TV9 Kannada News Live: ನೆಟ್ಟಾರು ಹತ್ಯೆ ಪ್ರಕರಣ: 25ನೇ ಆರೋಪಿ ಉಮ್ಮರ್ ಫಾರೂಕ್ ಬಂಧಿಸಿದ ಎನ್‌ಐಎ

Karnataka News Today Live Updates: ದರ್ಶನ್ ಪ್ರಕರಣದಲ್ಲಿ A-14 ಪ್ರದೋಷ್ ಮಾಫಿ ಸಾಕ್ಷಿಯಾಗಲು ಅರ್ಜಿ ಸಲ್ಲಿಸಿ ಮಹತ್ವದ ತಿರುವು ನೀಡಿದ್ದಾರೆ. ಹೊಸಕೋಟೆಯಲ್ಲಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ಲೋನ್ ವಂಚನೆ ನಡೆದಿದೆ. ಗದಗದಲ್ಲಿ ಉಪಲೋಕಾಯುಕ್ತರು ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಯಚೂರು ಜೈಲಿನಲ್ಲಿ ಕೈದಿ ಮರಣ ಮತ್ತು ಬೀದರ್ ರಸ್ತೆ ಕಾಮಗಾರಿ ಸ್ಥಗಿತದಂತಹ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ

TV9 Kannada News Live: ನೆಟ್ಟಾರು ಹತ್ಯೆ ಪ್ರಕರಣ: 25ನೇ ಆರೋಪಿ ಉಮ್ಮರ್ ಫಾರೂಕ್ ಬಂಧಿಸಿದ ಎನ್‌ಐಎ
Praveen Nettaru Murder Case Nia

Updated on: Aug 06, 2026 | 11:07 AM

LIVE NEWS & UPDATES

  • 06 Aug 2026 11:05 AM (IST)

    ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 4 ಲಕ್ಷ ರೂ. ಇನಾಮು ಘೋಷಿತ ಮೋಸ್ಟ್ ವಾಂಟೆಡ್ ಆರೋಪಿ ಕೊಚ್ಚಿಯಲ್ಲಿ ಎನ್‌ಐಎ ಖೆಡ್ಡಾಗೆ

    ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸಫಲ ಕಾರ್ಯಾಚರಣೆ ನಡೆಸಿ ಬಂಧಿಸಿದೆ.

  • 06 Aug 2026 10:43 AM (IST)

    ನನಗೆ ಸಚಿವ ಸ್ಥಾನ ಸಿಗದಂತೆ ನಮ್ಮ ಜಿಲ್ಲೆಯವರೇ ಅಡ್ಡಿಪಡಿಸಿದ್ರು

    ರಾಜ್ಯ ಸಚಿವ ಸಂಪುಟ ಸೇರ್ಪಡೆ ಹಾಗೂ ಸಚಿವ ಸ್ಥಾನ ವಂಚಿತ ವಿಚಾರಕ್ಕೆ ಸಂಬಂಧಿಸಿದಂತೆ ಆಳಂದ ಕ್ಷೇತ್ರದ ಕಾಂಗ್ರೆಸ್ ಹಿರಿಯ ಶಾಸಕ ಬಿ.ಆರ್. ಪಾಟೀಲ್ ಅವರು ಸ್ವಪಕ್ಷೀಯರ ವಿರುದ್ಧವೇ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ನನಗೆ ಸಚಿವ ಸ್ಥಾನ ಸಿಗದಂತೆ ತಡೆಯಲು ನಮ್ಮ ಸ್ವಂತ ಜಿಲ್ಲೆಯ ನಾಯಕರೇ ಅಡ್ಡಿಪಡಿಸಿದ್ದಾರೆ ಎಂಬ ಬಾಂಬ್ ಸಿಡಿಸಿದ್ದಾರೆ.

  • 06 Aug 2026 09:44 AM (IST)

    ಕಲಬುರಗಿಯಲ್ಲಿ ಭೀಕರ ಬರ: ರೈತರ ಖಾತೆಗೆ 10, 20 ರೂಪಾಯಿ ಬೆಳೆವಿಮೆ ಜಮಾ

    ಭೀಕರ ಬರದ ಬೇಗೆಯಿಂದ ತತ್ತರಿಸಿರುವ ಕಲಬುರಗಿ ಜಿಲ್ಲೆಯ ಅನ್ನದಾತರಿಗೆ ಬೆಳೆವಿಮೆ ಕಂಪನಿಗಳು ಹಾಗೂ ಅಧಿಕಾರಿಗಳು ಗಾಯದ ಮೇಲೆ ಬರೆ ಎಳೆದಿದ್ದಾರೆ. ಮಳೆಯಿಲ್ಲದೆ ಬೆಳೆ ಸಂಪೂರ್ಣ ನಾಶವಾಗಿದ್ದರೂ, ವಿಮೆ ಪಾವತಿಸಿದ್ದ ರೈತರ ಖಾತೆಗೆ ಕೇವಲ 10, 20 ಹಾಗೂ 50-60 ರೂಪಾಯಿಗಳ ಬಿಡಿಗಾಸಿನ ಪರಿಹಾರ ಜಮಾ ಮಾಡುವ ಮೂಲಕ ತೀವ್ರ ಅನ್ಯಾಯ ಎಸಗಲಾಗಿದೆ.

  • 06 Aug 2026 09:24 AM (IST)

    ಗದಗ ಕಸ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತರ ದಿಢೀರ್ ಭೇಟಿ

    ಗದಗ ನಗರದ ಬಳಗಾನೂರು ರಸ್ತೆಯಲ್ಲಿರುವ ಕಸ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟಕದ ದುಸ್ಥಿತಿ ಕಂಡು ಕೆಂಡಾಮಂಡಲವಾದ ಉಪಲೋಕಾಯುಕ್ತರು, “13 ವರ್ಷಗಳಿಂದ ಇದೇ ಅವ್ಯವಸ್ಥೆ ಇದೆ ಅಂದರೆ ನೀವೇನು ಮಾಡುತ್ತಿದ್ದೀರಿ? ಸರ್ಕಾರದ ಬಳಿ ಹಣ ಇಲ್ಲವೆಂದರೆ ಹೇಳಿ, ನಾನೇ ಹಣ ಮಂಜೂರು ಮಾಡಿಸಿಕೊಡುತ್ತೇನೆ” ಎಂದು ಆಕ್ರೋಶ ಹೊರಹಾಕಿದರು.

  • 06 Aug 2026 09:23 AM (IST)

    ರಾಯಚೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು: ಕುಟುಂಬಸ್ಥರಿಂದ ಅನುಮಾನ

    ರಾಯಚೂರು ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ದೇವದುರ್ಗ ತಾಲೂಕಿನ ಮೆದರಗೋಳ ಗ್ರಾಮದ ನಿವಾಸಿ ಭೀಮರಾಯ (42). ಕೊಲೆ ಪ್ರಕರಣವೊಂದರಲ್ಲಿ ಕಳೆದ 2 ತಿಂಗಳ ಹಿಂದೆ ಜೈಲು ಸೇರಿದ್ದ ಭೀಮರಾಯಗೆ ನಿನ್ನೆ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹಾಗೂ ಜೈಲು ಸಿಬ್ಬಂದಿ ತಿಳಿಸಿದ್ದಾರೆ.

  • 06 Aug 2026 09:23 AM (IST)

    ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಎ-14 ಆರೋಪಿ ಪ್ರದೋಷ್ ಅರ್ಜಿ

    ನಟ ದರ್ಶನ್ ಅಂಡ್ ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 14ನೇ ಆರೋಪಿ (A-14) ಪ್ರದೋಷ್, ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ತಿಳಿಸಿ ತಮ್ಮನ್ನು ‘ಮಾಫಿ ಸಾಕ್ಷಿ’ (Approver) ಯನ್ನಾಗಿ ಪರಿಗಣಿಸಿ ಕ್ಷಮೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪ್ರದೋಷ್ ಪರ ವಕೀಲರು 59ನೇ ಸಿಸಿಹೆಚ್ (CCH) ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದು, ನಟ ದರ್ಶನ್ ಇರುವ ಜೈಲು ಕೊಠಡಿಯಿಂದ ಅಲ್ಲದೆ ಬೇರೆ ಪ್ರತ್ಯೇಕ ಜೈಲು ಕೊಠಡಿಯಿಂದ ತಮ್ಮನ್ನು ಕೋರ್ಟ್‌ಗೆ ಹಾಜರುಪಡಿಸಬೇಕೆಂದು ಮನವಿ ಮಾಡಿದ್ದಾರೆ.

Breaking News Today Live Updates in Kannada: ನಟ ದರ್ಶನ್ ಅಂಡ್ ಗ್ಯಾಂಗ್ ಒಳಗೊಂಡಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇದೀಗ ಭಾರಿ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ 14ನೇ ಆರೋಪಿ (A-14) ಪ್ರದೋಷ್, ಪ್ರಕರಣದಲ್ಲಿ ಸತ್ಯ ಹೇಳುವುದಾಗಿ ತಿಳಿಸಿ ತಮ್ಮನ್ನು ‘ಮಾಫಿ ಸಾಕ್ಷಿ’ (Approver) ಯನ್ನಾಗಿ ಪರಿಗಣಿಸಿ ಕ್ಷಮೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ರಾಯಚೂರು ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಗದಗ ನಗರದ ಬಳಗಾನೂರು ರಸ್ತೆಯಲ್ಲಿರುವ ಕಸ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ವಸಹಾಯ ಸಂಘದ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಹೊಸಕೋಟೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೆಳಕಿಗೆ ಬಂದಿದೆ. ಬೀದರ್ ತಾಲೂಕಿನ ಮಮದಾಪುರದಿಂದ ಮರಕಲ್‌ವರೆಗಿನ 5 ಕಿಲೋಮೀಟರ್ ರಸ್ತೆ ಕಾಮಗಾರಿಯನ್ನು ಅರ್ಧಕ್ಕೆ ಬಿಟ್ಟು ಗುತ್ತಿಗೆದಾರ ಪಲಾಯನ ಮಾಡಿದ್ದು, ಸಾರ್ವಜನಿಕರು ಹಾಗೂ ರೈತರು ನಿತ್ಯ ಪರದಾಡುವಂತಾಗಿದೆ. ಸ್ವಸಹಾಯ ಸಂಘದ ಹೆಸರಿನಲ್ಲಿ ಬ್ಯಾಂಕ್‌ನಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿ ಬಡ ಮಹಿಳೆಯರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಹೊಸಕೋಟೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬೆಳಕಿಗೆ ಬಂದಿದೆ. ಗದಗ ನಗರದ ಬಳಗಾನೂರು ರಸ್ತೆಯಲ್ಲಿರುವ ಕಸ ನಿರ್ವಹಣಾ ಘಟಕಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಪಣೀಂದ್ರ ಅವರು ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

🔴LIVE | TV9 KANNADA NEWS | ಟಿವಿ9 ಕನ್ನಡ ನ್ಯೂಸ್ ಲೈವ್ | TV9 KANNADA NEWS LIVE

Published On - 9:20 am, Thu, 6 August 26

Loading...
Unable to load recommendations.
Follow Us