
ಪರಿಷತ್ನ 7 ಸ್ಥಾನಗಳಿಗೆ ನಡೆದ ಚುನಾವಣೆ ಮುಕ್ತಾಯಗೊಂಡಿದ್ದು, ಇದೀಗ ಫಲಿತಾಂಶ ಕೂಡ ಪ್ರಕಟಗೊಂಡಿದೆ. ಕಾಂಗ್ರೆಸ್ನ ಐವರು ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಜಯಗಳಿಸಿದರೆ, ಜೆಡಿಎಸ್ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಸೋಲು ಕಂಡಿದ್ದಾರೆ. ಶಾಸಕರು ಬೆಳಗ್ಗೆ 8.30ಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಕಚೇರಿಗೆ ಆಗಮಿಸಿ ಮತದಾನ ನಡೆದಿತ್ತು. ಎನ್.ರವಿಕುಮಾರ್ ಚುನಾವಣಾ ಏಜೆಂಟ್ ಆಗಿದ್ದರು. ಇನ್ನು ಜಾಗತಿಕವಾಗಿ, 110 ದಿನಗಳ ಸಂಘರ್ಷಕ್ಕೆ ಅಂತ್ಯ ಹಾಡಿ ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿ ತೈಲ ಬೆಲೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಅನುಷ್ಠಾನ ಪರೀಕ್ಷಿಸುವ ಸಮಯ ಎಂದು ಇರಾನ್ ಹೇಳಿದೆ. ಇತ್ತ ‘ದೃಶ್ಯಂ 3’ ತೆಲುಗು ಆವೃತ್ತಿಯ ಒಟಿಟಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಿರ್ದೇಶಕಿ ಶ್ರೀಪ್ರಿಯಾ ಸಂಸ್ಥೆಯ ರಿಮೇಕ್ ಹಕ್ಕುಗಳ ವಿವಾದದ ಹಿನ್ನೆಲೆಯಲ್ಲಿ ಜೂನ್ 18ರ ಸ್ಟ್ರೀಮಿಂಗ್ಗೆ ಕೋರ್ಟ್ ಬ್ರೇಕ್ ಹಾಕಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ಡಿಸಿಎಂ ಡಾ. ಜಿ. ಪರಮೇಶ್ವರ್ ಅಭಿನಂದನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ್ ಕಾರ್ತಿಕ್ ಅವರಿಗೆ ಹೃತ್ಪೂರ್ವಕ ಶುಭ ಹಾರೈಸಿದ್ದಾರೆ. ಪಕ್ಷದ ನೂತನ ಸದಸ್ಯರಾದ ಇವರೆಲ್ಲರೂ ತಮ್ಮ ಅನುಭವ ಮತ್ತು ಬದ್ಧತೆಯೊಂದಿಗೆ ಜನಪರ ಕಾಳಜಿಯ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸಲಿ ಎಂದು ಪರಮೇಶ್ವರ್ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ 11 ಹೆಚ್ಚುವರಿ ಮತಗಳು ಲಭಿಸಿವೆ. ಬಿಜೆಪಿಯ ಮೂವರು ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ. ಶಿವರಾಂ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್ ಹೊರತುಪಡಿಸಿ ಉಳಿದ ಬಿಜೆಪಿ ಶಾಸಕರಿಂದ ಮತ ಹಾಕಲಾಗಿದೆ. ಜೆಡಿಎಸ್ನ 6 ಶಾಸಕರು ಕೂಡ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ.
ಸಾಕಷ್ಟು ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್ನಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಸೋಲು ಕಂಡಿದ್ದಾರೆ.
ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್ನ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್ನ ಗೋವಿಂದರಾಜು
ಕರ್ನಾಟಕ ಪರಿಷತ್ ಚುನಾವಣೆಯ ಮತ ಎಣಿಕೆ ಇಂದು ಸಂಜೆ 5 ಗಂಟೆಗೆ ಆರಂಭವಾಗಲಿದೆ. 222 ಶಾಸಕರಿಂದ 100% ಮತದಾನವಾಗಿದ್ದು, ಏಳನೇ ಅಭ್ಯರ್ಥಿಯ ಫಲಿತಾಂಶ ಕುತೂಹಲ ಕೆರಳಿಸಿದೆ. ಕ್ರಾಸ್ ವೋಟಿಂಗ್ ಸಾಧ್ಯತೆ, ವಿಶೇಷವಾಗಿ ಕಾಂಗ್ರೆಸ್ ಪಕ್ಷದ ಅತೃಪ್ತರ ಮತಗಳು ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರ ಮತ ಅಸಿಂಧುಗೊಳಿಸುವ ಪ್ರಯತ್ನಗಳು ಚುನಾವಣೆಯನ್ನು ಮತ್ತಷ್ಟು ಜಟಿಲಗೊಳಿಸಿವೆ. ಆರು ಗಂಟೆಯೊಳಗೆ ಫಲಿತಾಂಶ ನಿರೀಕ್ಷಿಸಲಾಗಿದೆ.
ವಿಧಾನಪರಿಷತ್ ಚುನಾವಣೆಯಲ್ಲಿ ಎಲ್ಲಾ 222 ಶಾಸಕರಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. 100% ಮತದಾನವಾದ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಇ-ಮೇಲ್ ಮೂಲಕ ಮಾಹಿತಿ ರವಾನಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮತದಾನದ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳನ್ನು ನೀಡಬೇಕು ಎಂದು ಹೇಳಿದ್ದಾರೆ. ವೋಟಿಂಗ್ ಇಲ್ಲ ಎಂದಾದರೆ ನಾವ್ಯಾಕೆ ಗ್ಯಾರಂಟಿ ಕೊಡಬೇಕು ಎಂದು ಪ್ರಶ್ನಿಸಿದ ಅವರು, ಶಕ್ತಿ ಯೋಜನೆಯಡಿ ಪ್ರಯಾಣಿಸಲು ಗುರುತಿನ ಚೀಟಿ ಕಡ್ಡಾಯವಾಗಿ ನೀಡಬೇಕು ಎಂದಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಆರು ಮತಗಳ ನಿರೀಕ್ಷೆಯಲ್ಲಿದ್ದ ಜೆಡಿಎಸ್ಗೆ ಕೊನೆ ಹಂತದಲ್ಲಿ ಲೆಕ್ಕಾಚಾರ ಕೈತಪ್ಪಿದೆ. ಬಿಜೆಪಿ ತನ್ನ ಇಬ್ಬರು ಅಭ್ಯರ್ಥಿಗಳಿಗೆ ತಲಾ 30 ಮತಗಳನ್ನು ಚಲಾಯಿಸಿದ್ದರಿಂದ ಜೆಡಿಎಸ್ಗೆ ಕೇವಲ ಎರಡು ಮತಗಳು ಮಾತ್ರ ಶಿಫ್ಟ್ ಆಗಿವೆ. ಇತ್ತ ಜಿ.ಟಿ. ದೇವೇಗೌಡರ ಮತ ಕೈತಪ್ಪುವ ಸಾಧ್ಯತೆಯ ನಡುವೆ, ಶಾಸಕ ಯತ್ನಾಳ್ ಬಿಜೆಪಿಗೆ ಮತ ಹಾಕುವುದಾಗಿ ಹೇಳಿರುವುದರಿಂದ ಜೆಡಿಎಸ್ಗೆ ಕೇವಲ 20 ಮತಗಳು ಮಾತ್ರ ಸಿಗುವ ಸಾಧ್ಯತೆಯಿದೆ.
ಮಾಕ್ ವೋಟಿಂಗ್ನಲ್ಲಿ ಕಾಂಗ್ರೆಸ್ನ ಕೆಲವು ಮತಗಳು ಲ್ಯಾಪ್ಸ್ ಆದ ಹಿನ್ನೆಲೆಯಲ್ಲಿ, ನಾಯಕರು ಮೊದಲ ನಾಲ್ಕು ಅಭ್ಯರ್ಥಿಗಳಿಗೆ ತಲಾ 30 ಮತ ಹಾಗೂ 5ನೇ ಅಭ್ಯರ್ಥಿಗೆ 20 ಮತಗಳೊಂದಿಗೆ 120 ಶಾಸಕರ 2ನೇ ಪ್ರಾಶಸ್ತ್ಯದ ಮತ ನೀಡಲು ಹೊಸ ತಂತ್ರ ರೂಪಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಎರಡು ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಕುತೇಡ್ ಸಮೀಪ ಬೊಲೆರೊ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಏಳು ಜನರು ಮೃತಪಟ್ಟರೆ, ಚಂಬಾದಲ್ಲಿ ನಡೆದ ಮತ್ತೊಂದು ದುರಂತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ರಸ್ತೆಗಳಲ್ಲಿ ಕ್ರಾಶ್ ಬ್ಯಾರಿಯರ್ ಅಳವಡಿಸದ ಹಿನ್ನೆಲೆಯಲ್ಲಿ ಈ ಅಪಘಾತಗಳು ಸಂಭವಿಸಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮತ್ತಷ್ಟು ಓದಿ.
ಜಿ7 ಶೃಂಗಸಭೆ ಮುಗಿಸಿ ಪ್ಯಾರಿಸ್ಗೆ ಆಗಮಿಸಿರುವ ಪ್ರಧಾನಿ ಮೋದಿ, ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಸಹಭಾಗಿತ್ವ ಅತ್ಯಗತ್ಯ ಎಂದು ಹೇಳಿದ್ದಾರೆ. ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ವಿವಾಟೆಕ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ರಕ್ಷಣೆ, ತಂತ್ರಜ್ಞಾನ, ಹವಾಮಾನ ಬದಲಾವಣೆ ಹಾಗೂ ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗಿನ ಸಹಕಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ. ಮತ್ತಷ್ಟು ಓದಿ.
ಕಿರುತೆರೆ ಮತ್ತು ಚಿತ್ರರಂಗದ ಖ್ಯಾತ ನಟಿ ರೂಪಿಕಾ ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಇವರ ನಿಶ್ಚಿತಾರ್ಥ ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದ್ದು, ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಮದುವೆ ನಡೆಯಲಿದೆ. ಮೂಲತಃ ಬೆಂಗಳೂರಿನವರಾದ ಅಂಕಿತ್ ಸದ್ಯ ಕೆನಡಾದಲ್ಲಿ ನೆಲೆಸಿದ್ದಾರೆ. 'ಲಕ್ಷ್ಮಿ ನಿವಾಸ' ಧಾರಾವಾಹಿ ಖ್ಯಾತಿಯ ನಟಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಮತ್ತಷ್ಟು ಓದಿ.
ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಮತದಾನ ನಡೆಯಲಿದೆ. ಮತದಾನ ಕೇಂದ್ರದ ಹೊರ ಮತ್ತು ಒಳಭಾಗದಲ್ಲಿ ಸಿಸಿಟಿವಿ ಅಳವಡಿಕೆ ಕೂಡ ಮಾಡಲಾಗಿದೆ. ಈಗಾಗಲೇ ಮೂರು ಪಕ್ಷಗಳು ಎಲ್ಲ ತಯಾರಿಯನ್ನು ಮಾಡಿಕೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯಿರುವ JW ಮ್ಯಾರಿಯೇಟ್ ರೆಸಾರ್ಟ್ನಲ್ಲಿ ತಂಗಿರುವ ಜೆಡಿಎಸ್ ಶಾಸಕರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ತಡರಾತ್ರಿವರೆಗೂ ಸಭೆ ನಡೆಸಿ, ಮತದಾನದ ಕುರಿತು ಮಾಹಿತಿ ನೀಡಿ ತೆರಳಿದ್ದಾರೆ. ಬೆಳಿಗ್ಗೆ 9 ಗಂಟೆಯ ನಂತರ ರೆಸಾರ್ಟ್ನಿಂದ ಹೊರಡಲಿರುವ ಶಾಸಕರು, ಅಲ್ಲಿಂದ ವಿಶೇಷ ಬಸ್ ಮೂಲಕ ನೇರವಾಗಿ ವಿಧಾನಸೌಧಕ್ಕೆ ತೆರಳಲಿದ್ದಾರೆ.
ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಮತದಾನ ಆರಂಭವಾಗಲಿದೆ. ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ನೇತೃತ್ವದಲ್ಲಿ ಮತದಾನ ಪ್ರಕ್ರಿಯೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಭದ್ರತೆ ಹಾಗೂ ಪಾರದರ್ಶಕತೆಗಾಗಿ ಮತದಾನ ಕೇಂದ್ರದ ಒಳ ಹಾಗೂ ಹೊರಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
Published On - 8:35 am, Thu, 18 June 26