TV9 Kannada News Live: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸ್ವಸಹಾಯ ಸಂಘದ ಹೆಸರಲ್ಲಿ ಬಡ ಮಹಿಳೆಯರಿಗೆ ಲಕ್ಷ ಲಕ್ಷ ವಂಚನೆ
Karnataka News Today Live Updates: ದರ್ಶನ್ ಪ್ರಕರಣದಲ್ಲಿ A-14 ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿ ಮಹತ್ವದ ತಿರುವು ನೀಡಿದ್ದಾರೆ. ಹೊಸಕೋಟೆಯಲ್ಲಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ಲೋನ್ ವಂಚನೆ ನಡೆದಿದೆ. ಗದಗದಲ್ಲಿ ಉಪಲೋಕಾಯುಕ್ತರು ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರು ಜೈಲಿನಲ್ಲಿ ಕೈದಿ ಮರಣ ಮತ್ತು ಬೀದರ್ ರಸ್ತೆ ಕಾಮಗಾರಿ ಸ್ಥಗಿತದಂತಹ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ

LIVE NEWS & UPDATES
-
ಕಲಬುರಗಿಯಲ್ಲಿ ಭೀಕರ ಬರ: ರೈತರ ಖಾತೆಗೆ 10, 20 ರೂಪಾಯಿ ಬೆಳೆವಿಮೆ ಜಮಾ
ಭೀಕರ ಬರದ ಬೇಗೆಯಿಂದ ತತ್ತರಿಸಿರುವ ಕಲಬುರಗಿ ಜಿಲ್ಲೆಯ ಅನ್ನದಾತರಿಗೆ ಬೆಳೆವಿಮೆ ಕಂಪನಿಗಳು ಹಾಗೂ ಅಧಿಕಾರಿಗಳು ಗಾಯದ ಮೇಲೆ ಬರೆ ಎಳೆದಿದ್ದಾರೆ. ಮಳೆಯಿಲ್ಲದೆ ಬೆಳೆ ಸಂಪೂರ್ಣ ನಾಶವಾಗಿದ್ದರೂ, ವಿಮೆ ಪಾವತಿಸಿದ್ದ ರೈತರ ಖಾತೆಗೆ ಕೇವಲ 10, 20 ಹಾಗೂ 50-60 ರೂಪಾಯಿಗಳ ಬಿಡಿಗಾಸಿನ ಪರಿಹಾರ ಜಮಾ ಮಾಡುವ ಮೂಲಕ ತೀವ್ರ ಅನ್ಯಾಯ ಎಸಗಲಾಗಿದೆ.
-
ಗದಗ ಕಸ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತರ ದಿಢೀರ್ ಭೇಟಿ
ಗದಗ ನಗರದ ಬಳಗಾನೂರು ರಸ್ತೆಯಲ್ಲಿರುವ ಕಸ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟಕದ ದುಸ್ಥಿತಿ ಕಂಡು ಕೆಂಡಾಮಂಡಲವಾದ ಉಪಲೋಕಾಯುಕ್ತರು, “13 ವರ್ಷಗಳಿಂದ ಇದೇ ಅವ್ಯವಸ್ಥೆ ಇದೆ ಅಂದರೆ ನೀವೇನು ಮಾಡುತ್ತಿದ್ದೀರಿ? ಸರ್ಕಾರದ ಬಳಿ ಹಣ ಇಲ್ಲವೆಂದರೆ ಹೇಳಿ, ನಾನೇ ಹಣ ಮಂಜೂರು ಮಾಡಿಸಿಕೊಡುತ್ತೇನೆ” ಎಂದು ಆಕ್ರೋಶ ಹೊರಹಾಕಿದರು.
-
-
ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು: ಕುಟುಂಬಸ್ಥರಿಂದ ಅನುಮಾನ
ರಾಯಚೂರು ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ದೇವದುರ್ಗ ತಾಲೂಕಿನ ಮೆದರಗೋಳ ಗ್ರಾಮದ ನಿವಾಸಿ ಭೀಮರಾಯ (42). ಕೊಲೆ ಪ್ರಕರಣವೊಂದರಲ್ಲಿ ಕಳೆದ 2 ತಿಂಗಳ ಹಿಂದೆ ಜೈಲು ಸೇರಿದ್ದ ಭೀಮರಾಯಗೆ ನಿನ್ನೆ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹಾಗೂ ಜೈಲು ಸಿಬ್ಬಂದಿ ತಿಳಿಸಿದ್ದಾರೆ.
-
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಎ-14 ಆರೋಪಿ ಪ್ರದೋಷ್ ಅರ್ಜಿ
ನಟ ದರ್ಶನ್ ಅಂಡ್ ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿ (A-14) ಪ್ರದೋಷ್, ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ತಿಳಿಸಿ ತಮ್ಮನ್ನು ‘ಮಾಫಿ ಸಾಕ್ಷಿ’ (Approver) ಯನ್ನಾಗಿ ಪರಿಗಣಿಸಿ ಕ್ಷಮೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ (CCH) ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದು, ನಟ ದರ್ಶನ್ ಇರುವ ಜೈಲು ಕೊಠಡಿಯಿಂದ ಅಲ್ಲದೆ ಬೇರೆ ಪ್ರತ್ಯೇಕ ಜೈಲು ಕೊಠಡಿಯಿಂದ ತಮ್ಮನ್ನು ಕೋರ್ಟ್ಗೆ ಹಾಜರುಪಡಿಸಬೇಕೆಂದು ಮನವಿ ಮಾಡಿದ್ದಾರೆ.
Breaking News Today Live Updates in Kannada: ನಟ ದರ್ಶನ್ ಅಂಡ್ ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಭಾರಿ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ 14ನೇ ಆರೋಪಿ (A-14) ಪ್ರದೋಷ್, ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ತಿಳಿಸಿ ತಮ್ಮನ್ನು ‘ಮಾಫಿ ಸಾಕ್ಷಿ’ (Approver) ಯನ್ನಾಗಿ ಪರಿಗಣಿಸಿ ಕ್ಷಮೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ರಾಯಚೂರು ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಗದಗ ನಗರದ ಬಳಗಾನೂರು ರಸ್ತೆಯಲ್ಲಿರುವ ಕಸ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ವಸಹಾಯ ಸಂಘದ ಹೆಸರಿನಲ್ಲಿ ಬ್ಯಾಂಕ್ನಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಹೊಸಕೋಟೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೆಳಕಿಗೆ ಬಂದಿದೆ. ಬೀದರ್ ತಾಲೂಕಿನ ಮಮದಾಪುರದಿಂದ ಮರಕಲ್ವರೆಗಿನ 5 ಕಿಲೋಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಗುತ್ತಿಗೆದಾರ ಪಲಾಯನ ಮಾಡಿದ್ದು, ಸಾರ್ವಜನಿಕರು ಹಾಗೂ ರೈತರು ನಿತ್ಯ ಪರದಾಡುವಂತಾಗಿದೆ. ಸ್ವಸಹಾಯ ಸಂಘದ ಹೆಸರಿನಲ್ಲಿ ಬ್ಯಾಂಕ್ನಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಹೊಸಕೋಟೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೆಳಕಿಗೆ ಬಂದಿದೆ. ಗದಗ ನಗರದ ಬಳಗಾನೂರು ರಸ್ತೆಯಲ್ಲಿರುವ ಕಸ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
Published On - Aug 06,2026 9:20 AM




