TV9 Kannada News Live: ಕರ್ನಾಟಕಕ್ಕೆ ತಟ್ಟಿದ ಕಾವೇರಿ ನೀರು ಹಂಚಿಕೆಯ ಕಾವು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates: ನಾಡಿನೆಲ್ಲೆಡೆ ಗುರು ಪೂರ್ಣಿಮಾ ಸಂಭ್ರಮ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ CWRC ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ತೀವ್ರ ಪ್ರತಿಭಟನೆ. ಮತ್ತೊಂದೆಡೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ. ಇಂದಿನ ಪ್ರಮುಖ ವಿದ್ಯಮಾನಗಳ ಲೈವ್ ಅಪ್ಡೇಟ್ಸ್ ಇಲ್ಲಿದೆ.

LIVE NEWS & UPDATES
-
ಕಾವೇರಿ ವಿವಾದ: ಮೈಸೂರಿನಲ್ಲಿ ಇಂದು ರೈತರಿಂದ ರಸ್ತೆ ತಡೆ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಇಂದು ಮಧ್ಯಾಹ್ನ 12.30ಕ್ಕೆ ಮೈಸೂರಿನ ಕುವೆಂಪು ಪಾರ್ಕ್ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಯಲಿದೆ. ರಾಜ್ಯದ ರೈತರಿಗೆ ನೀರಿನ ಆದ್ಯತೆ ನೀಡಲು ಹಾಗೂ ಸರ್ಕಾರ ದೃಢ ನಿಲುವು ತಾಳಲು ಒತ್ತಾಯಿಸಲಾಗುವುದು.
Breaking News Today Live Updates in Kannada: ಇಂದು ದೇಶಾದ್ಯಂತ ಗುರು ಪೂರ್ಣಿಮೆಯ ಪವಿತ್ರ ಆಚರಣೆ ಜೋರಾಗಿದ್ದು, ಜ್ಞಾನದ ಬೆಳಕು ತೋರಿದ ಗುರುಗಳಿಗೆ ಗೌರವ ಸಲ್ಲಿಸಲಾಗುತ್ತಿದೆ. ಇನ್ನೊಂದೆಡೆ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಪಂಜಿನ ಮೆರವಣಿಗೆ ನಡೆಸಿ, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ, ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Jul 29,2026 8:35 AM




