AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Digital Poll: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೇ? ನಿಮ್ಮ ಅಭಿಪ್ರಾಯ ತಿಳಿಸಿ

Indira Canteen: ರಾಜಕಾರಣದ ಈ ಎಲ್ಲ ಬೆಳವಣಿಗೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ‘ಟಿವಿ 9 ಕನ್ನಡ ಡಿಜಿಟಲ್’ ಸಾರ್ವಜನಿಕರ ಅಭಿಪ್ರಾಯಗಳನ್ನು ಮುಕ್ತವಾಗಿ ಆಹ್ವಾನಿಸಿದೆ. ‘ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೇ?’ ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಕಾಮೆಂಟ್ ಮೂಲಕ ತಿಳಿಸಿ

TV9 Kannada Digital Poll: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೇ? ನಿಮ್ಮ ಅಭಿಪ್ರಾಯ ತಿಳಿಸಿ
ಇಂದಿರಾ ಕ್ಯಾಂಟೀನ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 13, 2021 | 7:18 PM

Share

ರಾಜ್ಯ ರಾಜಕಾರಣವೀಗ ಇಂದಿರಾ ಕ್ಯಾಂಟೀನ್ (Indira Canteen) ಹೆಸರು ಬದಲಾವಣೆಯ ಸುತ್ತಲೇ ಗಿರಗಿರನೇ ಗಿರಕಿ ಹೊಡೆಯುತ್ತಿದೆ. ಹೆಸರು ಬದಲಾವಣೆಯ ಪ್ರಹಸನಗಳನ್ನು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಅನುಸರಿಸುವಂತಿದೆ ರಾಜ್ಯ ಬಿಜೆಪಿ ನಾಯಕರ ಮಾತುಗಳು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ ಮಹತ್ವಾಕಾಂಕ್ಷಿ ಯೋಜನೆ ‘ಇಂದಿರಾ ಕ್ಯಾಂಟೀನ್’ನ ಹೆಸರನ್ನು ಬದಲಿಸಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದೇ ತಡ, ಈವರೆಗೆ ಬಿಲ್ಲಿನಿಂದ ಚಿಮ್ಮಿದ ಬಾಣಗಳಂತೆ ಬಿಜೆಪಿಯ ಒಬ್ಬೊಬ್ಬರೇ ನಾಯಕರು ಸಿ.ಟಿ.ರವಿ (CT Ravi) ಮಾತಿಗೆ ದನಿಗೂಡಿಸಲಾರಂಬಿಸಿದ್ದಾರೆ. ಇದು ಸಹಜವಾಗಿ ಸಿದ್ದರಾಮಯ್ಯ (Siddaramaiah) ಮತ್ತು ಕಾಂಗ್ರೆಸ್ ನಾಯಕರ  ಸಿಟ್ಟು ಸೆಡವಿಗೆ ಕಾರಣವಾಗಿದೆ.

ಪಕ್ಕದ ತಮಿಳುನಾಡಿನ ‘ಅಮ್ಮಾ’ ಕ್ಯಾಂಟೀನ್​ ಉದಾಹರಣೆಯಾಗಿಟ್ಟುಕೊಂಡು ಬಹಳ ದೂರಾಲೋಚನೆಯಿಂದ ರೂಪಿಸಿದ ಯೋಜನೆ ಇಂದಿರಾ ಕ್ಯಾಂಟೀನ್. ಇಂದಿರಾ ಕ್ಯಾಂಟೀನ್ ಎಂಬ ಹೆಸರು ಸಿದ್ದರಾಮಯ್ಯ ರಾಜಕಾರಣದಲ್ಲಿ ತಮ್ಮ ಹೆಸರನ್ನು ಇನ್ನಷ್ಟು ಆಳವಾಗಿ ಬೇರೂರಿಸಿತು. ಒಳ್ಳೆ ಹೆಸರನ್ನೂ ಗಳಿಸಿಕೊಟ್ಟಿತು. ರಾಜ್ಯ ಜನರ ಮೆಚ್ಚುಗೆಯ ಜತೆಗೆ ಕಾಂಗ್ರೆಸ್ ಹೈಕಮಾಂಡ್ ಹೊಗಳಿಕೆಯೂ ಸಿದ್ದರಾಮಯ್ಯರಿಗೆ ದೊರೆಯಿತು. ಇಷ್ಟೆಲ್ಲ ಇರುವಾ ‘ಇಂದಿರಾ ಕ್ಯಾಂಟೀನ್’ ಹೆಸರು ಬದಲಾವಣೆಯ ಪ್ರಸ್ತಾಪ ಸಿದ್ದರಾಮಯ್ಯಗೆ ಕೋಪ ತರಿಸುವುದು ಸಹಜವೇ ತಾನೇ? ಬಹುಶಃ ಅವರನ್ನು ಕೆಣಕಲು ಎಂದೇ ಬಿಜೆಪಿ ನಾಯಕರೂ ದಿನೇದಿನೇ ಹೆಸರು ಬದಲಾವಣೆಯ ಮಾತನ್ನು ಪದೇಪದೇ ಎತ್ತುತ್ತಿದ್ದಾರೆ. ಈಮೂಲಕ ಸಂಘ ಮತ್ತು ಬಿಜೆಪಿ ನಿಷ್ಠರಲ್ಲಿ  ಭರವಸೆ ಮೂಡಿಸಲು ಸಹ ಅವರು ಪ್ರಯತ್ನಿಸುತ್ತಿದ್ದಾರೆ. 2019ರಲ್ಲೇ ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಿಸುವಂತೆ ಸಿ.ಟಿ.ರವಿ ಆಗ್ರಹಿಸಿದ್ದರು. ಇಂದಿರಾ ಕ್ಯಾಂಟೀನ್​ಗೆ ಸರ್ಕಾರದ ಹಣ ಖರ್ಚಾಗುತ್ತಿದೆ. ಹಾಗಾಗಿ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಅಂತ ಹೆಸರಿಡಲಿ ಎಂದು ಮನವಿ ಮಾಡಿದ್ದರು.

ರಾಜಕಾರಣದ ಈ ಎಲ್ಲ ಬೆಳವಣಿಗೆಗಳನ್ನು ಹಿನ್ನೆಲೆಯಾಗಿಟ್ಟುಕೊಂಡು ‘ಟಿವಿ 9 ಕನ್ನಡ ಡಿಜಿಟಲ್’ ಸಾರ್ವಜನಿಕರ ಅಭಿಪ್ರಾಯಗಳನ್ನು ಮುಕ್ತವಾಗಿ ಆಹ್ವಾನಿಸಿದೆ. ‘ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೇ?’ ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಕಾಮೆಂಟ್ ಮೂಲಕ ತಿಳಿಸಿ.

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸಬೇಕೇ? ಬೇಡವೆ? ನಿಮ್ಮ ಅಭಿಪ್ರಾಯ ತಿಳಿಸಿ

#TV9KannadaPoll #IndiraCanteen #AnnapurneshwariCanteen

Posted by Tv9Kannada on Friday, 13 August 2021

ಇದನ್ನೂ ಓದಿ: 

ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವಂತೆ ಸಿಎಂ ಬೊಮ್ಮಾಯಿಗೆ ಸಿ.ಟಿ.ರವಿ ಮನವಿ

ಇಂದಿರಾ ಕ್ಯಾಂಟೀನ್​ ಹೆಸರು ಬದಲಿಸಿದ್ರೆ ಪರಿಣಾಮ ನೆಟ್ಟಗಿರಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಎಚ್ಚರಿಕೆ

(TV9 Kannada Digital Poll do you want to Indira Canteen Name Change or not)

Published On - 7:17 pm, Fri, 13 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್