AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಜೈಲಿನಿಂದ ಎಸ್ಕೇಪ್ ಆದ ಕೈದಿಗೆ ಗುಂಡೇಟು, ಕಮಿಷನರ್ ಹೇಳಿದ್ದೇನು ನೋಡಿ

Karnataka News Today Live Updates: ಸಿಎಂ ಡಿಕೆ ಶಿವಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಜುಲೈ 17 ರ ನಂತರ ಮುಖ್ಯಮಂತ್ರಿಗಳು ದೆಹಲಿಗೆ ತೆರಳುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್‌ ನಿರ್ವಹಣೆಗೆ ಹೊಸ ಕಾನೂನು ತರುವ ಬಗ್ಗೆ ಸಿಎಂ ನೇತೃತ್ವದಲ್ಲಿ ಸಂವಾದ, ಬಿಡದಿ ರೈತರ ಪ್ರತಿಭಟನೆ ಸೇರಿದಂತೆ ಇಂದಿನ ಎಲ್ಲ ಸುದ್ದಿ ಬೆಳವಣಿಗೆಗಳ ಕ್ಷಣ ಕ್ಷಣದ ಅಪ್​ಡೇಟ್ ಇಲ್ಲಿ ಲಭ್ಯ.

TV9 Kannada News Live: ಜೈಲಿನಿಂದ ಎಸ್ಕೇಪ್ ಆದ ಕೈದಿಗೆ ಗುಂಡೇಟು, ಕಮಿಷನರ್ ಹೇಳಿದ್ದೇನು ನೋಡಿ
ಪೊಲೀಸ್ ಕಮಿಷನರ್ ಡಾ. ಶರಣಪ್ಪ ಪ್ರತಿಕ್ರಿಯೆImage Credit source: tv9
ಗಣಪತಿ ಶರ್ಮಾ
|

Updated on:Jul 15, 2026 | 8:49 AM

Share

LIVE NEWS & UPDATES

  • 15 Jul 2026 08:47 AM (IST)

    ಜೈಲಿನಿಂದ ಎಸ್ಕೇಪ್ ಆದ ಕೈದಿಗೆ ಗುಂಡೇಟು, ಕಮಿಷನರ್ ಹೇಳಿದ್ದೇನು ನೋಡಿ

    ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಕೈದಿಗಳ ಪೈಕಿ ಒಬ್ಬನ ಬಂಧನಕ್ಕೆ ಕಾರ್ಯಾಚರಣೆ ವೇಳೆ ಪೊಲೀಸರು ಗುಂಡು ಹಾರಿಸಿದ ಬಗ್ಗೆ ಕಲಬುರಗಿ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಪ್ರತಿಕ್ರಿಯಿಸಿದ್ದಾರೆ. ಅವರು ಮಾತನಾಡಿರುವ ವಿಡಿಯೋ ಇಲ್ಲಿದೆ.

  • 15 Jul 2026 08:10 AM (IST)

    ಫುಟ್​​ಬಾಲ್ ಪ್ರೇಮಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್

    ಫುಟ್​​ಬಾಲ್ ಪ್ರೇಮಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ಬೆಂಗಳೂರಿನಲ್ಲಿ ತಡರಾತ್ರಿವರೆಗೂ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಿದೆ. ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಮನವಿ ಮೇರೆಗೆ ತೀರ್ಮಾನ ಕೈಗೊಂಡಿರುವ ಸರ್ಕಾರ, ತಡರಾತ್ರಿ 1ರಿಂದ 3.30ರವರೆಗೂ ಹೋಟೆಲ್, ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡಿದೆ. ಇಂದು ಸೆಮಿಫೈನಲ್ ಮತ್ತು ಜುಲೈ 19ರಂದು ಫೈನಲ್​​​ ಪಂದ್ಯ ಹಿನ್ನೆಲೆ ಈ ಅನುಮತಿ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಮತ್ತು ಎಲ್ಲಾ ರೀತಿಯ ಭದ್ರತೆ ನೋಡಿಕೊಂಡು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಎಕ್ಸ್ ಖಾತೆಯಲ್ಲಿ ಉಲ್ಲೇಖಿಸಿದ್ದಾರೆ.

  • 15 Jul 2026 08:09 AM (IST)

    ಬಿಡದಿ ಬಳಿ ಟೌನ್​ಶಿಪ್​ ಯೋಜನೆ ವಿರೋಧಿಸಿ ರೈತರ ಧರಣಿ

    ಬಿಡದಿ ಬಳಿ ಟೌನ್​ಶಿಪ್​ ಯೋಜನೆ ವಿರೋಧಿಸಿ ರೈತರ ಧರಣಿ ಮುಂದುವರಿದಿದ್ದು, ಅನ್ನದಾತರ ಹೋರಾಟಕ್ಕೆಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸಾಥ್ ನೀಡುವ ಸಾಧ್ಯತೆ ಇದೆ.

  • 15 Jul 2026 08:09 AM (IST)

    ಅಪಾರ್ಟ್‌ಮೆಂಟ್‌ಗಳಿಗೆ ಹೊಸ ಕಾನೂನು ತರಲು ಸರ್ಕಾರ ಸಜ್ಜು

    ಅಪಾರ್ಟ್‌ಮೆಂಟ್‌ಗಳಿಗೆ ಹೊಸ ಕಾನೂನು ತರಲು ಸರ್ಕಾರ ಸಜ್ಜಾಗಿದ್ದು, ಇಂದು ಬೆಳಗ್ಗೆ 11ಕ್ಕೆ ಜವಹರಲಾಲ್ ನೆಹರು ತಾರಾಲಯದಲ್ಲಿ ಅಪಾರ್ಟ್ಮೆಂಟ್ ಸಂಘದ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಉಪಸ್ಥಿತರಿರಲಿದ್ದಾರೆ.

Breaking News Today Live Updates in Kannada: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲು ಜುಲೈ 17ರ ನಂತರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು ತರಲು ಸರಕಾರ ಮುಂದಾಗಿದ್ದು, ಆ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೊಂದೆಡೆ ಬಿಡದಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಫುಟ್ಬಾಲ್ ಪ್ರೇಮಿಗಳಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದ್ದು, ತಡರಾತ್ರಿ 1 ಗಂಟೆಯಿಂದ 3.30 ರ ಹೋಟೆಲ್, ರೆಸ್ಟೋರೆಂಟ್ ತೆರೆದಿಡಲು ಅನುಮತಿ ನೀಡಿದೆ. ಇದರೊಂದಿಗೆ ರಾಜ್ಯ, ರಾಷ್ಟ್ರೀಯ, ಕ್ರೀಡೆ, ಸಿನಿಮಾ ಸೇರಿದಂತೆ ಇಂದಿನ ಎಲ್ಲಾ ಸುದ್ದಿ ಬೆಳವಣಿಗೆಗಳ ತಾಜಾ ಮಾಹಿತಿಗಾಗಿ ಈ ಪುಟವನ್ನು ರಿಫ್ರೆಷ್ ಮಾಡುತ್ತಾ ಇರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - Jul 15,2026 8:07 AM

Follow Us