TV9 Kannada News Live: ಇಂದು ಪ್ರಧಾನಿ ನರೇಂದ್ರ ಮೋದಿ 76ನೇ ಜನ್ಮದಿನದ ಸಂಭ್ರಮ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ಇಂದು ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಬೃಹತ್ ಬೈಕ್ ಯಾತ್ರೆ, ಬೆಂಗಳೂರಿನ ಇಂದಿರಾ ಕ್ಯಾಂಟೀನ್ನಲ್ಲೇ ನಂದಿನಿ ಹಾಲು ಹಾಗೂ ಭಟ್ಕಳದಲ್ಲಿ ಮೆರವಣಿಗೆ ವೇಳೆ ಉದ್ವಿಗ್ನತೆ ಸೃಷ್ಟಿಯಾಗಿದೆ. ಈ ಎಲ್ಲಾ ಪ್ರಮುಖ ಸುದ್ದಿಗಳು, ಕ್ಷಣಕ್ಷಣದ ಬ್ರೇಕಿಂಗ್ ಅಪ್ಡೇಟ್ಗಳು ಇಲ್ಲಿವೆ.

LIVE NEWS & UPDATES
-
ತಳವಾರ ಸಮುದಾಯ ಎಸ್ಟಿಗೆ ಸೇರಿಸಲು ಆಗ್ರಹ: ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದವರು ವಶಕ್ಕೆ!
ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡ (ST) ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಫಜಲಪುರ ತಾಲೂಕಿನ ಚವಡಾಪುರ ಗ್ರಾಮದ ಬಳಿ ಪ್ರತಿಭಟನೆಗೆ ಸಜ್ಜಾಗಿದ್ದ ತಳವಾರ ಸಮುದಾಯದ ಮುಖಂಡ ಶಿವಕುಮಾರ್ ಸೇರಿದಂತೆ ಹಲವು ಹೋರಾಟಗಾರರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
-
ರಷ್ಯಾ ತೈಲ ಖರೀದಿಸುವ ಭಾರತ-ಚೀನಾಗೆ ಶೇ 100 ಸುಂಕ
ರಷ್ಯಾ ವಿರುದ್ಧ ಅಮೆರಿಕ ಕಾಂಗ್ರೆಸ್ ಕಠಿಣ ಮಸೂದೆ ಅಂಗೀಕರಿಸಿದೆ. ರಷ್ಯಾದಿಂದ ತೈಲ ಅಥವಾ ಅನಿಲ ಖರೀದಿಸುವ ಭಾರತ ಮತ್ತು ಚೀನಾದಂತಹ ದೇಶಗಳ ಮೇಲೆ ಶೇಕಡಾ 100ರಷ್ಟು ಭಾರಿ ಸುಂಕ ವಿಧಿಸಲು ಪ್ರಸ್ತಾವಿಸಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಬಿದ್ದ ಬಳಿಕ ಈ ಕಾಯ್ದೆ ಜಾರಿಗೆ ಬರಲಿದೆ.
-
-
ತೆಲಂಗಾಣದಲ್ಲಿ ಗಣೇಶ ವಿಸರ್ಜನೆ ವೇಳೆ ದುರಂತ: ಕೆರೆಯಲ್ಲಿ ಮುಳುಗಿ 6 ವಿದ್ಯಾರ್ಥಿಗಳು ಸಾವು!
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪೆದ್ದ ಕಂಜೆರ್ಲ ಗ್ರಾಮದ ನೇರೇಡು ಚೆರುವು ಕೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ಆರು ಮಂದಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಸಂಸ್ಥೆಯೊಂದರ ವಸತಿನಿಲಯದಲ್ಲಿದ್ದ ವಿದ್ಯಾರ್ಥಿಗಳು ಗಣೇಶ ವಿಸರ್ಜನೆಗೆ ಕೆರೆಗೆ ತೆರಳಿದ್ದಾಗ ಮೂರ್ತಿಯನ್ನು ನೀರಾಳಕ್ಕೆ ಕೊಂಡೊಯ್ಯುವಾಗ ಆಕಸ್ಮಿಕವಾಗಿ ನೀರಿನ ಆಳಕ್ಕೆ ಜಾರಿ ಈ ಅನಾಹುತ ಸಂಭವಿಸಿದೆ. ಮೃತರನ್ನು ನರಸಿಂಹ ರಾಜು, ಸುಮಂತ್, ಗಣೇಶ್, ಉದಯ ಕಿರಣ್, ಶ್ಯಾಮ್ ಕುಮಾರ್ ಮತ್ತು ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಸ್ಥಳೀಯರ ನೆರವಿನಿಂದ ಪೊಲೀಸರು ಮೃತದೇಹಗಳನ್ನು ಹೊರತೆಗೆದಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
-
ಪ್ರಧಾನಿ ಮೋದಿ ಜನ್ಮದಿನ: ಪುರಿ ಕಡಲತೀರದಲ್ಲಿ2500 ದೀಪಗಳ 25 ಅಡಿ ಮರಳು ಕಲಾಕೃತಿ!
ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಖ್ಯಾತ ಮರಳುಶಿಲ್ಪಿ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಕಡಲತೀರದಲ್ಲಿ ಬರೋಬ್ಬರಿ 25 ಅಡಿ ಎತ್ತರದ ಭವ್ಯ ಮರಳು ಕಲಾಕೃತಿಯನ್ನು ರಚಿಸಿದ್ದಾರೆ. ಈ ಆಕರ್ಷಕ ಶಿಲ್ಪವನ್ನು ಸುಮಾರು 2500 ಮಣ್ಣಿನ ಹಣತೆಗಳಿಂದ ಅದ್ಭುತವಾಗಿ ಅಲಂಕರಿಸಿ, ‘ಆಶೀರ್ವಾದದ ದೀಪ’ಎಂಬ ವಿಶೇಷ ಸಂದೇಶವನ್ನು ಸಾರಿದ್ದಾರೆ. ವೀಡಿಯೋ ನೋಡಿ
-
ಡಿವೈಡರ್ಗೆ ಸರ್ಕಾರಿ ಬಸ್ ಡಿಕ್ಕಿ, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ರಾಮಾಪುರ ಗ್ರಾಮದ ಬಳಿ ಆಂಧ್ರದ ಶಾಂತಿಪುರಂನಿಂದ ಕೆಜಿಎಫ್ಗೆ ಬರುತ್ತಿದ್ದ ಸರ್ಕಾರಿ ಬಸ್ ಡಿವೈಡರ್ಗೆ ಡಿಕ್ಕಿಯಾಗಿದೆ. ಬಸ್ನಲ್ಲಿದ್ದ ೪೦ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ ೧೦ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಅವರನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
-
ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ: ಪಟೇಲ್ ಪುತ್ಥಳಿಗೆ ಸಿಎಂ ಮಾಲಾರ್ಪಣೆ
79ನೇ ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಕಲಬುರಗಿಯ ಸರ್ದಾರ್ ಪಟೇಲ್ ವೃತ್ತದಲ್ಲಿರುವ ಪಟೇಲ್ ಅವರ ಪುತ್ಥಳಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಲಾರ್ಪಣೆ ಮಾಡಿ ಶುಭಾಶಯ ಕೋರಿದರು. ಸಚಿವ ಪ್ರಿಯಾಂಕ್ ಖರ್ಗೆ, ಸಚಿವರು ಹಾಗೂ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Breaking News Today Live Updates in Kannada: ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಹುಟ್ಟುಹಬ್ಬದ ಅಂಗವಾಗಿ ಕಾಶಿಯಿಂದ ವಡ್ನಗರದವರೆಗೆ 500 ಬೈಕರ್ಗಳ ಬೃಹತ್ ‘ಸೇವಾ ಸಂಕಲ್ಪ’ ಯಾತ್ರೆಗೆ ಚಾಲನೆ ನೀಡಲಾಗಿದೆ. ಮತ್ತೊಂದೆಡೆ, ಬೆಂಗಳೂರಿನ 79 ಇಂದಿರಾ ಕ್ಯಾಂಟೀನ್ ಆವರಣಗಳಲ್ಲಿ ನಂದಿನಿ ಹಾಲಿನ ಮಳಿಗೆಗಳನ್ನು ಸ್ಥಾಪಿಸಲು ಜಿಬಿಎ ಪ್ರಸ್ತಾವನೆ ಸಲ್ಲಿಸಿದ್ದು, ಬಮುಲ್ಗೆ ಜಾಗ ಗುತ್ತಿಗೆ ನೀಡಲು ಮುಂದಾಗಿದೆ. ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪ ಕೇಳಿಬಂದಿದ್ದು, ಸ್ಥಳದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Sep 17,2026 9:10 AM




