TV9 Kannada Live: ರಾಜ್ಯದ ಹಲವೆಡೆ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟ ಲೋಕಾಯುಕ್ತ
Karnataka News Today Live Updates: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಶುರುವಾಗಿದೆ. ಅಡ್ಡ ಮತದಾನ ಹಿನ್ನೆಲೆ ಕಾಂಗ್ರೆಸ್ ಸಾಸಕರು ರೆಸಾರ್ಟ್ನತ್ತ ಮುಖ ಮಾಡಿದ್ದಾರೆ. ಮತ್ತೊಂದೆಡೆ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂ ಬೆಳಿಗ್ಗೆ ಶಾಕ್ ಕೊಟ್ಟಿದೆ. ಈ ದಿನದ ಪ್ರಮುಖ ಸುದ್ದಿಗಳ ಹೈಲೆಟ್ಸ್ ಇಲ್ಲಿದೆ.

LIVE NEWS & UPDATES
-
ಬೆಂಗಳೂರಲ್ಲೂ ಇಬ್ಬರು ಅಧಿಕಾರಿಗಳಿಗೆ ‘ಲೋಕಾ’ ಶಾಕ್
ಬೆಂಗಳೂರಿನ ಎರಡು ಕಡೆಯೂ ಲೋಕಾಯುಕ್ತ ದಾಳಿ ನಡೆದಿದ್ದು, ಕರ್ನಾಟಕ ಹೌಸಿಂಗ್ ಬೋರ್ಡ್ ಅಡಿಷನಲ್ ಡೈರೆಕ್ಟರ್ ರಾಜಣ್ಣ ಮತ್ತು ಬೆಸ್ಕಾಂ ಯಲಹಂಕ ವಲಯದ ಎಇಇ ಉದಯ್ ಕುಮಾರ್ ನಿವಾಸಗಳ ಮೇಲೆ ರೇಡ್ ನಡೆದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ನಡೆದಿರುವ ಮಾಹಿತಿ ಇದೆ.
-
ಸ್ಯಾಂಡಲ್ವುಡ್ ನಟ ಶ್ರೀಮುರುಳಿಗೆ ಮಾತೃ ವಿಯೋಗ
ಸ್ಯಾಂಡಲ್ವುಡ್ ನಟ ಶ್ರೀಮುರುಳಿ ತಾಯಿ ಜಯಮ್ಮ ಚಿನ್ನೇಗೌಡ ವಿಧಿವಶರಾಗಿದ್ದಾರೆ. ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಚಿನ್ನೇಗೌಡ ಪತ್ನಿ ಜಯಮ್ಮ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಅವರು ವಿಧಿವಶರಾಗಿದ್ದಾರೆ. ಮತ್ತಷ್ಟು ಓದಿ.
-
-
ಕಲಬುರಗಿಯಲ್ಲೂ ಲೋಕಾಯುಕ್ತ ದಾಳಿ
ಕಲಬುರಗಿಯಲ್ಲೂ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪಂಚಾಯತ್ರಾಜ್ ನಿವೃತ್ತ ಸೂಪರಿಡೆಂಟ್ ಇಂಜಿನಿಯರ್ ಎಸ್.ಇ.ಮಾಣಿಕ್ ಕನಕಟ್ಟಿ ನಿವಾಸದ ಮೇಲೆ ರೇಡ್ ನಡೆದಿದೆ. ಗೋದುತಾಯಿ ನಗರದ ಮನೆ ಸೇರಿ ಐದು ಕಡೆ ದಾಳಿ ನಡೆಸಲಾಗಿದೆ. ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ನಿವಾಸ, ತೋಟದ ಮನೆ, ಹುಮ್ನಾಬಾದ್ನ ಎರಡು ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆ,ಸಿ ಪರಿಶೀಲನೆ ನಡೆಸಲಾಗ್ತಿದೆ.
-
ದಾವಣಗೆರೆ ಹಲವೆಡೆಯೂ ಲೋಕಾಯುಕ್ತ ರೇಡ್
ದಾವಣಗೆರೆಯ ಹಲವೆಡೆಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂವರು ಅಧಿಕಾರಿಗಳ ಮನೆ, ಕಚೇರಿಗಳು ಸೇರಿ 12 ಕಡೆ ದಾವಣಗೆರೆ ಲೋಕಾ SP ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ರೇಡ್ ನಡೆದಿದೆ. ಹುಬ್ಬಳ್ಳಿಯ KSRTC(ವಾಯವ್ಯ) ಚೀಫ್ ಮೆಕ್ಯಾನಿಕ್ ಸಿದ್ದೇಶ್ವರ ಅವರ ಆಂಜನೇಯ ಬಡಾವಣೆಯ ಮನೆ, ಹುಬ್ಬಳ್ಳಿ ಕಚೇರಿ ಸೇರಿದಂತೆ ನಾಲ್ಕು ಕಡೆ ದಾಳಿ ನಡೆದಿದೆ. ದಾಳಿ ವೇಳೆ ಸಿದ್ದೇಶ್ವರ ಮನೆಯಲ್ಲಿ 40 ಲಕ್ಷ ರೂ. ಪತ್ತೆಯಾದ ಮಾಹಿತಿ ಇದೆ. ಚಿತ್ರದುರ್ಗ ಬಯಲು ಸೀಮೆ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಅವರ ಸಿದ್ದವೀರಪ್ಪ ಬಡಾವಣೆಯ ಕೃಷ್ಣನಾಯ್ಕ್ ಮನೆ, ಕಚೇರಿ ಸೇರಿದಂತೆ ಐದು ಕಡೆ ದಾಳಿ ನಡೆದಿದ್ದು, ಬೆಳಗಾವಿ KRIDL ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪಗೆ ಸೇರಿದ ಮನೆ ಸೇರಿದಂತೆ ಐದು ಕಡೆಯೂ ದಾಳಿ ನಡೆದಿದೆ.
-
ಚಿಕ್ಕಮಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ
ಚಿಕ್ಕಮಗಳೂರು ACF ಮೋಹನ್ಗೆ ಸೇರಿದ ಮನೆ, ಕಚೇರಿ, ನಿರ್ಮಾಣ ಹಂತದ ಮನೆ ಸೇರಿದಂತೆ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಕಲ್ಯಾಣನಗರದ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆಸಲಾಗಿದ್ದು, ACF ಮೋಹನ್ ವಿರುದ್ಧ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ DySP ತಿರುಮಲೇಶ್ ನೇತೃತ್ವದಲ್ಲಿ ರೇಡ್ ನಡೆದಿದೆ.
-
-
ಪರಿಷತ್ ಚುನಾವಣೆ: ಜೆಡಿಎಸ್, ಕಾಂಗ್ರೆಸ್ಗೆ ಅಡ್ಡಮತದಾನ ಭೀತಿ
ಇಂದಿನಿಂದ ವಿಧಾನಪರಿಷತ್ ಅಖಾಡ ಮತ್ತಷ್ಟು ರಂಗೇರಲಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ ಆರಂಭವಾಗಿದೆ. ಜೆಡಿಎಸ್ ಶಾಸಕರ ಮೇಲೆ ಕಾಂಗ್ರೆಸ್ ಕಣ್ಣಿಟ್ಟು ನಿರಂತರ ಸಂಪರ್ಕದಲ್ಲಿದ್ದು, ಐದಾರು ಶಾಸಕರನ್ನು ಸೆಳೆಯಲು ಭಾರಿ ಕಸರತ್ತು ನಡೆಸುತ್ತಿದೆ. ಹೀಗಾಗಿ ಕಾಂಗ್ರೆಸ್ ಜೊತೆಗೆ ಅಡ್ಡ ಮತದಾನದ ಭೀತಿಯಲ್ಲಿರುವ ಜೆಡಿಎಸ್ ಕೂಡ ರೆಸಾರ್ಟ್ ಪಾಲಿಟಿಕ್ಸ್ ಶುರುಮಾಡಿದೆ. ಕಾಂಗ್ರೆಸ್ ತಂತ್ರಕ್ಕೆ ಕೌಂಟರ್ ಕೊಡಲು JDS ನಾಯಕರು ಪ್ರತಿತಂತ್ರ ರೂಪಿಸಿದ್ದು, ಕಾಂಗ್ರೆಸ್ನ 10ರಿಂದ 15 ಶಾಸಕರ ಸಂಪರ್ಕಕ್ಕೆ ದಳ ಪಡೆ ಮುಂದಾಗಿದೆ. ಜೆಡಿಎಸ್ ಶಾಸಕರಿಗೆ ಅತ್ಯಾಪ್ತರಾಗಿರುವ ಶಾಸಕರ ಸಂಪರ್ಕಕ್ಕೆ ಪ್ರಯತ್ನ ನಡೆಯುತ್ತಿದ್ದು, ಮಂತ್ರಿಗಿರಿ ಕೈತಪ್ಪಿರುವ ಮತ್ತು ಅಸಮಾಧಾನಿತ ಶಾಸಕರ ಸೆಳೆಯಲು ಕಸರತ್ತು ನಡೆಸಲಾಗ್ತಿದೆ. ವಿಶೇಷವಾಗಿ 2028ರ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಲು ಒಲವು ಹೊಂದಿರುವ ಶಾಸಕರನ್ನು ಸಂಪರ್ಕಿಸಲು ಪ್ರಯತ್ನ ಶುರುವಾಗಿದೆ.
ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್ ಕೊಟ್ಟಿದ್ದು ಕಲಬುರಗಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ದಾಳಿ ನಡೆದಿದೆ. ಮನೆ ಮತ್ತು ಕಚೇರಿಗಳು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ತಲಾಶ್ ನಡೆಸಿದ್ದಾರೆ. ಮತ್ತೊಂದೆಡೆ ವಿಧಾನ ಪರಿಷತ್ ಚುನಾವಣಾ ಕಣ ರಾಜ್ಯದಲ್ಲಿ ರಂಗೇರಿದ್ದು, ರೆಸಾರ್ಟ್ ಪಾಲಿಟಿಕ್ಸ್ ಶುರುವಾಗಿದೆ. ಇಂದು ‘ಕೈ’ ಶಾಸಕರಿಂದ ರೆಸಾರ್ಟ್ ವಾಸ್ತವ್ಯ ಶುರುವಾಗಿದ್ದರೆ, ನಾಳೆ JDSನವರ ಸರದಿ ನಿಗದಿಯಾಗಿದೆ. ಐದಾರು ಜೆಡಿಎಸ್ ಶಾಸಕರನ್ನು ಸೆಳೆಯಲು ಕೈ ಪಾಳಯದಲ್ಲಿ ಭಾರಿ ಕಸರತ್ತು ನಡೆಯುತ್ತಿದ್ದರೆ, ಕಾಂಗ್ರೆಸ್ ತಂತ್ರಕ್ಕೆ ಕೌಂಟರ್ ಕೊಡಲು JDS ನಾಯಕರ ಪ್ರತಿತಂತ್ರ ರೂಪಿಸಿರೋದು ಕುತೂಹಲ ಹೆಚ್ಚಿಸಿದೆ. ರಾಜ್ಯ, ದೇಶ, ಸಿನಿಮಾ, ಕ್ರೀಡೆ ಸೇರಿ ಇಂದಿನ ಪ್ರಮುಖ ಸುದ್ದಿಗಳ ಹೈಲೆಟ್ಸ್ ಇಲ್ಲಿದೆ.
Published On - Jun 16,2026 8:58 AM




