AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಟಿವಿ9ನ ಹೆಚ್.​ವಿ. ಕಿರಣ್​ ನೇಮಕ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಸದಸ್ಯರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿವಿಧ ಪತ್ರಿಕೆ, ದೃಶ್ಯ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 11 ಸದಸ್ಯರನ್ನು ನೇಮಕ ಮಾಡಲಾಗಿದೆ. ಈ ಪೈಕಿ ಟಿವಿ9ನ ಕ್ರೈಂ ವಿಭಾಗದ ಮುಖ್ಯ ವರದಿಗಾರ ಹೆಚ್​ವಿ ಕಿರಣ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಟಿವಿ9ನ ಹೆಚ್.​ವಿ. ಕಿರಣ್​ ನೇಮಕ
ರಮೇಶ್ ಬಿ. ಜವಳಗೇರಾ
|

Updated on: Sep 26, 2024 | 9:05 PM

Share

ಬೆಂಗಳೂರು (ಸೆಪ್ಟೆಂಬರ್ 26): ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರನ್ನಾಗಿ ಟಿವಿ9ನ ಕ್ರೈಂ ವಿಭಾಗದ ಮುಖ್ಯ ವರದಿಗಾರ ಹೆಚ್​ವಿ ಕಿರಣ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ಇಂದು(ಸೆಪ್ಟೆಂಬರ್ 26)  ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ 11 ಜನ ಹಿರಿಯ ಪತ್ರಕರ್ತರು ಮತ್ತು ವರದಿಗಾರರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಪೈಕಿ ಹೆಚ್​ವಿ ಕಿರಣ್  ಅವರು ಹನ್ನೊಂದು ಸದಸ್ಯರ ಬಳಗದಲ್ಲಿದ್ದಾರೆ.

ಇನ್ನು ಇದರ ಜೊತೆಗೆ ಎರಡು ಪತ್ರಿಕೋದ್ಯಮ ಕಾಲೇಜುಗಳ ಮುಖ್ಯಸ್ಥರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ಸದಸ್ಯರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಇದನ್ನೂ ಓದಿ: ಟಿವಿ9ನ ಕಿರಣ್​ ಸೇರಿದಂತೆ 29 ಮಂದಿಗೆ ಬೆಂಗಳೂರು ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿ, ಡಿಕೆಶಿ ʼವರ್ಷದ ವ್ಯಕ್ತಿʼ 

ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದವರು

  • ಶಿವಾನಂದ ತಗಡೂರು, ಬೆಂಗಳೂರು
  • ಎಂ.ಇ. ಮಂಜುನಾಥ್, ದಾವಣಗೆರೆ
  • ಸಂಗಮೇಶ ಚೂರಿ, ವಿಜಯಪುರ
  • ಶೋಭಾ ಎಂ.ಸಿ, ಬೆಂಗಳೂರು
  • ಜೆ. ಅಬ್ಬಾಸ್‌ ಮುಲ್ಲಾ, ಧಾರವಾಡ
  • ಹೆಚ್.ವಿ. ಕಿರಣ್, ಬೆಂಗಳೂರು
  • ಅನಿಲ್ ವಿ. ಗೆಜ್ಜಿ, ಬೆಂಗಳೂರು
  • ಕೆಂಚೇಗೌಡ, ಬೆಂಗಳೂರು
  • ಯು. ಸುರೇಂದ್ರ ಶೆಣೈ, ಉಡುಪಿ
  • ರವಿ ಕೋಟಿ, ಮೈಸೂರು
  • ರಶ್ಮಿ ಎಸ್, ಬೆಂಗಳೂರು

ಪದನಿಮಿತ್ತ ಸದಸ್ಯರು

  • ಮೈಸೂರು ಮಾನಸ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು.
  • ಮಂಗಳೂರು ಮಂಗಳ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು.

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ