TV9 Kannada News Live: ಕರ್ನಾಟಕಕ್ಕೆ ತಟ್ಟಿದ ಕಾವೇರಿ ನೀರು ಹಂಚಿಕೆಯ ಕಾವು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates: ನಾಡಿನೆಲ್ಲೆಡೆ ಗುರು ಪೂರ್ಣಿಮಾ ಸಂಭ್ರಮ. ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ CWRC ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ತೀವ್ರ ಪ್ರತಿಭಟನೆ. ಮತ್ತೊಂದೆಡೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ. ಇಂದಿನ ಪ್ರಮುಖ ವಿದ್ಯಮಾನಗಳ ಲೈವ್ ಅಪ್ಡೇಟ್ಸ್ ಇಲ್ಲಿದೆ.

TV9 Kannada News Live: ಕರ್ನಾಟಕಕ್ಕೆ ತಟ್ಟಿದ ಕಾವೇರಿ ನೀರು ಹಂಚಿಕೆಯ ಕಾವು! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಕರ್ನಾಟಕಕ್ಕೆ ತಟ್ಟಿದ ಕಾವೇರಿ ನೀರು ಹಂಚಿಕೆಯ ಕಾವು!

Updated on: Jul 29, 2026 | 10:00 AM

LIVE NEWS & UPDATES

  • 29 Jul 2026 10:00 AM (IST)

    ಲಾವಣ್ಯ ಕೊಲೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರಿನ ಬಂಟ್ವಾಳದ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಹತ್ಯೆಗೈದ ಆರೋಪಿ ಚೇತನ್‌ಗೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿ ನೀಡಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ವಶಕ್ಕೆ ಪಡೆದ ಪೊಲೀಸರು, ಹತ್ಯೆ ನಡೆದ ಸ್ಥಳ ಮಹಜರು ನಡೆಸಿದರು.

  • 29 Jul 2026 09:38 AM (IST)

    ಅಸ್ಸಾಂ ಪ್ರವಾಹ: ಸಾವಿನ ಸಂಖ್ಯೆ 75ಕ್ಕೆ ಏರಿಕೆ!

    ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಶಿವಸಾಗರ್ ಜಿಲ್ಲೆಯ ನಜೀರಾ ವಲಯದಲ್ಲಿ ಮತ್ತೆ 7 ಜನರು ಸಾವನ್ನಪ್ಪುವುದರೊಂದಿಗೆ ಒಟ್ಟು ಮೃತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಪ್ರವಾಹದಿಂದ 3.32 ಲಕ್ಷ ಜನರು ಸಂಕಷ್ಟಕ್ಕೆ ಈಡಾಗಿದ್ದು, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

  • 29 Jul 2026 09:38 AM (IST)

    ದೆಹಲಿಯಲ್ಲಿ ರಾಕೇಶ್ ಟಿಕಾಯತ್ ಭೇಟಿಯಾದ ಸಿಜೆಪಿ ನಾಯಕರು!

    ದೆಹಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಅವರೊಂದಿಗೆ ಸಿಜೆಪಿ (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಹಾಗೂ ಹಲವು ಮುಖಂಡರು ಸಭೆ ನಡೆಸಿದ್ದಾರೆ. ವಿದ್ಯಾರ್ಥಿಗಳು, ಯುವಕರು ಮತ್ತು ರೈತರ ಜಂಟಿ ವೇದಿಕೆ ರಚನೆ ಹಾಗೂ ಮುಂದಿನ ಹೋರಾಟದ ರಣನೀತಿ ಕುರಿತು ನಾಯಕರು ಸುದೀರ್ಘ ಚರ್ಚೆ ನಡೆಸಿದರು.

  • 29 Jul 2026 09:38 AM (IST)

    ಸಚಿವ ಸಂಪುಟ ವಿಸ್ತರಣೆ: ದೆಹಲಿಗೆ ಹಾರಿದ ಜಮೀರ್!

    ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದ್ದು, ಮಾಜಿ ಸಚಿವ ಜಮೀರ್ ಅಹಮದ್ ಬೆಳಿಗ್ಗೆ 7 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನದ ಮೂಲಕ ದೆಹಲಿಗೆ ತೆರಳಿದ್ದಾರೆ. ಸಚಿವ ಸ್ಥಾನದ ಕುರಿತು ಹೈಕಮಾಂಡ್ ನಾಯಕರ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ.

  • 29 Jul 2026 09:37 AM (IST)

    CWRC ಆದೇಶ: ದೆಹಲಿಯಲ್ಲಿ ಸಿಎಂ ಡಿಕೆಶಿ ವಕೀಲರ ಸಭೆ!

    ತಮಿಳುನಾಡಿಗೆ ನೀರು ಹರಿಸುವಂತೆ ಸಿಡಬ್ಲ್ಯೂಆರ್‌ಸಿ (CWRC) ನೀಡಿದ ಆದೇಶದ ಹಿನ್ನೆಲೆಯಲ್ಲಿ, ಸಿಎಂ ಡಿ.ಕೆ. ಶಿವಕುಮಾರ್ ಇಂದು ದೆಹಲಿಯಲ್ಲಿ ರಾಜ್ಯದ ಕಾನೂನು ತಂಡದೊಂದಿಗೆ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಹಿರಿಯ ವಕೀಲ ಮೋಹನ್ ಕಾತರಕಿ ಹಾಗೂ ನ್ಯಾಯತಜ್ಞರ ಜತೆ ಚರ್ಚಿಸಿ, ಮುಂದೆ ಕೈಗೊಳ್ಳಬೇಕಾದ ಕಾನೂನು ಕ್ರಮಗಳ ಕುರಿತು ಮಹತ್ವದ ಆಲೋಚನೆ ನಡೆಸಲಿದ್ದಾರೆ.

     

  • 29 Jul 2026 09:37 AM (IST)

    ಖಾಸಗಿ ವೈದ್ಯರ ನಿರ್ಲಕ್ಷ್ಯಕ್ಕೆ 11 ತಿಂಗಳ ಮಗು ಸಾವು!

    ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿಯಲ್ಲಿ ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ 11 ತಿಂಗಳ ಮಗು ಪೂರ್ವಿಕ ಸಾವನ್ನಪ್ಪಿದ್ದಾಳೆ. ವೈದ್ಯರು ನೀಡಿದ ಅವಧಿ ಮುಗಿದ (ಎಕ್ಸ್‌ಪೈರಿ) ಔಷಧ ಹಾಕಿದ ತಕ್ಷಣ ಮಗುವಿನ ಆರೋಗ್ಯ ಹಾಲಾಟು ಮೃತಪಟ್ಟಿದೆ ಎಂದು ಪೋಷಕರಾದ ವಸುಂಧರ ಹಾಗೂ ಲೋಕೇಶ್ ಆರೋಪಿಸಿದ್ದಾರೆ.

  • 29 Jul 2026 08:36 AM (IST)

    ಕಾವೇರಿ ವಿವಾದ: ಮೈಸೂರಿನಲ್ಲಿ ಇಂದು ರೈತರಿಂದ ರಸ್ತೆ ತಡೆ

    ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಇಂದು ಮಧ್ಯಾಹ್ನ 12.30ಕ್ಕೆ ಮೈಸೂರಿನ ಕುವೆಂಪು ಪಾರ್ಕ್ ಬಳಿ ರಸ್ತೆ ತಡೆ ಪ್ರತಿಭಟನೆ ನಡೆಯಲಿದೆ. ರಾಜ್ಯದ ರೈತರಿಗೆ ನೀರಿನ ಆದ್ಯತೆ ನೀಡಲು ಹಾಗೂ ಸರ್ಕಾರ ದೃಢ ನಿಲುವು ತಾಳಲು ಒತ್ತಾಯಿಸಲಾಗುವುದು.

Breaking News Today Live Updates in Kannada: ಇಂದು ದೇಶಾದ್ಯಂತ ಗುರು ಪೂರ್ಣಿಮೆಯ ಪವಿತ್ರ ಆಚರಣೆ ಜೋರಾಗಿದ್ದು, ಜ್ಞಾನದ ಬೆಳಕು ತೋರಿದ ಗುರುಗಳಿಗೆ ಗೌರವ ಸಲ್ಲಿಸಲಾಗುತ್ತಿದೆ. ಇನ್ನೊಂದೆಡೆ, ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿರುವುದನ್ನು ವಿರೋಧಿಸಿ ಮಂಡ್ಯದಲ್ಲಿ ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಪಂಜಿನ ಮೆರವಣಿಗೆ ನಡೆಸಿ, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಈ ನಡುವೆ, ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿYouTube video player

Published On - 8:35 am, Wed, 29 July 26

Loading...
Unable to load recommendations.
Follow Us