AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್‌, ದೆಹಲಿಯಲ್ಲಿ ಕೈ ನಾಯಕರ ಬಿರುಸಿನ ಸಭೆ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ಆಗಸ್ಟ್ 1ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಾಗೂ ವಿವೇಕ ಸ್ಮಾರಕ ಉದ್ಘಾಟನೆ, ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಮಹತ್ವದ ಸಚಿವ ಸಂಪುಟ ವಿಸ್ತರಣೆ ಸಭೆ, ಮತ್ತು ಬಿಹಾರದಲ್ಲಿ ಪ್ರತಿಭಟನಾಕಾರರ ಮೇಲಿನ ಕೇಸ್ ವಾಪಸ್ ಸೇರಿದಂತೆ ಇಂದಿನ ಪ್ರಮುಖ ರಾಜಕೀಯ ಹಾಗೂ ರಾಜ್ಯದ ಲೈವ್ ನ್ಯೂಸ್ ಅಪ್‌ಡೇಟ್‌ಗಳನ್ನು ಇಲ್ಲೇ ವೀಕ್ಷಿಸಿ.

TV9 Kannada News Live: ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್‌, ದೆಹಲಿಯಲ್ಲಿ ಕೈ ನಾಯಕರ ಬಿರುಸಿನ ಸಭೆ; ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಸಂಪುಟ ವಿಸ್ತರಣೆ ಕೌಂಟ್‌ಡೌನ್‌
ಭಾವನಾ ಹೆಗಡೆ
|

Updated on:Jul 28, 2026 | 9:49 AM

Share

LIVE NEWS & UPDATES

  • 28 Jul 2026 09:49 AM (IST)

    ಹುಳಿಮಾವು ಗ್ರಾಮದಲ್ಲಿ ಚಿರತೆ ದಾಳಿ, ಹಸು ಬಲಿ; ಬೋನು ಇರಿಸಿದ ಅರಣ್ಯ ಇಲಾಖೆ!

    ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹುಳಿಮಾವು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಾದಪ್ಪ ಎಂಬುವರ ಹಸುವಿನ ಮೇಲೆ ದಾಳಿ ನಡೆಸಿದೆ. ಇದರಿಂದ ಗ್ರಾಮಸ್ಥರಲ್ಲಿ ತೀವ್ರ ಆತಂಕ ಎದುರಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದಾರೆ.

  • 28 Jul 2026 09:14 AM (IST)

    ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು ಆರೋಪ; ಆಸ್ಪತ್ರೆ ಎದುರು ಸಂಬಂಧಿಕರ ಆಕ್ರೋಶ!

    ಹಾಸನದ ಮಂಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಸಂಕೇನಹಳ್ಳಿಯ ನಾರಾಯಣ್ ಎಂಬುವರು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಡಿಸ್ಚಾರ್ಜ್ ಮಾಡುವುದಾಗಿ ಹೇಳಿ, ದಿಢೀರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ತಿಳಿಸಿ, ಡಾ. ರವಿ ಉಡಾಫೆಯಾಗಿ ಉತ್ತರಿಸಿದ್ದಾರೆ ಎಂದು ಆರೋಪಿಸಿ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ.

  • 28 Jul 2026 09:13 AM (IST)

    ದೆಹಲಿಯಲ್ಲಿ ಇಂದು CWRC ಸಭೆ: ತಮಿಳುನಾಡಿಗೆ ತಕ್ಕ ತಿರುಗೇಟು ನೀಡಲು ಕರ್ನಾಟಕ ಸಿದ್ಧ!

    ಕಾವೇರಿ ನೀರಿಗಾಗಿ ದೆಹಲಿಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಮಹತ್ವದ ಸಭೆ ನಡೆಯಲಿದೆ. ಜೂನ್-ಜುಲೈ ಪಾಲಿನ ನೀರಿಗೆ ತಮಿಳುನಾಡು ಪಟ್ಟು ಹಿಡಿದಿದ್ದರೆ, ಮಳೆ ಅಭಾವ ಮತ್ತು ಕೆಆರ್‌ಎಸ್‌ನಲ್ಲಿ ಕುಡಿಯುವ ನೀರಿಗಷ್ಟೇ ಸಂಗ್ರಹವಿರುವುದನ್ನು ವಿವರಿಸಿ, ನೀರು ಹರಿಸಲು ಸಾಧ್ಯವಿಲ್ಲವೆಂದು ಕರ್ನಾಟಕ ಸರ್ಕಾರ ತನ್ನ ಖಡಕ್ ವಾದ ಮಂಡಿಸಲಿದೆ.

Breaking News Today Live Updates in Kannada: ಆಗಸ್ಟ್ 1ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದು, ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸ್ವಾಮಿ ವಿವೇಕಾನಂದ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ವಿಸ್ತರಣೆಯ ಕಾವು ಏರಿದ್ದು, 20 ಖಾಲಿ ಸಚಿವ ಸ್ಥಾನಗಳ ಭರ್ತಿಗೆ ಹೈಕಮಾಂಡ್ ಜತೆ ಅಂತಿಮ ಚರ್ಚೆ ನಡೆಸಲು ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಈ ನಡುವೆ, ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಸಿಜೆಪಿ ನೀಡಿದ್ದ ಎಚ್ಚರಿಕೆಗೆ ಮಣಿದ ಬಿಹಾರ ಸರ್ಕಾರ, ಬಂಧಿತರ ಬಿಡುಗಡೆ ಹಾಗೂ ಎಫ್‌ಐಆರ್‌ಗಳನ್ನು ಹಿಂಪಡೆಯುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - Jul 28,2026 9:13 AM

Follow Us
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ