AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Live: ಪ್ರಧಾನಿಯಾಗಿ 12 ವರ್ಷ ಪೂರ್ಣ: ಮೋದಿಗೆ ರಾಜ್ಯ ಬಿಜೆಪಿ ನಾಯಕರ ಅಭಿನಂದನೆ

Karnataka News Live Updates: ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಸಚಿವ ಸಂಪುಟದಲ್ಲಿನ ಖಾತೆ ಹಂಚಿಕೆ ಅಸಮಾಧಾನ, ಸಂಪುಟ ವಿಸ್ತರಣೆ ಕಸರತ್ತು, ಸುದೀರ್ಘ ಅವಧಿಗೆ ಪ್ರಧಾನಿಯಾದ ದಾಖಲೆ ನಿರ್ಮಿಸಿದ ನರೇಂದ್ರ ಮೋದಿ, ರಾಜ್ಯಸಭೆ ಚುನಾವಣೆ, ಇರಾನ್ ಯುದ್ಧ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

TV9 Kannada Live: ಪ್ರಧಾನಿಯಾಗಿ 12 ವರ್ಷ ಪೂರ್ಣ: ಮೋದಿಗೆ ರಾಜ್ಯ ಬಿಜೆಪಿ ನಾಯಕರ ಅಭಿನಂದನೆ
ಪ್ರಧಾನಿ ಮೋದಿImage Credit source: PTI
ಗಣಪತಿ ಶರ್ಮಾ
|

Updated on:Jun 10, 2026 | 10:37 AM

Share

LIVE NEWS & UPDATES

  • 10 Jun 2026 10:33 AM (IST)

    ಮೋದಿಗೆ ಬಿಎಸ್ ಯಡಿಯೂರಪ್ಪ ಅಭಿನಂದನೆ

    ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿ 12 ವರ್ಷ ಪೂರ್ಣ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸಿ ಯಡಿಯೂರಪ್ಪ ಪತ್ರ ಬರೆದಿದ್ದಾರೆ.

  • 10 Jun 2026 10:32 AM (IST)

    ದೊಡ್ಡಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಲ್ಲಿ ಪೂಜೆ

    ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರ್ಣ ಹಿನ್ನೆಲೆ ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡಗಣಪತಿ ದೇವಸ್ಥಾನದಲ್ಲಿ ಬಿಜೆಪಿ ಶಾಸಕ ರವಿಸುಬ್ರಮಣ್ಯ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.

  • 10 Jun 2026 09:46 AM (IST)

    ದೆಹಲಿಗೆ ಪ್ರಯಾಣ ಬೆಳೆಸಿದ ಸಿಎಂ ಡಿಕೆಶಿವಕುಮಾರ್

    ಸಿಎಂ ಡಿಕೆ ಶಿವಕುಮಾರ್ ಬುಧವಾರ ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ. ಅವರು ಕಾಂಗ್ರೆಸ್ ಹೈಕಮಾಂಡ್ ಬಳಿ ಸಚಿವರ ಎರಡನೇ ಪಟ್ಟಿ ವಿಚಾರವಾಗಿ ಚರ್ಚಿಸು ಸಾಧ್ಯತೆ ಇದ್ದು, ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

  • 10 Jun 2026 09:37 AM (IST)

    ಮೋದಿ ಭೇಟಿ ವೇಳೆ ಸ್ಫೋಟಕ ಪತ್ತೆ: ಒಂದು ತಿಂಗಳಾದರೂ ಸಿಗದ ಸುಳಿವು

    ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಸ್ಫೋಟಕ ಪತ್ತೆ ಪ್ರಕರಣ ಸಂಬಂಧ ಒಂದು ತಿಂಗಳು ಕಳೆದರೂ ಆರೋಪಿಗಳ ಸುಳಿವು ಸಿಕ್ಕಿಲ್ಲ. ಪ್ರಸ್ತುತ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರ ಜೊತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಆರಂಭದಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸರಿಗೆ ಕರೆ ಮಾಡಿದ್ದ ಲೋಹಿತ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದೆಯಾದರೂ, ಸ್ಫೋಟಕಗಳನ್ನು ಅಲ್ಲಿ ತಂದಿಟ್ಟ ಅಸಲಿ ಕಿಡಿಗೇಡಿಗಳ ಪತ್ತೆ ಹಚ್ಚುವುದು ಪೊಲೀಸರಿಗೆ ಈಗ ದೊಡ್ಡ ಕಗ್ಗಂಟಾಗಿ ಪರಿಣಮಿಸಿದೆ.

  • 10 Jun 2026 09:33 AM (IST)

    ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ಭೀಕರ ವೈಮಾನಿಕ ದಾಳಿ

    ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 11 ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಮತ್ತಷ್ಟು ಓದಿ

  • 10 Jun 2026 09:18 AM (IST)

    ಜೂನ್ 13 ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ

    ಜೂನ್ 13ರಿಂದ 18ರವರೆಗೆ ಪ್ರಧಾನಿ ನರೇಂದ್ರ ಮೋದಿ ಯುರೋಪ್​ನ ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್​ ಮತ್ತು ಸ್ಲೋವಾಕಿಯಾಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಫ್ರಾನ್ಸ್ ಜೊತೆ ‘ಇಂಡಿಯಾ ಇನ್ನೋವೇಟ್ಸ್’, ಸ್ಲೋವಾಕಿಯಾ ಜೊತೆ ಆಟೋ, ರಕ್ಷಣೆ, ಇಂಧನ ಸಹಕಾರ ವಿಸ್ತರಿಸಲಿದ್ದು, ವಿವಾ ಟೆಕ್ ಶೃಂಗಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಮತ್ತಷ್ಟು ಓದಿ

  • 10 Jun 2026 09:16 AM (IST)

    ಸಸಿ ನೆಟ್ಟು ಗಿನ್ನಿಸ್ ದಾಖಲೆ ಬರೆಯಲು ಬಿಡಿಎ ಸಜ್ಜು

    ಕೆಂಪೇಗೌಡ ಜಯಂತಿಯ ಅಂಗವಾಗಿ ಜೂನ್ 27ರಂದು ಬೆಂಗಳೂರು ನಗರದಾದ್ಯಂತ ಏಕಕಾಲದಲ್ಲಿ ಬರೋಬ್ಬರಿ 15 ಲಕ್ಷ ಸಸಿಗಳನ್ನು ನೆಟ್ಟು ಗಿನ್ನೆಸ್ ದಾಖಲೆ ಬರೆಯಲು ಬಿಡಿಎ ಸಜ್ಜಾಗಿದೆ. ಮತ್ತಷ್ಟು ಓದಿ

  • 10 Jun 2026 09:14 AM (IST)

    ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಸೋಮಣ್ಣ ಗುಡ್ ನ್ಯೂಸ್

    ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಸಚಿವ ಸೋಮಣ್ಣ ಗುಡ್ ನ್ಯೂಸ್ ನೀಡಿದ್ದಾರೆ. ತುಮಕೂರು – ಚಿತ್ರದುರ್ಗ – ದಾವಣಗೆರೆ ನೇರ ರೈಲು ಮಾರ್ಗ 2028ಕ್ಕೆ ಪೂರ್ಣಗೊಂಡು ರೈಲು ಸಂಚಾರ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.

  • 10 Jun 2026 09:12 AM (IST)

    ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

    ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್‘ ಘೋಷಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮತ್ತಷ್ಟು ಓದಿ

  • 10 Jun 2026 09:10 AM (IST)

    ನೆಹರು ದಾಖಲೆ ಮುರಿದ ನರೇಂದ್ರ ಮೋದಿ

    ಅತಿ ಸುದೀರ್ಘ ಅವಧಿಗೆ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಿದ ಪಂಡಿತ್ ಜವಾಹರ್​ಲಾಲ್ ನೆಹರು ದಾಖಲೆಯನ್ನು ಪ್ರಧಾನಿ ಮೋದಿ ಹಿಂದಿಕ್ಕಿದ್ದಾರೆ. ಮತ್ತಷ್ಟು ಓದಿ

ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಪಿಎಂ ಜವಾಹರ್​ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಸುದೀರ್ಘ ಅವಧಿಗೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ದಾಖಲೆ ಇದೀಗ ಮೋದಿ ಅವರದ್ದಾಗಿದೆ. ಮತ್ತೊಂದೆಡೆ, ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿರುವುದು ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಸಚಿವ ಸಂಪುಟದ ಖಾತೆ ಕ್ಯಾತೆ ಮುಂದುವರಿದಿರುವುದರ ಜತೆಗೆ, ಸಂಪುಟ ವಿಸ್ತರಣೆ ವೇಳೆ ಸಚಿವರಾಗಲು ಲಾಬಿ ಜೋರಾಗಿದೆ. ಮತ್ತೊಂದೆಡೆ, ಅಂತರರಾಷ್ಟ್ರೀಯ ಮಟ್ಟದಲ್ಲಿ, ಇರಾನ್ ಹಾಗೂ ಇಸ್ರೆಲ್ ಸಂಘರ್ಷ ಮತ್ತೆ ತೀವ್ರಗೊಳ್ಳುವ ಸುಳಿವು ದೊರೆತಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - Jun 10,2026 9:07 AM

Follow Us