TV9 Kannada Live: ಜೂನ್ 11ರ ಪ್ರಮುಖ ಸುದ್ದಿಗಳು

Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್​​ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್​​ ಇಲ್ಲಿವೆ.

TV9 Kannada Live: ಜೂನ್ 11ರ ಪ್ರಮುಖ ಸುದ್ದಿಗಳು
Dk Shivakumar And Modi
Edited By:

Updated on: Jun 11, 2026 | 10:05 PM

ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್​​ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್​​ ಪ್ರಾಧಾನ್ಯತೆ ನೀಡಬಹುದೆಂಬ ಬಗ್ಗೆಯೂ ಮಾತುಗಳು ಕೇಳಿಬಂದಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - 9:23 am, Thu, 11 June 26

Follow Us