
ಕಸ ವಿಲೇವಾರಿ ಹೆಸರಿನಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ 36 ಸಾವಿರ ಕೋಟಿ ರೂ. ಲೂಟಿ ಮಾಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಸ ವಿಲೇವಾರಿಗೆ ವರ್ಷಕ್ಕೆ 1,344 ಕೋಟಿ ರೂ. ವೆಚ್ಚ ಆಗುತ್ತದೆ. ಕಸ ಸಂಗ್ರಹಣೆ ಮತ್ತು ಸಾಗಾಟಕ್ಕೆ 514 ಕೋಟಿ ರೂ. ಖರ್ಚು ಆಗುತ್ತದೆ. ಕಸ ಸಂಸ್ಕರಣೆ ಮತ್ತು ವಿಲೇವಾರಿಗೆ 380 ಕೋಟಿ ರೂ. ಖರ್ಚಾಗುತ್ತದೆ. ಪೌರ ಕಾರ್ಮಿಕರ ವೇತನಕ್ಕೆ 444 ಕೋಟಿ ರೂ. ವ್ಯಯಿಸಲಾಗುತ್ತದೆ. ವಾರ್ಷಿಕವಾಗಿ ಒಟ್ಟು 1,344 ಕೋಟಿ ರೂ. ಖರ್ಚು ಆಗುತ್ತದೆ. ಆದರೆ ಈಗಿನ ಸರ್ಕಾರ ಹೊಸ ಪ್ರಸ್ತಾವನೆಯನ್ನು ತಂದಿದೆ. ತೆರಿಗೆ ಹಣವನ್ನು ಲೂಟಿ ಮಾಡುವ ಯೋಜನೆ ತಂದಿದ್ದಾರೆ. ಬಲಾಢ್ಯ ಕಂಪನಿಗಳಿಗೆ ಕಸದ ಟೆಂಡರ್ ಕೊಡಲಾಗಿದೆ ಎಂದು ಆರೋಪಿಸಿದ್ದಾರೆ.
ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ ಎದುರಾಗಿದೆ. ಸುಖೇಂದು ರಾಯ್ ಬಳಿಕ ಇದೀಗ ಟಿಎಂಸಿಯ ರಾಜ್ಯಸಭೆ ಸದಸ್ಯೆ ಸುಷ್ಮೀತಾ ದೇವ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ, ಒಂದೇ ವಾರದಲ್ಲಿ ಟಿಎಂಸಿಯ ಇಬ್ಬರು ಸಂಸದರು ರಾಜೀನಾಮೆ ನೀಡಿದಂತಾಗಿದೆ.
ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಬಹುಭಾಷಾ ಹಿರಿಯ ನಿರ್ದೇಶಕ ಮತ್ತು ನಟ ಭಾರತಿರಾಜ (86) ಚೆನ್ನೈನಲ್ಲಿ ಕೊನೆಯುಸಿರೆಳೆದರು. ಮತ್ತಷ್ಟು ಓದಿ
ನರೇಂದ್ರ ಮೋದಿ ಪ್ರಧಾನಮಂತ್ರಿ ಆಗಿ 12 ವರ್ಷ ಪೂರ್ಣ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿಗಳಿಗೆ ಅಭಿನಂದನೆ ಸಲ್ಲಿಸಿ ಯಡಿಯೂರಪ್ಪ ಪತ್ರ ಬರೆದಿದ್ದಾರೆ.
ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರ್ಣ ಹಿನ್ನೆಲೆ ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡಗಣಪತಿ ದೇವಸ್ಥಾನದಲ್ಲಿ ಬಿಜೆಪಿ ಶಾಸಕ ರವಿಸುಬ್ರಮಣ್ಯ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಸಿಎಂ ಡಿಕೆ ಶಿವಕುಮಾರ್ ಬುಧವಾರ ಬೆಳಗ್ಗೆ ದೆಹಲಿಗೆ ತೆರಳಿದ್ದಾರೆ. ಅವರು ಕಾಂಗ್ರೆಸ್ ಹೈಕಮಾಂಡ್ ಬಳಿ ಸಚಿವರ ಎರಡನೇ ಪಟ್ಟಿ ವಿಚಾರವಾಗಿ ಚರ್ಚಿಸು ಸಾಧ್ಯತೆ ಇದ್ದು, ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಮೇ 10ರಂದು ಪ್ರಧಾನಿ ನರೇಂದ್ರ ಮೋದಿ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಸ್ಫೋಟಕ ಪತ್ತೆ ಪ್ರಕರಣ ಸಂಬಂಧ ಒಂದು ತಿಂಗಳು ಕಳೆದರೂ ಆರೋಪಿಗಳ ಸುಳಿವು ಸಿಕ್ಕಿಲ್ಲ. ಪ್ರಸ್ತುತ ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರ ಜೊತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಆರಂಭದಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸರಿಗೆ ಕರೆ ಮಾಡಿದ್ದ ಲೋಹಿತ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿದೆಯಾದರೂ, ಸ್ಫೋಟಕಗಳನ್ನು ಅಲ್ಲಿ ತಂದಿಟ್ಟ ಅಸಲಿ ಕಿಡಿಗೇಡಿಗಳ ಪತ್ತೆ ಹಚ್ಚುವುದು ಪೊಲೀಸರಿಗೆ ಈಗ ದೊಡ್ಡ ಕಗ್ಗಂಟಾಗಿ ಪರಿಣಮಿಸಿದೆ.
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ 11 ಮಕ್ಕಳು ಸೇರಿ 13 ಮಂದಿ ಮೃತಪಟ್ಟಿದ್ದಾರೆ. ಮತ್ತಷ್ಟು ಓದಿ
ಜೂನ್ 13ರಿಂದ 18ರವರೆಗೆ ಪ್ರಧಾನಿ ನರೇಂದ್ರ ಮೋದಿ ಯುರೋಪ್ನ ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಮತ್ತು ಸ್ಲೋವಾಕಿಯಾಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಫ್ರಾನ್ಸ್ ಜೊತೆ ‘ಇಂಡಿಯಾ ಇನ್ನೋವೇಟ್ಸ್’, ಸ್ಲೋವಾಕಿಯಾ ಜೊತೆ ಆಟೋ, ರಕ್ಷಣೆ, ಇಂಧನ ಸಹಕಾರ ವಿಸ್ತರಿಸಲಿದ್ದು, ವಿವಾ ಟೆಕ್ ಶೃಂಗಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಮತ್ತಷ್ಟು ಓದಿ
ಕೆಂಪೇಗೌಡ ಜಯಂತಿಯ ಅಂಗವಾಗಿ ಜೂನ್ 27ರಂದು ಬೆಂಗಳೂರು ನಗರದಾದ್ಯಂತ ಏಕಕಾಲದಲ್ಲಿ ಬರೋಬ್ಬರಿ 15 ಲಕ್ಷ ಸಸಿಗಳನ್ನು ನೆಟ್ಟು ಗಿನ್ನೆಸ್ ದಾಖಲೆ ಬರೆಯಲು ಬಿಡಿಎ ಸಜ್ಜಾಗಿದೆ. ಮತ್ತಷ್ಟು ಓದಿ
ಕರ್ನಾಟಕದ ರೈಲ್ವೆ ಪ್ರಯಾಣಿಕರಿಗೆ ಸಚಿವ ಸೋಮಣ್ಣ ಗುಡ್ ನ್ಯೂಸ್ ನೀಡಿದ್ದಾರೆ. ತುಮಕೂರು – ಚಿತ್ರದುರ್ಗ – ದಾವಣಗೆರೆ ನೇರ ರೈಲು ಮಾರ್ಗ 2028ಕ್ಕೆ ಪೂರ್ಣಗೊಂಡು ರೈಲು ಸಂಚಾರ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಜನತೆಗೆ ಸಚಿವ ಸೋಮಣ್ಣ ಮತ್ತೊಂದು ಗುಡ್ ನ್ಯೂಸ್#TumakuruDavangereRail #VSomanna #IndianRailways @VSOMANNA_BJP @BJP4Karnataka https://t.co/zcFFr2UXuG pic.twitter.com/nbpQ3I6WrO
— TV9 Kannada (@tv9kannada) June 10, 2026
ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸುಗೊಂಡಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್‘ ಘೋಷಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮತ್ತಷ್ಟು ಓದಿ
ಅತಿ ಸುದೀರ್ಘ ಅವಧಿಗೆ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಿದ ಪಂಡಿತ್ ಜವಾಹರ್ಲಾಲ್ ನೆಹರು ದಾಖಲೆಯನ್ನು ಪ್ರಧಾನಿ ಮೋದಿ ಹಿಂದಿಕ್ಕಿದ್ದಾರೆ. ಮತ್ತಷ್ಟು ಓದಿ
ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ಪಿಎಂ ಜವಾಹರ್ಲಾಲ್ ನೆಹರು ಅವರ ದಶಕಗಳ ಹಿಂದಿನ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಸುದೀರ್ಘ ಅವಧಿಗೆ ದೇಶದ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ದಾಖಲೆ ಇದೀಗ ಮೋದಿ ಅವರದ್ದಾಗಿದೆ. ಮತ್ತೊಂದೆಡೆ, ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ತೆಲಂಗಾಣ ಕಾಂಗ್ರೆಸ್ ಉಸ್ತುವಾರಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿರುವುದು ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲಿ ಸಚಿವ ಸಂಪುಟದ ಖಾತೆ ಕ್ಯಾತೆ ಮುಂದುವರಿದಿರುವುದರ ಜತೆಗೆ, ಸಂಪುಟ ವಿಸ್ತರಣೆ ವೇಳೆ ಸಚಿವರಾಗಲು ಲಾಬಿ ಜೋರಾಗಿದೆ. ಮತ್ತೊಂದೆಡೆ, ಅಂತರರಾಷ್ಟ್ರೀಯ ಮಟ್ಟದಲ್ಲಿ, ಇರಾನ್ ಹಾಗೂ ಇಸ್ರೆಲ್ ಸಂಘರ್ಷ ಮತ್ತೆ ತೀವ್ರಗೊಳ್ಳುವ ಸುಳಿವು ದೊರೆತಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 9:07 am, Wed, 10 June 26