನಾಡಿಗೆ ಇನ್ನಷ್ಟು ಸರಿಯಾಗಿ ಪರಿಚಯ ಮಾಡಿಕೊಡುತ್ತಿದೆ. ಇದು ನಿಜಕ್ಕೂ ಅತ್ಯುತ್ತಮ ಕಾರ್ಯಕ್ರಮ ಎಂದು ತಿಳಿಸಿದರು.

ಇದನ್ನೂ ಓದಿ: ಟಿವಿ9 ಮುಂಚೂಣಿ ಸ್ಥಾನದಲ್ಲಿ ಇದೆ ಎಂಬುದನ್ನು ಹೆಗ್ಗಳಿಕೆಯಿಂದ ಹೇಳಬೇಕಿದೆ- ತುಮಕೂರು ಸಿದ್ದಗಂಗಾ ಶ್ರೀಗಳ ಆಶೀರ್ವಚನ

Published On - 2:42 pm, Tue, 4 January 22

ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ದುಡ್ಡು ಎಗರಿಸಿದ ಕಳ್ಳ
ಬ್ಯಾಂಕ್​ನಿಂದ ಹಣ ಡ್ರಾ ಮಾಡಿಕೊಂಡು ಹೋಗುವಾಗ ದುಡ್ಡು ಎಗರಿಸಿದ ಕಳ್ಳ
‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು
‘ನಾನು ಮಾಡಿಕೊಂಡ ತಪ್ಪುಗಳಿಗೇ ನಾನೇ ಹೊಣೆ’: ನಟ ಯೋಗಿ ನೇರ ಮಾತು
ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್
ಶಿವಪುರಿ ಬಳಿ ಐಎಎಫ್ ಮಿರಾಜ್ 2000 ಯುದ್ಧ ವಿಮಾನ ಪತನ; ಪೈಲಟ್‌ಗಳು ಸೇಫ್
ಬೈಕ್ ಮಾಲೀಕ ಕಿರಣ್ ಕುಮಾರ್ ರೆಡ್ಡಿ ಮುಷ್ಟೂರಿನ ನಿವಾಸಿ
ಬೈಕ್ ಮಾಲೀಕ ಕಿರಣ್ ಕುಮಾರ್ ರೆಡ್ಡಿ ಮುಷ್ಟೂರಿನ ನಿವಾಸಿ
ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ವಿದೇಶಿ ಪ್ರಜೆಯನ್ನು ಬಲಿ ಪಡೆದ ಕಾಡಾನೆ, ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ
ಪರೀಕ್ಷಾ ಪೇ ಚರ್ಚಾಗೆ 3.5 ಕೋಟಿ ಜನರ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್
ಪರೀಕ್ಷಾ ಪೇ ಚರ್ಚಾಗೆ 3.5 ಕೋಟಿ ಜನರ ನೋಂದಣಿ; ಸಚಿವ ಧರ್ಮೇಂದ್ರ ಪ್ರಧಾನ್
ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬಕ್ಕೆ ಅಶೋಕ ಸಾಂತ್ವನ
ಫೈನಾನ್ಸ್ ಸಂಸ್ಥೆಯಿಂದ ಕಿರುಕುಳಕ್ಕೊಳಗಾದ ಕುಟುಂಬಕ್ಕೆ ಅಶೋಕ ಸಾಂತ್ವನ
ನೆಹರೂ ಸರ್ಕಾರ ದೇವ್ ಆನಂದ್, ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ಮೋದಿ
ನೆಹರೂ ಸರ್ಕಾರ ದೇವ್ ಆನಂದ್, ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ಮೋದಿ
ನಗರದ ಸೌಂದರ್ಯೀಕರಣಕ್ಕೆ ಬಿಎಂಆರ್​ಸಿಲ್ ಕೈ ಜೋಡಿಸಲಿದೆ: ಶಿವಕುಮಾರ್
ನಗರದ ಸೌಂದರ್ಯೀಕರಣಕ್ಕೆ ಬಿಎಂಆರ್​ಸಿಲ್ ಕೈ ಜೋಡಿಸಲಿದೆ: ಶಿವಕುಮಾರ್
ಸುದೀಪ್ ಭೇಟಿ ಮಾಡಿದ್ದು ಪರ್ಸನಲ್ ಕಾರಣಕ್ಕೆ: ಅಸಲಿ ವಿಷಯ ತಿಳಿಸಿದ ಡಿಕೆಶಿ
ಸುದೀಪ್ ಭೇಟಿ ಮಾಡಿದ್ದು ಪರ್ಸನಲ್ ಕಾರಣಕ್ಕೆ: ಅಸಲಿ ವಿಷಯ ತಿಳಿಸಿದ ಡಿಕೆಶಿ