TV9 Kannada Live: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್​​ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್​​ ಇಲ್ಲಿವೆ.

TV9 Kannada Live: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್​​
Image Credit source: Getty Images and TV9 Kannada

Updated on: Jun 11, 2026 | 11:34 AM

LIVE NEWS & UPDATES

  • 11 Jun 2026 11:34 AM (IST)

    17ನೇ ವಯಸ್ಸಿಗೆ ನಕ್ಸಲ್ ಆಗ ಹೊರಟಿದ್ದ ಪವನ್ ಕಲ್ಯಾಣ್!

    ಟಾಲಿವುಡ್‌ನ ನಟ, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್  ತಮ್ಮ ಹದಿಹರೆಯದ ದಿನಗಳ ಕುರಿತು ಅತ್ಯಂತ ಶಾಕಿಂಗ್ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. ತಾವು ಒಂದು ಕಾಲದಲ್ಲಿ ನಕ್ಸಲ್ ಆಗಲು ನಿರ್ಧರಿಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ ಅಣ್ಣ ಮೆಗಾಸ್ಟಾರ್ ಚಿರಂಜೀವಿ ತಮ್ಮನ್ನು ತಡೆದು ದಾರಿ ತೋರಿಸಿದ್ದಾಗಿ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಮತ್ತಷ್ಟು ಓದಿ.

  • 11 Jun 2026 11:17 AM (IST)

    ಪರಿಷತ್ ಕದನದಲ್ಲಿ ದಳಪತಿಗೆ ಡಬಲ್ ಟೆನ್ಷನ್!

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ  ಸಂಬಂಧ ಜೆಡಿಎಸ್ ನಾಯಕರಿಗೆ ಒಂದು ಲೆಕ್ಕದಲ್ಲಿ ಡಬಲ್ ಟೆನ್ಷನ್ ಶುರುವಾಗಿದೆ. ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಸವಾಲಾಗಿ ಪರಿಣಮಿಸಿದೆ.  ಇನ್ನೊಂದು ಕಡೆ ಪಕ್ಷದೊಳಗೆ ಅಡ್ಡ ಮತದಾನದ ಭೀತಿ ಕಾಡುತ್ತಿದೆ. ಪ್ರಮುಖವಾಗಿ, ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಶಾಸಕರಾದ ಜಿ.ಟಿ. ದೇವೇಗೌಡ ಮತ್ತು ಹನೂರು ಮಂಜುನಾಥ್ ಅವರ ನಡೆ ನಿರ್ಣಾಯಕವಾಗಿದ್ದು, ಅವರ ಮತದಾನದ ಬಗ್ಗೆ ಆತಂಕ ಎದುರಾಗಿದೆ. ಮತ್ತಷ್ಟು ಓದಿ.

  • 11 Jun 2026 10:53 AM (IST)

    ಗೃಹಲಕ್ಷ್ಮಿ ಯೋಜನೆಗಿನ್ನು ಹೊಸ ರೂಲ್ಸ್​​

    ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ಹೊಸ ನಿಯಮಾವಳಿಗಳು ಜಾರಿಯಾಗುತ್ತಿವೆ. ಯೋಜನೆಯ ಫಲಾನುಭವಿಗಳ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಒಂದು ತಿಂಗಳೊಳಗೆ ಬಯೋಮೆಟ್ರಿಕ್ ದೃಢೀಕರಣ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಈ ನಿಯಮ ಪಾಲಿಸದಿದ್ದರೆ ಫಲಾನುಭವಿಗಳ ಖಾತೆಗೆ 2,000 ರೂಪಾಯಿ ಹಣ ಜಮಾವಣೆ ನಿಲ್ಲಲಿದೆ. ಬಯೋಮೆಟ್ರಿಕ್ ದೃಢೀಕರಣವನ್ನು ಬೆಂಗಳೂರು ಒನ್, ಗ್ರಾಮ ಒನ್, ಸೇವಾ ಕೇಂದ್ರ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮಾಡಿಸಬಹುದು. ಇದಕ್ಕಾಗಿ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಇತರ ಸಂಬಂಧಿತ ದಾಖಲೆಗಳನ್ನು ಸಲ್ಲಿಸಬೇಕಿದೆ.

  • 11 Jun 2026 09:46 AM (IST)

    ಬೆಂಗಳೂರಿನ ಈ ರಸ್ತೆಗಳಲ್ಲಿಂದು ಸಂಚಾರ ಬದಲಾವಣೆ

    ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಇಂದು (ಜೂನ್ 11, ಗುರುವಾರ) ಕರ್ನಾಟಕ ದಲಿತ ಸಂಘಟನೆಗಳ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಭಟನೆ ನಡೆಯಲಿದ್ದು, ಸುಗಮ ವಾಹನ ಸಂಚಾರಕ್ಕಾಗಿ ಬೆಂಗಳೂರು ಸಂಚಾರ ಪೊಲೀಸರು ತಾತ್ಕಾಲಿಕ ಸಂಚಾರ ನಿರ್ಬಂಧ ಹಾಗೂ ಸಂಚಾರಕ್ಕೆ ಪರ್ಯಾಯ ಮಾರ್ಗಗಳಳನ್ನು ಪ್ರಕಟಿಸಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ. ಮತ್ತಷ್ಟು ಓದಿ.

  • 11 Jun 2026 09:44 AM (IST)

    ಜೈಲಿನಲ್ಲಿ ನಟ ದರ್ಶನ್ ಮೌನ; ಆತ್ಮಚರಿತ್ರೆ ಬರೆಯಲು ಆರಂಭಿಸಿದ ಪವಿತ್ರಾ

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ನಿರಾಕರಣೆಯಾದ ನಂತರ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೌನಕ್ಕೆ ಶರಣಾಗಿದ್ದಾರೆ. ಅವರು ಪುಸ್ತಕಗಳನ್ನು ಓದುತ್ತಾ ಕಾಲ ಕಳೆಯುತ್ತಿದ್ದರೆ, ಸಹ ಆರೋಪಿ ಪವಿತ್ರಾ ಗೌಡ ತಮ್ಮ ಆತ್ಮಚರಿತ್ರೆ ಬರೆಯುವುದರಲ್ಲಿ ನಿರತರಾಗಿದ್ದಾರೆ. ಇಬ್ಬರ ಜೈಲು ದಿನಚರಿ ಸಂಪೂರ್ಣ ವಿಭಿನ್ನವಾಗಿದ್ದು, ದರ್ಶನ್ ನಿರಾಶೆಯಿಂದ ಯಾರೊಂದಿಗೂ ಮಾತನಾಡುತ್ತಿಲ್ಲ ಎನ್ನಲಾಗಿದೆ. ಮತ್ತಷ್ಟು ಓದಿ.

  • 11 Jun 2026 09:41 AM (IST)

    ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ

    ಕೇಂದ್ರ ಸರ್ಕಾರವು ಶೇ.22 ರಿಂದ 30ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ (E22-E30) ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಇದು ಭಾರತದ ಇಂಧನ ಸ್ವಾವಲಂಬನೆ, ಪರಿಸರ ಸಂರಕ್ಷಣೆ ಮತ್ತು ಕೃಷಿ ವಲಯಕ್ಕೆ ಲಾಭ ತರಲಿದೆ. ಎಥೆನಾಲ್ ಮಿಶ್ರಣದಲ್ಲಿ ದೇಶದ ಅದ್ಭುತ ಪ್ರಗತಿಯನ್ನು ಇದು ಮತ್ತಷ್ಟು ಉತ್ತೇಜಿಸಲಿದೆ.ದುವರೆಗೆ ಕೇವಲ ಕಡಿಮೆ ಪ್ರಮಾಣದ ಎಥೆನಾಲ್ ಮಿಶ್ರಣಗಳಿಗೆ (E20 ವರೆಗೆ) ಮಾತ್ರ ಲಭ್ಯವಿದ್ದ ತೆರಿಗೆ ವಿನಾಯಿತಿಯನ್ನು ಈಗ ಸರ್ಕಾರವಯ ಶೇ.22 ರಿಂದ ಶೇ.30ರಷ್ಟು ಹೆಚ್ಚಿನ ಎಥೆನಾಲ್ ಮಿಶ್ರಣ ಹೊಂದಿರುವ ಇಂಧನಗಳಿಗೂ ವಿಸ್ತರಿಸಿದೆ. ಹೊಸ ನಿಯಮದ ಪ್ರಕಾರ ಕೆಳಗಿನ ಇಂಧನ ರೂಪಾಂತರಗಳ ಮೇಲೆ ಯಾವುದೇ ತೆರಿಗೆ ಇರುವುದಿಲ್ಲ. ಮತ್ತಷ್ಟು ಓದಿ.

  • 11 Jun 2026 09:31 AM (IST)

    ಮಹಾರಾಷ್ಟ್ರ ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ

    ಮಹಾರಾಷ್ಟ್ರರಾಜಕಾರಣದಲ್ಲಿ ಮತ್ತೊಮ್ಮೆ ಸ್ಫೋಟಕ ಬೆಳವಣಿಗೆಗಳು ನಡೆದಿದ್ದು ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಒಟ್ಟು 9 ಲೋಕಸಭಾ ಸಂಸದರ ಪೈಕಿ ಬರೋಬ್ಬರಿ ಏಳು ಮಂದಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನೇತೃತ್ವದ ಶಿವಸೇನೆ ಬಣದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ಈ ಬೆಳವಣಿಗೆಯಿಂದ ಪಶ್ಚಿಮ ಬಂಗಾಳದ ಬಳಿಕ ಮಹಾರಾಷ್ಟ್ರದಲ್ಲೂ ರಾಜಕೀಯ ಹೈಡ್ರಾಮಕ್ಕೆ ಮುನ್ನುಡಿ ಬರೆಯುವ ಸಾಧ್ಯತೆ ದಟ್ಟವಾಗಿ ಗೋಚರಿಸಿದೆ. ಮತ್ತಷ್ಟು ಓದಿ.

  • 11 Jun 2026 09:28 AM (IST)

    ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್‌ ಯೋಜನೆಗೆ ಶೀಘ್ರ ಅನುಮೋದನೆ?

    ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಡಬಲ್ ಡೆಕ್ಕರ್‌ ಯೋಜನೆಗೆ RITES ಸಕಾರಾತ್ಮಕ ವರದಿ ನೀಡಿದ್ದು, ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಅಂತಿಮ ಅನುಮೋದನೆ ದೊರೆಯುವ ಸಾಧ್ಯತೆ ದಟ್ಟವಾಗಿದೆ. ಮೆಟ್ರೋ ಮಾರ್ಗದ ಮೇಲೆಯೇ ಫ್ಲೈಓವರ್ ನಿರ್ಮಾಣವಾದರೆ ಪ್ರಯಾಣಿಕರು ಮೆಟ್ರೋ ಬಳಕೆ ಕಡಿಮೆ ಮಾಡಬಹುದು ಎಂಬ ಕಾರಣ ನೀಡಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಯೋಜನೆಯ ಸಾಮಾಜಿಕ-ಆರ್ಥಿಕ ಕಾರ್ಯಸಾಧ್ಯತೆ ಬಗ್ಗೆ ಈ ಹಿಂದೆ ಪ್ರಶ್ನೆ ಎತ್ತಿತ್ತು.
    ಮತ್ತಷ್ಟು ಓದಿ.

ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಎನ್​​ಡಿಎ ನಾಯಕರ ಜೊತೆ ಸಾಲು ಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ ತನ್ನದೇ ಆದ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದ್ದು, ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಪ್ರಧಾನ ಕಾರ್ಯದರ್ಶಿಗಳ ಜೊತೆಗಿನ ಸಭೆ ಕುತೂಹಲ ಮೂಡಿಸಿದೆ. ಇತ್ತ ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಕಸರತ್ತು ಮುಂದುವರಿದಿದ್ದು, ಸಚಿವಾಕಾಂಕ್ಷಿಗಳಿಂದ ಲಾಬಿ ಜೋರಾಗಿದೆ. ಯುವ ಮುಖಗಳಿಗೆ ಹೈಕಮಾಂಡ್​​ ಪ್ರಾಧಾನ್ಯತೆ ನೀಡಬಹುದೆಂಬ ಬಗ್ಗೆಯೂ ಮಾತುಗಳು ಕೇಳಿಬಂದಿವೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - 9:23 am, Thu, 11 June 26

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Follow Us