AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಹುಬ್ಬಳ್ಳಿ, ಕಲಬುರ್ಗಿಯಲ್ಲಿ ಟಿವಿ9 ಕನ್ನಡ ಎಜುಕೆಶನ್ ಸಮಿಟ್; ಮಕ್ಕಳ ಉಜ್ವಲ ಭವಿಷ್ಯಕ್ಕೆ ನಾಂದಿಹಾಡಿ

Opportunity for students to explore career possibilities and courses: ಟಿವಿ9 ಕನ್ನಡ ಎಜುಕೇಶನ್ ಸಮಿಟ್ 2024 ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ನಡೆಯುತ್ತಿದೆ. ಏಪ್ರಿಲ್ 12ರಿಂದ 14 ಬೆಂಗಳೂರಿನಲ್ಲಿ, ಏಪ್ರಿಲ್ 27ರಿಂದ 28 ಕಲಬುರ್ಗಿ, ಇನ್ನು ಮೇ 4 ಮತ್ತು 5ರಂದು ಹುಬ್ಬಳ್ಳಿಯಲ್ಲಿ ಶಿಕ್ಷಣ ಸಮಾವೇಶ ಇರುತ್ತದೆ. ಪ್ರತಿಷ್ಠಿತ ಕಾಲೇಜು, ಡೀಮ್ಡ್ ಯೂನಿವರ್ಸಿಟಿ, ಶಿಕ್ಷಣ ಸಂಸ್ಥೆಗಳು ಈ ಶೃಂಗಸಭೆಗೆ ಬರಲಿವೆ. ಉನ್ನತ ಶಿಕ್ಷಣ ಓದಬಯಸುವ ವಿದ್ಯಾರ್ಥಿಗಳಿಗೆ ಈ ಸಮಿಟ್​ನಲ್ಲಿ ಸೂಕ್ತ ಮಾರ್ಗದರ್ಶನ ಮತ್ತು ಮಾಹಿತಿ ಸಿಗುತ್ತದೆ.

ಬೆಂಗಳೂರು, ಹುಬ್ಬಳ್ಳಿ, ಕಲಬುರ್ಗಿಯಲ್ಲಿ ಟಿವಿ9 ಕನ್ನಡ ಎಜುಕೆಶನ್ ಸಮಿಟ್; ಮಕ್ಕಳ ಉಜ್ವಲ ಭವಿಷ್ಯಕ್ಕೆ ನಾಂದಿಹಾಡಿ
TV9 Web
| Edited By: |

Updated on:Apr 10, 2024 | 2:00 PM

Share

ಬೆಂಗಳೂರು, ಏಪ್ರಿಲ್ 2: ಟಿವಿ9 ಕನ್ನಡ ವಾಹಿನಿ ವತಿಯಿಂದ ಶಿಕ್ಷಣ ಶಂಗಸಭೆ (TV9 Kannada Education Summit) ನಡೆಯುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ದಾರಿ ಕಂಡುಕೊಳ್ಳಲು ಸಹಾಯವಾಗಿ ಮೂರು ದಿನಗಳ ಎಜುಕೇಶನ್ ಸಮಿಟ್ ಅನ್ನು ಟಿವಿ9 ಕನ್ನಡ ಆಯೋಜಿಸಿದೆ. ವಿವಿಧ ಲಭ್ಯ ಕೋರ್ಸ್​ಗಳು, ಉತ್ತಮ ಕಾಲೇಜುಗಳು, ಯೂನಿವರ್ಸಿಟಿಗಳು (deemed universities), ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿಯನ್ನು ಈ ಸಮಿಟ್​ನಲ್ಲಿ ಪಡೆಯಬಹುದು. ಹೊಸ ವೃತ್ತಿ ಅವಕಾಶಗಳ ಬಗ್ಗೆ ತಜ್ಞರ ಅಭಿಪ್ರಾಯಗಳನ್ನು ಪಡೆಯಬಹುದು. ಪ್ರತಿಷ್ಠಿತ ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಬಳಿ ಬರಲು ಟಿವಿ9 ಕನ್ನಡ ಒಂದು ಉತ್ತಮ ವೇದಿಕೆ ಮಾಡಿದೆ. ಉನ್ನತ ಶಿಕ್ಷಣದ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಈ ಶಿಕ್ಷಣ ಶೃಂಗಸಭೆ ಬಹಳ ಪ್ರಯೋಜನಕಾರಿ ಎನಿಸುತ್ತದೆ.

ಬೆಂಗಳೂರು, ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಈ ಎಜುಕೇಶನ್ ಸಮಿಟ್ ನಡೆಯಲಿದೆ. ಬೆಂಗಳೂರಿನಲ್ಲಿ ಏಪ್ರಿಲ್ 12ರಿಂದ 14ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ. ಈ ಮೂರು ಸ್ಥಳಗಳಲ್ಲಿ ಯಾವ್ಯಾವ ದಿನಗಳಲ್ಲಿ ಶೃಂಗಸಭೆ ನಡೆಯುತ್ತದೆ ಎನ್ನುವ ವಿವರ ಕೊನೆಯಲ್ಲಿ ಇದೆ.

ಟಿವಿ9 ಕನ್ನಡ ಎಜುಕೇಶನ್ ಎಕ್ಸ್​ಪೋದ ಮುಖ್ಯಾಂಶಗಳು

ಎಂಜಿನಿಯರಿಂಗ್, ಮೆಡಿಸಿನ್, ಫಾರ್ಮಾ, ಕಲೆ ಮತ್ತು ವಿಜ್ಞಾನ, ಫೈರ್ ಸೇಫ್ಟಿ, ಹೋಟೆಲ್ ಮ್ಯಾನೇಜ್ಮೆಂಟ್, ಅನಿಮೇಶನ್, ಕಾಮರ್ಸ್, ಫೈನಾನ್ಸ್, ಮ್ಯಾನೇಜ್ಮೆಂಟ್ ಇತ್ಯಾದಿ ವಿವಿಧ ವಿಭಾಗಗಳಲ್ಲಿ ಲಭ್ಯ ಇರುವ ಕೋರ್ಸ್​ಗಳ ಬಗ್ಗೆ ಎಕ್ಸ್​ಪೋದಲ್ಲಿ ಮಾಹಿತಿ ಪಡೆಯಬಹುದು.

ಪ್ರತಿಷ್ಠಿತ ಮತ್ತು ಅಗ್ರಮಾನ್ಯ ಡೀಮ್ಡ್ ಯೂನಿವರ್ಸಿಟಿಗಳು ಮತ್ತು ಶಿಕ್ಷಣ ಸಂಸ್ಥೆಗಳು, ಕಾಲೇಜುಗಳ ವೃತ್ತಿಪರರೊಂದಿಗೆ ನೇರವಾಗಿ ಮಾತನಾಡಿ, ಕೋರ್ಸ್, ಅಡ್ಮಿಶನ್ ಪ್ರಕ್ರಿಯೆ ಇತ್ಯಾದಿ ಮಾಹಿತಿ ಪಡೆಯಲು ಸುವರ್ಣಾವಕಾಶ ಸಿಗುತ್ತದೆ.

ವಿವಿಧ ವೃತ್ತಿ ಸಾಧ್ಯತೆಗಳು, ಅದಕ್ಕೆ ಸಂಬಂಧಿಸಿದ ಕೋರ್ಸ್​ಗಳನ್ನು ಅವಲೋಕಿಸಬಹುದು. ಸಿಇಟಿ, ಜೆಇಇ, ನೀಟ್, ಕಾಮೆಡ್​ಕೆ ಬಗ್ಗೆ ಮಾರ್ಗದರ್ಶನ ಪಡೆಯಬಹುದು.

ಈ ಸಮಿಟ್​ನಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಭರ್ಜರಿ ಉಡುಗೊರೆ ಸಿಗುವ ಅವಕಾಶ ತಪ್ಪಿಸಿಕೊಳ್ಳದಿರಿ…

ಟಿವಿ9 ಕನ್ನಡ ಎಜುಕೇಶನ್ ಸಮಿಟ್ 2024: ಸ್ಥಳ ಮತ್ತು ದಿನಾಂಕ

2024ರ ಏಪ್ರಿಲ್ 12ರಿಂದ 14

ಸ್ಥಳ: ತ್ರಿಪುರವಾಸಿನಿ, ಅರಮನೆ ಮೈದಾನ, ಬೆಂಗಳೂರು


2024ರ ಏಪ್ರಿಲ್ 27ರಿಂದ 28

ಸ್ಥಳ: ಡಾ. ಬಸವರ ಅಪ್ಪ ಸ್ಮಾರಕ ಭವನ, ಅಪ್ಪ ಕೆರೆ ಎದುರು, ಕಲಬುರ್ಗಿ


2024ರ ಮೇ 4ರಿಂದ 5

ಸ್ಥಳ: ಶ್ರೀನಿವಾಸ ಗಾರ್ಡನ್, ಕುಸುಗಲ್ ರಸ್ತೆ, ಹುಬ್ಬಳ್ಳಿ

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Tue, 2 April 24

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?