Breaking News Today Live: ಕೊಡಗು ಜಿಲ್ಲಾ‌ ನ್ಯಾಯಾಲಯ ಸಂಕೀರ್ಣಕ್ಕೆ ಮತ್ತೆ ಬಾಂಬ್ ಬೆದರಿಕೆ!

Karnataka News Today Live Updates: ವಾಟ್ಸಾಪ್ ಜಾಗತಿಕ ಮುಖ್ಯಸ್ಥರಾಗಿ ಕುನಾಲ್ ಶಾ ನೇಮಕ, 'ವೆಲ್ಕಮ್ ಟು ದಿ ಜಂಗಲ್' ಚಿತ್ರಕ್ಕೆ ಸೆನ್ಸಾರ್ ಶಾಕ್ ಹಾಗೂ ಕನ್ನಡಪರ ಸಂಘಟನೆಗಳ ರೈಲ್ವೆ ಪ್ರತಿಭಟನೆ ವಾಪಸ್ ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳನ್ನು ಓದಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Breaking News Today Live: ಕೊಡಗು ಜಿಲ್ಲಾ‌ ನ್ಯಾಯಾಲಯ ಸಂಕೀರ್ಣಕ್ಕೆ ಮತ್ತೆ ಬಾಂಬ್ ಬೆದರಿಕೆ!
ಕೊಡಗು ಜಿಲ್ಲಾ‌ ನ್ಯಾಯಾಲಯ ಸಂಕೀರ್ಣ

Updated on: Jun 23, 2026 | 10:30 AM

LIVE NEWS & UPDATES

  • 23 Jun 2026 10:30 AM (IST)

    ಬಿಎಂಟಿಸಿ ಪ್ರಯಾಣಿಕರಿಗೆ ದರ ಏರಿಕೆ ಬರೆ: ಇಂದಿನಿಂದ ವಿಸ್ತಾರ ಮಾಸಿಕ ಬಸ್ ಪಾಸ್ ದುಬಾರಿ

    ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ತನ್ನ ಕಾರ್ಯಾಚರಣೆಯ ವ್ಯಾಪ್ತಿಯನ್ನು ವಿಸ್ತರಿಸಿರುವ ಹಿನ್ನೆಲೆಯಲ್ಲಿ ಸುದೀರ್ಘ ಪ್ರಯಾಣದ ‘ವಿಸ್ತಾರ ಮಾಸಿಕ ಬಸ್ ಪಾಸ್’ ದರವನ್ನು ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಜಾರಿಗೆ ಬರುವಂತೆ 1,500 ರೂಪಾಯಿ ನಿಗದಿಪಡಿಸಿದೆ. ಇದರ ಬೆನ್ನಲ್ಲೇ ಬಿಎಂಟಿಸಿ ಎಸಿ ಬಸ್‌ಗಳ (ವಜ್ರ) ಮಾಸಿಕ ಪಾಸ್ ದರವನ್ನು ಸಹ 2,500 ರೂಪಾಯಿಗೆ ಏರಿಕೆ ಮಾಡಲು ಸಾರಿಗೆ ಸಂಸ್ಥೆ ಭರದ ಸಿದ್ಧತೆ ನಡೆಸುತ್ತಿದೆ ಎನ್ನಲಾಗಿದೆ. ಮತ್ತಷ್ಟು ಓದಿ

  • 23 Jun 2026 10:22 AM (IST)

    ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

    ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳು ಹಾಗೂ ಮತ್ಸದ್ಯೋದ್ಯಮ ಇಲಾಖೆಯ ರಾಜ್ಯ ಸಚಿವ (MoS) ಜಾರ್ಜ್ ಕುರಿಯನ್ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ಆರು ವರ್ಷಗಳ ರಾಜ್ಯಸಭಾ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಗೆ ಮರು ನಾಮನಿರ್ದೇಶನ ಮಾಡದ ಕಾರಣ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ದೀರ್ಘಕಾಲದ ಬಿಜೆಪಿ ನಾಯಕ ಹಾಗೂ ವಕೀಲರಾಗಿರುವ ಇವರು, ಕಳೆದ ವರ್ಷ ಜೂನ್ 9ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಮತ್ತಷ್ಟು ಓದಿ

  • 23 Jun 2026 10:03 AM (IST)

    ಮೇಲುಕೋಟೆ ದೇಗುಲದ ಹುಂಡಿ ಕಳ್ಳತನ: ಅರ್ಚಕ ಸೇರಿ 6 ಮಂದಿ ಅಮಾನತು

    ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಪ್ರಸಿದ್ಧ ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಾಲಯದ ಹುಂಡಿ ಕಳ್ಳತನ ಮತ್ತು ಕರ್ತವ್ಯಲೋಪ ಆರೋಪದಡಿ ಅರ್ಚಕ ನಾರಾಯಣಭಟ್ಟ, ಪಾರುಪತ್ತೆದಾರ ಶ್ರೀಧರ್ ಸೇರಿದಂತೆ 6 ಮಂದಿ ಸಿಬ್ಬಂದಿಯನ್ನು ಇಒ ಶೀಲಾ ಅಮಾನತುಗೊಳಿಸಿದ್ದಾರೆ. ಜನವರಿಯಲ್ಲಿ ಬೆಳಕಿಗೆ ಬಂದಿದ್ದ ಈ ಪ್ರಕರಣದಲ್ಲಿ ಸಿಸಿಟಿವಿ ಹಾಗೂ ರಹಸ್ಯ ಕ್ಯಾಮೆರಾಗಳನ್ನು ಹಾಳುಗೆಡವಿ ಹುಂಡಿಯ ಚಿನ್ನ, ಬೆಳ್ಳಿ ಮತ್ತು ನಗದು ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಸದ್ಯ ಆರೋಪ ಸಾಬೀತಾದ ಕಾರಣ ಇವರನ್ನು ಅಮಾನತುಗೊಳಿಸಿ, ಹೊಸ ಅರ್ಚಕರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.

  • 23 Jun 2026 10:01 AM (IST)

    ವಿಧಾನಪರಿಷತ್ ಚುನಾವಣೆ: ದೆಹಲಿಗೆ ಆರ್‌ ಅಶೋಕ್ ದೌಡು

    ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ (Cross Voting) ಕೋಲಾಹಲದ ಬೆನ್ನಲ್ಲೇ, ಬಿ.ವೈ. ವಿಜಯೇಂದ್ರ ಅವರ ಹಾದಿಯಲ್ಲೇ ವಿಪಕ್ಷ ನಾಯಕ ಆರ್. ಅಶೋಕ್ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಅಡ್ಡ ಮತದಾನದ ಕುರಿತು ವರದಿ ಸಲ್ಲಿಸಲಿದ್ದಾರೆ.

  • 23 Jun 2026 09:35 AM (IST)

    ಜನೌಷಧಿ ಕೇಂದ್ರಗಳಲ್ಲಿ ಬ್ರಾಂಡೆಡ್ ಮದ್ದು: 133 ಮಳಿಗೆಗಳಿಗೆ ನೋಟಿಸ್!

    ರಾಜ್ಯದ ಜನೌಷಧಿ ಕೇಂದ್ರಗಳಲ್ಲಿ ನಿಯಮ ಬಾಹಿರವಾಗಿ ಬ್ರಾಂಡೆಡ್ ಔಷಧಗಳನ್ನು ಮಾರಾಟ ಮಾಡುತ್ತಿರುವುದನ್ನು ಆರೋಗ್ಯ ಇಲಾಖೆ ಪತ್ತೆಹಚ್ಚಿದೆ. ಕೇವಲ ಎರಡು ದಿನಗಳಲ್ಲಿ ರಾಜ್ಯಾದ್ಯಂತ 172 ಔಷಧ ಮಳಿಗೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸಿದ 133 ಜನೌಷಧ ಕೇಂದ್ರಗಳಿಗೆ ಇಲಾಖೆಯು ಶೋಕಾಸ್ ನೋಟಿಸ್ (SCN) ಜಾರಿಗೊಳಿಸಿ ವರದಿ ಸಲ್ಲಿಸಿದೆ.

  • 23 Jun 2026 08:40 AM (IST)

    ತುಮಕೂರಿನಲ್ಲಿ ಇಂದಿರಾ ಕ್ಯಾಂಟಿನ್ ಬಂದ್!

    ತುಮಕೂರು ನಗರದ 6 ಇಂದಿರಾ ಕ್ಯಾಂಟಿನ್‌ಗಳು ಕಳೆದ 8 ದಿನಗಳಿಂದ ಏಕಾಏಕಿ ಬಂದ್ ಆಗಿದ್ದು, ಬಡವರ ಹಸಿವು ನೀಗಿಸುತ್ತಿದ್ದ ಊಟ ಸರಬರಾಜು ಸ್ಥಗಿತಗೊಂಡಿದೆ. ಮುಂಬೈ ಮೂಲದ ಗುತ್ತಿಗೆದಾರ ಕಂಪನಿ ‘ಚೆಫ್ಟಕ್ ಕಾರ್ಟ್ ಅಂಡ್ ಹಾಸ್ಪಿಟಾಲಿಟಿ’ ಜಿಲ್ಲಾಡಳಿತದಿಂದ ಬರಬೇಕಾದ ಬಿಲ್ ಬಾಕಿ ಹಾಗೂ ಕಾರ್ಮಿಕರ ಒಂದು ವರ್ಷದ ಸಂಬಳ ನೀಡದ ಕಾರಣಕ್ಕೆ ಸೇವೆ ನಿಲ್ಲಿಸಿದೆ ಎನ್ನಲಾಗಿದೆ.

  • 23 Jun 2026 08:39 AM (IST)

    ಸಂಪುಟ ಪುನಾರಚನೆ: ದೆಹಲಿಯಲ್ಲಿ ರಾಜ್ಯ ನಾಯಕರ ಲಾಬಿ

    ರಾಜ್ಯ ಸಚಿವ ಸಂಪುಟ ಪುನಾರಚನೆ ಕಸರತ್ತು ಚುರುಕುಗೊಂಡಿದ್ದು, ಹಿರಿಯ ನಾಯಕರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಈಗಾಗಲೇ ಹೆಚ್.ಕೆ. ಪಾಟೀಲ್, ಆರ್.ವಿ. ದೇಶಪಾಂಡೆ, ಸಂತೋಷ್ ಲಾಡ್ ಹಾಗೂ ಯಶವಂತ ರಾಯಗೌಡ ಪಾಟೀಲ್ ಹೈಕಮಾಂಡ್ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗೂ ಸಮಯ ಕೋರಲಾಗಿದೆ. ಆದರೆ, ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿರುವುದರಿಂದ ಸಂಪುಟ ಕಸರತ್ತು ಕೊಂಚ ವಿಳಂಬವಾಗುವ ಸಾಧ್ಯತೆಯಿದೆ.

  • 23 Jun 2026 08:38 AM (IST)

    ಡಿ.ಕೆ.ಶಿವಕುಮಾರ್‌ಗಾಗಿ ಚಂಡಿಕಾ ಮಹಾಯಾಗ

    ಡಿ.ಕೆ.ಶಿವಕುಮಾರ್‌ ಅವರಿಗೆ ಶಕ್ತಿ ನೀಡಲು ಮತ್ತು ಸಿದ್ದರಾಮಯ್ಯ ಅವರ ಆರೋಗ್ಯಕ್ಕಾಗಿ ಮೈಸೂರಿನಲ್ಲಿ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಬೃಹತ್ ಚಂಡಿಕಾ ಮಹಾಯಾಗ ಹಾಗೂ ದುರ್ಗಾ ಸಪ್ತಶತಿ ಪಾರಾಯಣ ನಡೆಯಿತು. ನಂಜರಾಜ ಬಹದ್ದೂರು ಕಲ್ಯಾಣ ಮಂಟಪದಲ್ಲಿ ನಡೆದ ಈ ವಿಶೇಷ ಪೂಜೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದು, ಬರಗಾಲ ನಿವಾರಣೆ ಹಾಗೂ ಲೋಕಕಲ್ಯಾಣಕ್ಕಾಗಿಯೂ ಪ್ರಾರ್ಥಿಸಲಾಯಿತು.

ಮಡಿಕೇರಿ ನಗರದ ವಿದ್ಯಾನಗರದಲ್ಲಿರುವ ಕೋರ್ಟ್ ಸಂಕೀರ್ಣಕ್ಕೆ ‘ಸಹನಾ.ಟಿ’ ಎಂಬ ಹೆಸರಿನಲ್ಲಿ ಇ-ಮೇಲ್ ಮೂಲಕ ಆತ್ಮಾಹುತಿ ಬಾಂಬ್ ದಾಳಿಯ ಬೆದರಿಕೆ ಸಂದೇಶ ಬಂದಿದೆ. ದುರ್ಗಾ ಸ್ಟಾಲಿನ್ ಅವರಿಂದ ಪ್ರವಾದಿ ಮೊಹಮ್ಮದ್‌ಗೆ ಅವಮಾನವಾಗಿದೆ ಎಂದು ಉಲ್ಲೇಖಿಸಿರುವ ದುಷ್ಕರ್ಮಿಗಳು, ಮಧ್ಯಾಹ್ನ 2 ಗಂಟೆಗೆ ಇಬ್ಬರು ಐಸಿಸ್ ಉಗ್ರರಿಂದ ದಾಳಿ ನಡೆಸುವುದಾಗಿ ಎಚ್ಚರಿಸಿದ್ದಾರೆ. ಸಂದೇಶ ತಿಳಿಯುತ್ತಿದ್ದಂತೆ ಎಚ್ಚೆತ್ತ ಪೊಲೀಸರು ನ್ಯಾಯಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣವೇ ಹೊರಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳ ಭೇಟಿ ನೀಡಿ ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ತಿಂಗಳುಗಳ ಹಿಂದೆಯೂ ಇದೇ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Published On - 8:35 am, Tue, 23 June 26

Follow Us