Breaking News Today Live: ವಿಧಾನಪರಿಷತ್​ನ 7 ಸ್ಥಾನಗಳಿಗೆ ಮತದಾನ ಆರಂಭ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು

Karnataka News Today Live Updates: ಇಂದು ವಿಧಾನಪರಿಷತ್ ಚುನಾವಣೆ ಮತದಾನ ನಡೆಯಲಿದ್ದು, ರಾಜಕೀಯ ಗರಿಗೆದರಿದೆ. ಅತ್ತ ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಇತ್ತ ವಿವಾದದ ಹಿನ್ನೆಲೆಯಲ್ಲಿ 'ದೃಶ್ಯಂ 3' ಒಟಿಟಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಲೈವ್ ಅಪ್ಡೇಟ್ಸ್ ಇಲ್ಲಿದೆ.

Breaking News Today Live: ವಿಧಾನಪರಿಷತ್​ನ 7 ಸ್ಥಾನಗಳಿಗೆ ಮತದಾನ ಆರಂಭ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು
ಈ ಹೊತ್ತಿನ ಪ್ರಮುಖ ಸುದ್ದಿಗಳು

Updated on: Jun 18, 2026 | 10:30 AM

LIVE NEWS & UPDATES

  • 18 Jun 2026 10:30 AM (IST)

    ಪ್ಯಾರಿಸ್‌ಗೆ ಪ್ರಧಾನಿ ಮೋದಿ ಆಗಮನ

    ಜಿ7 ಶೃಂಗಸಭೆ ಮುಗಿಸಿ ಪ್ಯಾರಿಸ್‌ಗೆ ಆಗಮಿಸಿರುವ ಪ್ರಧಾನಿ ಮೋದಿ, ಜಾಗತಿಕ ಪ್ರಗತಿಗೆ ಭಾರತ-ಫ್ರಾನ್ಸ್ ಸಹಭಾಗಿತ್ವ ಅತ್ಯಗತ್ಯ ಎಂದು ಹೇಳಿದ್ದಾರೆ. ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ವಿವಾಟೆಕ್ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, ರಕ್ಷಣೆ, ತಂತ್ರಜ್ಞಾನ, ಹವಾಮಾನ ಬದಲಾವಣೆ ಹಾಗೂ ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗಿನ ಸಹಕಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ. ಮತ್ತಷ್ಟು ಓದಿ.

  • 18 Jun 2026 10:06 AM (IST)

    ನಟಿ ರೂಪಿಕಾ ನಿಶ್ಚಿತಾರ್ಥ: ಆಗಸ್ಟ್‌ನಲ್ಲಿ ಅಂಕಿತ್ ಜೊತೆ ವಿವಾಹ

    ಕಿರುತೆರೆ ಮತ್ತು ಚಿತ್ರರಂಗದ ಖ್ಯಾತ ನಟಿ ರೂಪಿಕಾ ತಮ್ಮ ಬಹುಕಾಲದ ಗೆಳೆಯ ಅಂಕಿತ್ ಅವರೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಇವರ ನಿಶ್ಚಿತಾರ್ಥ ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿದ್ದು, ಆಗಸ್ಟ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ಮದುವೆ ನಡೆಯಲಿದೆ. ಮೂಲತಃ ಬೆಂಗಳೂರಿನವರಾದ ಅಂಕಿತ್ ಸದ್ಯ ಕೆನಡಾದಲ್ಲಿ ನೆಲೆಸಿದ್ದಾರೆ. ‘ಲಕ್ಷ್ಮಿ ನಿವಾಸ’ ಧಾರಾವಾಹಿ ಖ್ಯಾತಿಯ ನಟಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಮತ್ತಷ್ಟು ಓದಿ.

  • 18 Jun 2026 10:05 AM (IST)

    ಅನಾರೋಗ್ಯ ಪೀಡಿತ ಡಿಸಿಎಂ ಪರಮೇಶ್ವರ್ ನಿವಾಸಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ

    ಕಳೆದ ಒಂದು ವಾರದಿಂದ ಅನಾರೋಗ್ಯಕ್ಕೀಡಾಗಿರುವ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರ ಆರೋಗ್ಯ ವಿಚಾರಿಸಲು ಸಿಎಂ ಡಿ.ಕೆ. ಶಿವಕುಮಾರ್ ಅವರು ಸದಾಶಿವನಗರದಲ್ಲಿರುವ ಅವರ ನಿವಾಸಕ್ಕೆ ತೆರಳಲಿದ್ದಾರೆ. ಇದೇ ಅನಾರೋಗ್ಯದ ಕಾರಣದಿಂದಾಗಿ ಡಿಸಿಎಂ ಅವರು ಮೊನ್ನೆ ನಡೆದ ರೆಸಾರ್ಟ್ ಸಭೆಗೂ ಕೂಡ ಗೈರಾಗಿದ್ದರು.

  • 18 Jun 2026 10:03 AM (IST)

    ಬಿಜೆಪಿ ಅಭ್ಯರ್ಥಿಗೆ ಯತ್ನಾಳ್ ಮತ: ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ

    ವಿಧಾನಪರಿಷತ್‌ನ 7 ಸ್ಥಾನಗಳ ಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಪತ್ರ ಬರೆದಿದ್ದಾರೆ.

  • 18 Jun 2026 09:26 AM (IST)

    ವಿಧಾನಸೌಧದತ್ತ ಕಾಂಗ್ರೆಸ್ ಶಾಸಕರು: ರೆಸಾರ್ಟ್‌ನಿಂದ ಐದು ಬಸ್‌ಗಳಲ್ಲಿ ಪ್ರಯಾಣ

    ವಂಡರ್ ಲಾ ರೆಸಾರ್ಟ್‌ನಲ್ಲಿ ತಂಗಿದ್ದ ಕಾಂಗ್ರೆಸ್ ಶಾಸಕರು ಈಗ ಬಿಗಿ ಪೊಲೀಸ್ ಭದ್ರತೆಯಲ್ಲಿ ವಿಧಾನಸೌಧದತ್ತ ಹೊರಟಿದ್ದಾರೆ. ಒಟ್ಟು ಐದು ವಿಶೇಷ ಬಸ್‌ಗಳಲ್ಲಿ ಶಾಸಕರು ಒಟ್ಟಾಗಿ ಪ್ರಯಾಣ ಬೆಳೆಸಿದ್ದು, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಕಟ್ಟುನಿಟ್ಟಿನ ಕಾವಲಿನೊಂದಿಗೆ ವಿಧಾನಸೌಧಕ್ಕೆ ಆಗಮಿಸುತ್ತಿದ್ದಾರೆ.

  • 18 Jun 2026 09:03 AM (IST)

    ವಿಧಾನಪರಿಷತ್​ನ 7 ಸ್ಥಾನಗಳಿಗೆ ಮತದಾನ ಆರಂಭ

    ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಮತದಾನ ನಡೆಯಲಿದೆ.  ಮತದಾನ ಕೇಂದ್ರದ ಹೊರ ಮತ್ತು ಒಳಭಾಗದಲ್ಲಿ ಸಿಸಿಟಿವಿ ಅಳವಡಿಕೆ ಕೂಡ ಮಾಡಲಾಗಿದೆ. ಈಗಾಗಲೇ ಮೂರು ಪಕ್ಷಗಳು ಎಲ್ಲ ತಯಾರಿಯನ್ನು ಮಾಡಿಕೊಂಡಿದೆ.

  • 18 Jun 2026 08:41 AM (IST)

    JW ಮ್ಯಾರಿಯೇಟ್ ರೆಸಾರ್ಟ್‌ನಿಂದ ವಿಧಾನಸೌಧಕ್ಕೆ ಜೆಡಿಎಸ್ ಶಾಸಕರು

    ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಬಳಿಯಿರುವ JW ಮ್ಯಾರಿಯೇಟ್ ರೆಸಾರ್ಟ್‌ನಲ್ಲಿ ತಂಗಿರುವ ಜೆಡಿಎಸ್ ಶಾಸಕರೊಂದಿಗೆ ಹೆಚ್.ಡಿ. ಕುಮಾರಸ್ವಾಮಿ ತಡರಾತ್ರಿವರೆಗೂ ಸಭೆ ನಡೆಸಿ, ಮತದಾನದ ಕುರಿತು ಮಾಹಿತಿ ನೀಡಿ ತೆರಳಿದ್ದಾರೆ. ಬೆಳಿಗ್ಗೆ 9 ಗಂಟೆಯ ನಂತರ ರೆಸಾರ್ಟ್‌ನಿಂದ ಹೊರಡಲಿರುವ ಶಾಸಕರು, ಅಲ್ಲಿಂದ ವಿಶೇಷ ಬಸ್ ಮೂಲಕ ನೇರವಾಗಿ ವಿಧಾನಸೌಧಕ್ಕೆ ತೆರಳಲಿದ್ದಾರೆ.

  • 18 Jun 2026 08:39 AM (IST)

    ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ: ಮತದಾನಕ್ಕೆ ಕ್ಷಣಗಣನೆ

    ವಿಧಾನಸೌಧದ ಕೊಠಡಿ ಸಂಖ್ಯೆ 106 ರಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯಲ್ಲಿ ಬೆಳಿಗ್ಗೆ 9 ಗಂಟೆಗೆ ಮತದಾನ ಆರಂಭವಾಗಲಿದೆ. ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ನೇತೃತ್ವದಲ್ಲಿ ಮತದಾನ ಪ್ರಕ್ರಿಯೆಗೆ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಭದ್ರತೆ ಹಾಗೂ ಪಾರದರ್ಶಕತೆಗಾಗಿ ಮತದಾನ ಕೇಂದ್ರದ ಒಳ ಹಾಗೂ ಹೊರಭಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ರಾಜ್ಯ ವಿಧಾನಪರಿಷತ್​ನ 7 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ರಾಜಕೀಯ ಚಟುವಟಿಕೆ ತೀವ್ರಗೊಂಡಿದೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳಿಗೆ ತಲಾ 29 ಮತ ನಿಗದಿಯಾಗಿದೆ. ಶಾಸಕರು ಬೆಳಗ್ಗೆ 8.30ಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಕಚೇರಿಗೆ ಆಗಮಿಸಿ ಮತದಾನಕ್ಕೆ ತೆರಳಲಿದ್ದು, ಎನ್.ರವಿಕುಮಾರ್ ಚುನಾವಣಾ ಏಜೆಂಟ್ ಆಗಿದ್ದಾರೆ. ಜಾಗತಿಕವಾಗಿ, 110 ದಿನಗಳ ಸಂಘರ್ಷಕ್ಕೆ ಅಂತ್ಯ ಹಾಡಿ ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿ ತೈಲ ಬೆಲೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಅನುಷ್ಠಾನ ಪರೀಕ್ಷಿಸುವ ಸಮಯ ಎಂದು ಇರಾನ್ ಹೇಳಿದೆ. ಇತ್ತ ‘ದೃಶ್ಯಂ 3’ ತೆಲುಗು ಆವೃತ್ತಿಯ ಒಟಿಟಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಿರ್ದೇಶಕಿ ಶ್ರೀಪ್ರಿಯಾ ಸಂಸ್ಥೆಯ ರಿಮೇಕ್ ಹಕ್ಕುಗಳ ವಿವಾದದ ಹಿನ್ನೆಲೆಯಲ್ಲಿ ಜೂನ್ 18ರ ಸ್ಟ್ರೀಮಿಂಗ್‌ಗೆ ಕೋರ್ಟ್ ಬ್ರೇಕ್ ಹಾಕಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

 

Published On - 8:35 am, Thu, 18 June 26

Follow Us