TV9 Kannada Live: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಬಿರುಗಾಳಿ, ಶಿಂಧೆ ಬಣದ ಸಂಪರ್ಕದಲ್ಲಿ ಉದ್ಧವ್ ಬಣದ 7 ಸಂಸದರು?
Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್ ಇಲ್ಲಿವೆ.

LIVE NEWS & UPDATES
-
ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು (ಜೂನ್ 11, ಗುರುವಾರ) ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ. ಮತ್ತಷ್ಟು ಓದಿ.
-
ಜೈಲಿನಲ್ಲಿ ನಟ ದರ್ಶನ್ ಮೌನ; ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರಾಕರಣೆಯಾದ ನಂತರ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೌನಕ್ಕೆ ಶರಣಾಗಿದ್ದಾರೆ. ಅವರು ಪುಸ್ತಕಗಳನ್ನು ಓದುತ್ತಾ ಕಾಲ ಕಳೆಯುತ್ತಿದ್ದರೆ, ಸಹ ಆರೋಪಿ ಪವಿತ್ರಾ ಗೌಡ ತಮ್ಮ ಆತ್ಮಚರಿತ್ರೆ ಬರೆಯುವುದರಲ್ಲಿ ನಿರತರಾಗಿದ್ದಾರೆ. ಇಬ್ಬರ ಜೈಲು ದಿನಚರಿ ಸಂಪೂರ್ಣ ವಿಭಿನ್ನವಾಗಿದ್ದು, ದರ್ಶನ್ ನಿರಾಶೆಯಿಂದ ಯಾರೊಂದಿಗೂ ಮಾತನಾಡುತ್ತಿಲ್ಲ ಎನ್ನಲಾಗಿದೆ. ಮತ್ತಷ್ಟು ಓದಿ.
-
-
ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ
ಕೇಂದ್ರ ಸರ್ಕಾರವು ಶೇ.22 ರಿಂದ 30ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ (E22-E30) ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಇದು ಭಾರತದ ಇಂಧನ ಸ್ವಾವಲಂಬನೆ, ಪರಿಸರ ಸಂರಕ್ಷಣೆ ಮತ್ತು ಕೃಷಿ ವಲಯಕ್ಕೆ ಲಾಭ ತರಲಿದೆ. ಎಥೆನಾಲ್ ಮಿಶ್ರಣದಲ್ಲಿ ದೇಶದ ಅದ್ಭುತ ಪ್ರಗತಿಯನ್ನು ಇದು ಮತ್ತಷ್ಟು ಉತ್ತೇಜಿಸಲಿದೆ.ದುವರೆಗೆ ಕೇವಲ ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣಗಳಿಗೆ (E20 ವರೆಗೆ) ಮಾತ್ರ ಲಭ್ಯವಿದ್ದ ತೆರಿಗೆ ವಿನಾಯಿತಿಯನ್ನು ಈಗ ಸರ್ಕಾರವಯ ಶೇ.22 ರಿಂದ ಶೇ.30ರಷ್ಟು ಹೆಚ್ಚಿನ ಎಥೆನಾಲ್ ಮಿಶ್ರಣ ಹೊಂದಿರುವ ಇಂಧನಗಳಿಗೂ ವಿಸ್ತರಿಸಿದೆ. ಹೊಸ ನಿಯಮದ ಪ್ರಕಾರ ಕೆಳಗಿನ ಇಂಧನ ರೂಪಾಂತರಗಳ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ. ಮತ್ತಷ್ಟು ಓದಿ.
-
ಮಹಾರಾಷ್ಟ್ರ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ
ಮಹಾರಾಷ್ಟ್ರರಾಜಕಾರಣದಲ್ಲಿ ಮತ್ತೊಮ್ಮೆ ಸ್ಫೋಟಕ ಬೆಳವಣಿಗೆಗಳು ನಡೆದಿದ್ದು ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ ಬರೋಬ್ಬರಿ ಏಳು ಮಂದಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದ ಶಿವಸೇನೆ ಬಣದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ಈ ಬೆಳವಣಿಗೆಯಿಂದ ಪಶ್ಚಿಮ ಬಂಗಾಳದ ಬಳಿಕ ಮಹಾರಾಷ್ಟ್ರದಲ್ಲೂ ರಾಜಕೀಯ ಹೈಡ್ರಾಮಕ್ಕೆ ಮುನ್ನುಡಿ ಬರೆಯುವ ಸಾಧ್ಯತೆ ದಟ್ಟವಾಗಿ ಗೋಚರಿಸಿದೆ. ಮತ್ತಷ್ಟು ಓದಿ.
-
ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್ ಯೋಜನೆಗೆ ಶೀಘ್ರ ಅನುಮೋದನೆ?
ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್ ಯೋಜನೆಗೆ RITES ಸಕಾರಾತ್ಮಕ ವರದಿ ನೀಡಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅಂತಿಮ ಅನುಮೋದನೆ ದೊರೆಯುವ ಸಾಧ್ಯತೆ ದಟ್ಟವಾಗಿದೆ. ಮೆಟ್ರೋ ಮಾರ್ಗದ ಮೇಲೆಯೇ ಫ್ಲೈಓವರ್ ನಿರ್ಮಾಣವಾದರೆ ಪ್ರಯಾಣಿಕರು ಮೆಟ್ರೋ ಬಳಕೆ ಕಡಿಮೆ ಮಾಡಬಹುದು ಎಂಬ ಕಾರಣ ನೀಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಯೋಜನೆಯ ಸಾಮಾಜಿಕ-ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಈ ಹಿಂದೆ ಪ್ರಶ್ನೆ ಎತ್ತಿತ್ತು. ಮತ್ತಷ್ಟು ಓದಿ.
-
ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್ ಪ್ರಾಧಾನ್ಯತೆ ನೀಡಬಹುದೆಂಬ ಬಗ್ಗೆಯೂ ಮಾತುಗಳು ಕೇಳಿಬಂದಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - Jun 11,2026 9:23 AM




