AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಟೀಮ್ ಇಂಡಿಯಾಗೆ ಸೂರ್ಯಂಶ್ ಶೆಡ್ಗೆ ಎಂಟ್ರಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ

Karnataka News Today Live Updates:ಇರಾನ್ ವಿರುದ್ಧ ಯುದ್ಧ ತಡೆಯಲು ಅಮೆರಿಕ ಸೆನೆಟ್‌ನಲ್ಲಿ ನಿರ್ಣಯ ಅಂಗೀಕಾರವಾಗಿದ್ದು ಟ್ರಂಪ್‌ಗೆ ಹಿನ್ನಡೆಯಾಗಿದೆ. ಇತ್ತ ಐರ್ಲೆಂಡ್-ಇಂಗ್ಲೆಂಡ್ ಸರಣಿಗೆ ಭಾರತ ತಂಡಕ್ಕೆ ಸೂರ್ಯಂಶ್ ಶೆಡ್ಗೆ ಎಂಟ್ರಿ ಕೊಟ್ಟರೆ, ದಕ್ಷಿಣ ಚಿತ್ರರಂಗದ ಪಿತೃಪ್ರಧಾನ ಮನಸ್ಥಿತಿ ವಿರುದ್ಧ ನಟಿ ತಮನ್ನಾ ಭಾಟಿಯಾ ಆಕ್ರೋಶ ಹೊರಹಾಕಿದ್ದಾರೆ. ಇಂದಿನ ಪ್ರಮುಖ ಸುದ್ದಿಗಳು ಇಲ್ಲಿವೆ.

TV9 Kannada News Live: ಟೀಮ್ ಇಂಡಿಯಾಗೆ ಸೂರ್ಯಂಶ್ ಶೆಡ್ಗೆ ಎಂಟ್ರಿ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
ಭಾವನಾ ಹೆಗಡೆ
|

Updated on:Jun 24, 2026 | 8:54 AM

Share

LIVE NEWS & UPDATES

  • 24 Jun 2026 08:54 AM (IST)

    ನವಿಲು ಗರಿ ಬಳಕೆ ವಿವಾದ: ಕ್ಷಮೆಯಾಚಿಸಿದ ನಟ ಕಿಶನ್ ಬಿಳಗಲಿ

    ವೀಡಿಯೋವೊಂದರಲ್ಲಿ ನವಿಲು ಗರಿ ಬಳಸಿದ ವಿವಾದಕ್ಕೆ ಸಂಬಂಧಿಸಿದಂತೆ ನಟ, ಡ್ಯಾನ್ಸರ್ ಕಿಶನ್ ಬಿಳಗಲಿ ಸ್ಪಷ್ಟನೆ ನೀಡಿ ಕ್ಷಮೆ ಕೇಳಿದ್ದಾರೆ. “ಹಾಡಿನ ಕಾನ್ಸೆಪ್ಟ್‌ಗಾಗಿ ನವಿಲು ಗರಿಯನ್ನು ಬಾಡಿಗೆಗೆ ಪಡೆದಿದ್ದೆವು. ಆದರೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ ಇದು ತಪ್ಪು ಎಂಬುದು ನಮಗೆ ತಿಳಿದಿರಲಿಲ್ಲ. ನಮ್ಮಿಂದ ತಪ್ಪಾಗಿದೆ, ಯಾರೂ ಇಂತಹ ತಪ್ಪು ಮಾಡಬೇಡಿ. ವಿಷಯ ತಿಳಿಯುತ್ತಿದ್ದಂತೆ ವೀಡಿಯೋ ಡಿಲೀಟ್ ಮಾಡಿದ್ದೇವೆ” ಎಂದು ಕಿಶನ್ ತಿಳಿಸಿದ್ದಾರೆ.

  • 24 Jun 2026 08:43 AM (IST)

    ಹಳಿಯಾಳ: ನಾಡಬಾಂಬ್ ಸ್ಫೋಟದ ಬೆನ್ನಲ್ಲೇ ಮತ್ತೂ ಎರಡು ಬಾಂಬ್ ಪತ್ತೆ

    ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಕಾಳಗಿನಕೊಪ್ಪ ಗ್ರಾಮದ ವಸಂತ ಕೊರವ ಎಂಬುವವರ ಮನೆಯಲ್ಲಿ ನಾಡಬಾಂಬ್ ಸ್ಫೋಟಗೊಂಡ ಬೆನ್ನಲ್ಲೇ, ಗ್ರಾಮದ ಕೆರೆ ಬಳಿ ಮತ್ತೂ ಎರಡು ನಾಡಬಾಂಬ್ ಪತ್ತೆಯಾಗಿವೆ. ಸ್ಫೋಟದ ಬಳಿಕ ವಸಂತ್ ಕುಟುಂಬ ಸಮೇತ ಪರಾರಿಯಾಗಿದ್ದು, ಈತ ಮನೆಯಲ್ಲೇ ಬಾಂಬ್ ತಯಾರಿಸುತ್ತಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳವನ್ನು ಪರಿಶೀಲಿಸಿದ ಬಾಂಬ್ ನಿಷ್ಕ್ರಿಯ ದಳಕ್ಕೆ ತಂತಿ, ಮದ್ದಿನ ಪೌಡರ್ ಹಾಗೂ ಕಾಡುಹಂದಿಯ ಹಲ್ಲುಗಳು ಸಿಕ್ಕಿವೆ. ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 24 Jun 2026 08:36 AM (IST)

    ಶ್ರೀರಾಮನಿಗೆ ಅವಹೇಳನ: ಪ್ರೊ. ಕೆ.ಎಸ್. ಭಗವಾನ್‌ಗೆ ಪೊಲೀಸ್ ನೋಟಿಸ್

    ಹಿಂದೂ ಧರ್ಮ ಹಾಗೂ ಶ್ರೀರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪ್ರೊ. ಕೆ.ಎಸ್. ಭಗವಾನ್ ಅವರಿಗೆ ಹರಿಹರ ಗ್ರಾಮಾಂತರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಜೂನ್ 9 ರಂದು ಹನಗವಾಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಗವಾನ್ ನೀಡಿದ್ದ ಹೇಳಿಕೆ ವಿರುದ್ಧ ಹಿಂದೂ ಜಾಗರಣ ವೇದಿಕೆಯ ದಿನೇಶ್ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

ಇರಾನ್ ವಿರುದ್ಧದ ಯುದ್ಧ ನಿಲ್ಲಿಸಲು ಅಮೆರಿಕ ಸೆನೆಟ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರವಾಗುವ ಮೂಲಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ರಾಜಕೀಯ ಹಿನ್ನಡೆಯಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’ ಅನ್ನು ಪ್ರದಾನ ಮಾಡಿದ್ದಾರೆ. ಇತ್ತ ಕ್ರೀಡಾಲೋಕದಲ್ಲಿ, ಐರ್ಲೆಂಡ್ ಮತ್ತು ಇಂಗ್ಲೆಂಡ್ ಸರಣಿಗೂ ಮುನ್ನ ಗಾಯಾಳು ನಿತೀಶ್ ರೆಡ್ಡಿ ಬದಲಿಗೆ 23 ವರ್ಷದ ಯುವ ಆಲ್​ರೌಂಡರ್ ಸೂರ್ಯಂಶ್ ಶೆಡ್ಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇನ್ನು ಸಿನಿಮಾ ರಂಗದಲ್ಲಿ, ನಟಿ ತಮನ್ನಾ ಭಾಟಿಯಾ ದಕ್ಷಿಣ ಚಿತ್ರರಂಗದ ಪಿತೃಪ್ರಧಾನ ಮನಸ್ಥಿತಿ ಮತ್ತು ಐಟಂ ಸಾಂಗ್‌ಗಳ ಸಂಸ್ಕೃತಿ ಬಗ್ಗೆ ಮುಕ್ತವಾಗಿ ಅಸಮಾಧಾನ ಹೊರಹಾಕಿದ್ದಾರೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.

Tv9 Kannada Live TV ಇಲ್ಲಿ ವೀಕ್ಷಿಸಿ

Published On - Jun 24,2026 8:30 AM

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ