
ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳು, “ನಾವು ಮಾಡಿದ್ದು ತಪ್ಪು, ಕಾನೂನು ಕೈಗೆತ್ತಿಕೊಳ್ಳಬಾರದು” ಎಂದು ಕೈಮುಗಿದು ಬೇಡಿಕೊಳ್ಳುತ್ತಿರುವ ವಿಡಿಯೋವನ್ನು ಬೆಂಗಳೂರು ಪೊಲೀಸರು ಹಂಚಿಕೊಂಡಿದ್ದಾರೆ. ಹಲ್ಲೆಕೋರರನ್ನು ‘ಸಮಾಜಘಾತುಕ ಶಕ್ತಿಗಳು’ ಎಂದು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ತೀವ್ರವಾಗಿ ಖಂಡಿಸಿದ್ದರು. ವೀಡಿಯೋ ನೋಡಿ
ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರಿಗೆ ಶುಭಾಶಯ ಕೋರಲು ಮಾತ್ರ ತಾವು ದೆಹಲಿಗೆ ತೆರಳಿದ್ದಾಗಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನೀಟ್ ಅಕ್ರಮದ ಬಗ್ಗೆ ತಕ್ಷಣ ಚರ್ಚೆಗೆ ಪಟ್ಟುಹಿಡಿದು ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು. ಪ್ರಶ್ನೋತ್ತರ ಕಲಾಪದ ಬಳಿಕ ಚರ್ಚೆಗೆ ಸಿದ್ಧವೆಂದು ಕೇಂದ್ರ ಸರ್ಕಾರ ತಿಳಿಸಿ, ಸ್ಪೀಕರ್ ಓಂ ಬಿರ್ಲಾ ಮನವಿ ಮಾಡಿದರೂ ವಿಪಕ್ಷಗಳು ಗದ್ದಲ ಮುಂದುವರಿಸಿದವು.
ದಾವಣಗೆರೆಯಲ್ಲಿ ಹಫ್ತಾ ವಸೂಲಿ, ಸೈಟ್ ದಂಧೆಯಂತಹ ಅಪರಾಧಗಳಲ್ಲಿ ಭಾಗಿಯಾಗುತ್ತಿದ್ದ 145 ರೌಡಿಶೀಟರ್ಗಳನ್ನು ಎಸ್ಪಿ ಡಾ. H.T. ಶೇಖರ್ ಪರೇಡ್ ನಡೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಇತ್ತೀಚೆಗೆ ಜಿಮ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ, ಜಿಲ್ಲೆಯ ಜಿಮ್ಗಳಿಗೆ ಭೇಟಿ ನೀಡಿ ಮಹಿಳೆಯರ ಸುರಕ್ಷತೆ ಕುರಿತು ಪರಿಶೀಲನೆ ನಡೆಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ 6 ರಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಸತೀಶ್ ಕುಮಾರ್ ಹಾಗೂ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ನೇತೃತ್ವದಲ್ಲಿ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಯಲ್ಲಿ ಶೇ.80 ರಷ್ಟು ಸ್ವದೇಶಿ ತಂತ್ರಜ್ಞಾನ ಹೊಂದಿರುವ ‘ಮಾಲ್ವಾಣ್’ ಯುದ್ಧನೌಕೆ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಲಿದೆ. ಕೊಚ್ಚಿ ಶಿಪ್ಯಾರ್ಡ್ನಲ್ಲಿ ನಿರ್ಮಾಣಗೊಂಡ ಈ ನೌಕೆ, ಅಭಯ್ ಸೋನಾರ್ ವ್ಯವಸ್ಥೆ ಹಾಗೂ ಜಲಾಂತರ್ಗಾಮಿ ನಿರೋಧಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದು, ಸಮುದ್ರದಲ್ಲಿ ಅತ್ಯಂತ ವೇಗವಾಗಿ ಕಾರ್ಯಾಚರಣೆ ನಡೆಸುವ ಸಾಮರ್ಥ್ಯ ಪಡೆದಿದೆ. ವೀಡಿಯೋ ನೋಡಿ
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಇಂದು ಕೋಲಾರಕ್ಕೆ ಆಗಮಿಸಲಿದ್ದು, ಬರಗಾಲ ಹಾಗೂ ಪ್ರಮುಖ ಕಂದಾಯ ವಿಷಯಗಳ ಕುರಿತು ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸ್ಥಳೀಯ ಕಾಂಗ್ರೆಸ್ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ, ಸಂಕಷ್ಟದಲ್ಲಿರುವ ಬರಪೀಡಿತ ಪ್ರದೇಶಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.
ಹಾವೇರಿ ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದ ರೈತ ಸೋಮನಗೌಡ ಮುದಿಗೌಡರ (44) ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಗಾರು ಕೈಕೊಟ್ಟು ಬೆಳೆ ನಾಶವಾಗಿದ್ದರಿಂದ ಹಾಗೂ 10 ಲಕ್ಷ ರೂ. ಅಧಿಕ ಸಾಲ ತೀರಿಸುವಂತೆ ಬ್ಯಾಂಕ್ ನೋಟಿಸ್ ಬಂದಿದ್ದರಿಂದ ಮನನೊಂದು ಜಮೀನಿನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಗುತ್ತಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲದ ಕುಲುವನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ಲೋರೈಡ್ ಕೆಮಿಕಲ್ ಲಾರಿ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 1 ಕಿ.ಮೀ ಗೂ ಹೆಚ್ಚು ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೆಮಿಕಲ್ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.
ಟಿ.ನರಸೀಪುರ ಪಟ್ಟಣದಲ್ಲಿ ಅನಾಮಿಕ ಯುವಕನೊಬ್ಬ ಕೈಯಲ್ಲಿ ಚಾಕು ಹಿಡಿದು ಓಡಾಡುತ್ತಾ ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದಾನೆ. ತಕ್ಷಣ ಜಾಗೃತರಾದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
Breaking News Today Live Updates in Kannada: ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿದೆ. ಹೈಕಮಾಂಡ್ ನಾಯಕರ ಲಭ್ಯತೆ ಇಲ್ಲದ ಕಾರಣ ಪ್ರಕ್ರಿಯೆ ವಿಳಂಬವಾಗಿದ್ದು, ವಾರಾಂತ್ಯದಲ್ಲಿ ಅಂತಿಮ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮತ್ತೊಂದೆಡೆ, ರಾಜ್ಯದ ಕರಾವಳಿ ಹಾಗೂ ವಿವಿಧೆಡೆ ಇಂದಿನಿಂದ (ಜುಲೈ 22) ಇನ್ನೆರಡು ದಿನ ಸಾಧಾರಣ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ 40-50 ಕಿ.ಮೀ ವೇಗದ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ನೀಟ್ ಪರೀಕ್ಷೆ ಸೋರಿಕೆ ಖಂಡಿಸಿ 32ನೇ ದಿನವೂ ಪ್ರತಿಭಟನೆ ಕಾಯ್ದುಕೊಂಡಿರುವ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಹೈಕೋರ್ಟ್ ಆದೇಶದಂತೆ ಮೆದಾಂತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 8:48 am, Wed, 22 July 26