TV9 Kannada News Live: ನಿದ್ದೆಯಲ್ಲಿದ್ದಾಗಲೇ ಕುಸಿದುಬಿದ್ದ ಮನೆ, ಗೃಹಜ್ಯೋತಿ ಯೋಜನೆಯಲ್ಲಿ ಭಾರಿ ಪರಿಷ್ಕರಣೆ, ಇಲ್ಲಿದೆ ಇಂದಿನ ಪ್ರಮುಖ ಸುದ್ದಿಗಳು
Karnataka News Today Live Updates: ಭಾರೀ ಮಳೆಗೆ ಮನೆ ಕುಸಿದು ಮೂವರು ಸಾವು. ರಾಜ್ಯದ ಗೃಹಜ್ಯೋತಿ ಯೋಜನೆಗೆ ಹೊಸ ಪರಿಷ್ಕರಣೆ, ಮತದಾರರ ಗುರುತು ಚೀಟಿ ಹಾಗೂ ಜಾತಿ ವಿವರ ಕಡ್ಡಾಯ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ. ಕಡಿತ. ನಟ ಅಖಿಲ್ ರಾಜ್ ಮೇಲೆ ಫುಡ್ ಡೆಲಿವರಿ ಬಾಯ್ಸ್ನಿಂದ ಹಲ್ಲೆ , ಹೀಗೆ ಇಂದಿನ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ.

LIVE NEWS & UPDATES
-
ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ
ರಾಜಧಾನಿ ಬೆಂಗಳೂರಿನ ಸಾರ್ವಜನಿಕರು ಹಾಗೂ ಪಾದಚಾರಿಗಳು ದೀರ್ಘಕಾಲದಿಂದ ಎದುರಿಸುತ್ತಿದ್ದ ದೊಡ್ಡ ಸಮಸ್ಯೆಗೆ ಕೊನೆಗೂ ಮುಕ್ತಿ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಬೆಂಗಳೂರು ಕೇಂದ್ರ ಪಾಲಿಕೆ ವ್ಯಾಪ್ತಿಯಲ್ಲಿ ಇಂದಿನಿಂದ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಅತ್ಯಂತ ಚುರುಕಾಗಿ ಕೈಗೆತ್ತಿಕೊಳ್ಳಲಾಗಿದೆ.
-
ಗ್ಯಾರಂಟಿ ಯೋಜನೆಗಳಿಗೆ ಸರ್ಕಾರದ ಬಿಗ್ ಫಿಲ್ಟರ್
ರಾಜ್ಯದ ಬೊಕ್ಕಸಕ್ಕೆ ಭಾರಿ ಹೊರೆಯಾಗುತ್ತಿರುವ ಗ್ಯಾರಂಟಿ ಯೋಜನೆಗಳಲ್ಲಿ ಆಗುತ್ತಿರುವ ಅಕ್ರಮಗಳು ಮತ್ತು ಅನರ್ಹರ ಪಾಲಾಗುತ್ತಿರುವುದನ್ನು ತಡೆಯಲು ಕರ್ನಾಟಕ ಸರ್ಕಾರ ಈಗ ಅಂತಿಮ ಅಸ್ತ್ರ ಪ್ರಯೋಗಿಸಿದೆ. ಇನ್ಮುಂದೆ ಕರ್ನಾಟಕ ರಾಜ್ಯದ ಅಧಿಕೃತ ಮತದಾರರಿಗೆ ಮಾತ್ರ ಗ್ಯಾರಂಟಿ ಯೋಜನೆಗಳ ಸೌಲಭ್ಯ ಸಿಗಲಿದೆ ಎಂಬ ಬಿಗಿ ನಿಯಮ ಜಾರಿಗೆ ಬರುತ್ತಿದೆ.
-
-
ಮಂಗಳೂರಿನಲ್ಲಿ ಭೀಕರ ದುರಂತ: ನಿದ್ದೆಯಲ್ಲಿದ್ದಾಗಲೇ ಕುಸಿದುಬಿದ್ದ ಮನೆಯ ಹಿಂಬದಿಯ ತಡೆಗೋಡೆ
ಮಂಗಳೂರಿನಲ್ಲಿ ಮುಂಜಾನೆ ಮೂವರು ನಿದ್ದೆಯ ಮಂಪರಿನಲ್ಲಿದ್ದಾಗ ಮನೆಯ ಹಿಂಬದಿಯ ತಡೆಗೋಡೆ ಹಾಗೂ ಮೇಲ್ಚಾವಣಿ ಕುಸಿದುಬಿದ್ದ ಕಾರಣ ಮೂರು ಜನರು ಸಾವನ್ನಪ್ಪಿದ್ದಾರೆ. ಮೃತರನ್ನು ಬಿಹಾರ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಮೃತರಲ್ಲಿ ತಾಯಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಸೇರಿದ್ದಾರೆ.
ಮಂಗಳೂರು ಜು.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ಮಂಗಳೂರು ನಗರದ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಮಳೆಯ ಆರ್ಭಟಕ್ಕೆ ಮನೆಯ ಹಿಂಬದಿಯ ತಡೆಗೋಡೆ ಹಾಗೂ ಮೇಲ್ಚಾವಣಿ ಕುಸಿದುಬಿದ್ದ ಪರಿಣಾಮ ಇಬ್ಬರು ಅಪ್ರಾಪ್ತ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಜ್ಯೋತಿ’ ಉಚಿತ ವಿದ್ಯುತ್ ಯೋಜನೆಯಲ್ಲಿ ಭಾರಿ ಪರಿಷ್ಕರಣೆ ನಡೆಯುತ್ತಿದ್ದು, ಇದು ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರವು ‘SIR’ ಪ್ರಕ್ರಿಯೆಯ ಮೂಲಕ ಗೃಹಜ್ಯೋತಿ ಫಲಾನುಭವಿಗಳಿಂದ ವೋಟರ್ ಐಡಿ (ಎಪಿಕ್ ಕಾರ್ಡ್ ನಂಬರ್) ಹಾಗೂ ಜಾತಿ ವಿವರಗಳನ್ನು ಕಡ್ಡಾಯವಾಗಿ ಸಂಗ್ರಹಿಸುತ್ತಿದೆ. ಅಂತಾರಾಷ್ಟ್ರೀಯ ಬಿಕ್ಕಟ್ಟಿನ ನಡುವೆಯೂ ಇಂದಿನಿಂದ (ಜುಲೈ 01) ವಾಣಿಜ್ಯ ಬಳಕೆಯ (19 ಕೆಜಿ) ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಕಡಿತವಾಗಿದ್ದು, ಹೋಟೆಲ್ ಉದ್ಯಮಿಗಳು ಹಾಗೂ ವ್ಯಾಪಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ವಾಣಿಜ್ಯ ಸಿಲಿಂಡರ್ ದರದಲ್ಲಿ ಒಮ್ಮೆಗೆ 183.50 ರೂಪಾಯಿಗಳನ್ನು ಕಡಿತಗೊಳಿಸಲಾಗಿದೆ. ನಟ ಅಖಿಲ್ ರಾಜ್ ಅವರ ಮೇಲೆ ಹಲವಾರು ಫುಡ್ ಡೆಲಿವರಿ ಬಾಯ್ಸ್ಗಳು ಒಟ್ಟಾಗಿ ಸೇರಿ ದಾಳಿ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಟ ಅಖಿಲ್ ರಾಜ್ ಅವರು ತಮ್ಮ ಕಾರಿನಲ್ಲಿ ಚಲಿಸುತ್ತಿದ್ದಾಗ ಡೆಲಿವರಿ ಬಾಯ್ಸ್ಗಳು ಒಟ್ಟಾಗಿ ಅವರ ಕಾರನ್ನು ಅಡ್ಡಗಟ್ಟಿ, ಗಾಜುಗಳನ್ನು ಪುಡಿಮಾಡಿ ಹಲ್ಲೆಗೆ ಯತ್ನಿಸಿದ್ದಾರೆ. ಇದೇ ರೀತಿ ಪ್ರಮುಖ ಸುದ್ದಿಗಳ ಅಪ್ಡೇಟ್ಗಳನ್ನು ಇಲ್ಲಿ ನೀಡಲಾಗುತ್ತದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - Jul 01,2026 9:16 AM




