TV9 Kannada News Live: ರಾಜ್ಯಕ್ಕೆ ಮತ್ತೆ ವಾಪಸಾಯ್ತಾ ಮಹಾಮಾರಿ ಕೊರೊನಾ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ಆಂಧ್ರದಲ್ಲಿ ಕೋವಿಡ್ ಸಾವು ಹಾಗೂ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಆತಂಕ, ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿರುವ ಟ್ರಂಪ್-ಇರಾನ್ ಸುಂಕದ ಸಮರ ಮತ್ತು ಮಂಗಳೂರಿನಲ್ಲಿ ಮುಂದುವರಿದ ಅಕ್ರಮ ಬಾಂಗ್ಲಾ ವಲಸಿಗರ ಬಂಧನ ಕಾರ್ಯಾಚರಣೆ ಸೇರಿದಂತೆ ದೇಶ, ವಿದೇಶ ಹಾಗೂ ರಾಜ್ಯದ ಇಂದಿನ ಎಲ್ಲಾ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಲೈವ್ ಸುದ್ದಿಗಳು ಇಲ್ಲಿ ಲಭ್ಯ.

LIVE NEWS & UPDATES
-
ದಾವಣಗೆರೆ: ಲಾರಿ ಪಲ್ಟಿ; ಚಾಲಕ ಸ್ಥಳದಲ್ಲೇ ದುರ್ಮರಣ
ಹಾವೇರಿಯಿಂದ ದಾಬಸ್ಪೇಟೆಗೆ ಸಿಮೆಂಟ್ ಶೀಟ್ ಹೊತ್ತು ಸಾಗುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿ ದಾವಣಗೆರೆಯ ತುಂಗಭದ್ರಾ ಬಡಾವಣೆ ಬಳಿ ಪಲ್ಟಿಯಾಗಿದೆ. ಸಿಮೆಂಟ್ ಶೀಟ್ಗಳ ಅಡಿ ಸಿಲುಕಿ ಚಾಲಕ ರಮೇಶ್ (55) ಸ್ಥಳದಲ್ಲೇ ಸಾವನ್ನಪ್ಪಿದ್ದು, ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ನೆಲಮಂಗಲದಲ್ಲಿ ಚಿರತೆ ಪ್ರತ್ಯಕ್ಷ; ಆತಂಕದಲ್ಲಿ ನಿವಾಸಿಗಳು
ನೆಲಮಂಗಲದ ಮೋಟಗಾನಹಳ್ಳಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಮನೆಯಿಂದ ಹೊರಬರಲು ಭೀತಿಗೊಂಡಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯಬೇಕೆಂದು ಗ್ರಾಮಸ್ಥರು ತೀವ್ರವಾಗಿ ಆಗ್ರಹಿಸಿದ್ದಾರೆ.
-
-
ಕೋಲಾರ: ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ
ಕೋಲಾರ ಎಪಿಎಂಸಿ ಮಾರುಕಟ್ಟೆ ಬಳಿ ಗಾಂಜಾ ಮಾರುತ್ತಿದ್ದ ಉತ್ತರ ಪ್ರದೇಶ ಮೂಲದ ಬೋಲಾನಾಥ್ ಪಾಲ್ (45) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹2.5 ಲಕ್ಷ ಮೌಲ್ಯದ 4.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ಮಾಜಿ ಸಚಿವ ರಾಮಚಂದ್ರೇಗೌಡ ನಿಧನ
ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ, ಮಾಜಿ ಸಚಿವ ರಾಮಚಂದ್ರೇಗೌಡ (88) ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 6 ಬಾರಿ ಎಂಎಲ್ಸಿ ಹಾಗೂ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.
-
ಕಲಬುರಗಿ: ಜೈಲಿನಿಂದ ಮೂವರು ಕೈದಿಗಳು ಪರಾರಿ
ಕಲಬುರಗಿ ಕೇಂದ್ರ ಕಾರಾಗೃಹದ ಕಾಂಪೌಂಡ್ ಹಾರಿ ಬೀದರ್ ಕೊಲೆ ಪ್ರಕರಣದ ಸಜಾ ಕೈದಿಗಳಾದ ಮಸ್ತಾನ್, ಸಂತೋಷ್ ಮತ್ತು ಸಾಗರ್ ತಡರಾತ್ರಿ ಪರಾರಿಯಾಗಿದ್ದಾರೆ. ಈ ಕುರಿತು ಫರತಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೈದಿಗಳಿಗಾಗಿ ತೀವ್ರ ಹುಡುಕಾಟ ನಡೆದಿದೆ.
-
Breaking News Today Live Updates in Kannada: ನೆರೆರಾಜ್ಯ ಆಂಧ್ರಪ್ರದೇಶದ ಕಡಪಾದಲ್ಲಿ ಕೋವಿಡ್ಗೆ ಇಬ್ಬರು ಬಲಿಯಾಗಿದ್ದು, ಕರ್ನಾಟಕದಲ್ಲೂ ಜುಲೈನಲ್ಲಿ ಪ್ರಕರಣಗಳ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಸೋಂಕಿನ ಗಂಭೀರತೆ ಕಡಿಮೆ ಇದ್ದರೂ ರಾಜ್ಯದಲ್ಲಿ ಮತ್ತೊಮ್ಮೆ ಕೊರೊನಾ ಭೀತಿ ಶುರುವಾಗಿದೆ. ಮಂಗಳೂರಿನ ಉರ್ವಾ ಸಮೀಪ ಪೊಲೀಸರು ಕಾರ್ಯಾಚರಣೆ ನಡೆಸಿ 11 ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇತ್ತ ಅಮೆರಿಕ ಅಧ್ಯಕ್ಷ ಟ್ರಂಪ್ ಹಾರ್ಮುಜ್ ಜಲಸಂಧಿಯಲ್ಲಿ ಶೇ20ರಷ್ಟು ಸುರಕ್ಷತಾ ಶುಲ್ಕ ವಿಧಿಸಿದ್ದು, ಇರಾನ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸುಂಕದ ಸಮರದಿಂದ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಭಾರತದ ಆರ್ಥಿಕತೆಗೆ ಪೆಟ್ಟು ಬೀಳುವ ಆತಂಕ ಎದುರಾಗಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Jul 14,2026 8:27 AM




