Breaking News Today Live: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲೋಕಾರ್ಪಣೆಗೆ ಕ್ಷಣಗಣನೆ, ಇಂದಿನ ಪ್ರಮುಖ ಸುದ್ದಿಗಳು ಇಲ್ಲಿದೆ
Karnataka News Today Live Updates: ವಿಜಯನಗರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಇನ್ನು ಇಂದು ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಸೇರಿದಂತೆ ಹಲವು ನಗರಗಳಲ್ಲಿ ಭೂಕಂಪ ಸಂಭವಿಸಿದ್ದು ಬಹುಮಹಡಿ ಕಟ್ಟಡಗಳು ಕುಸಿದು ಬಿದ್ದಿದ್ದು, ತೀವ್ರ ಹಾನಿಯಾಗಿದೆ. ಹೀಗೆ ಕ್ಷಣಕ್ಷಣದ ಪ್ರಮುಖ ಸುದ್ದಿಗಳು ಹಾಗೂ ಲೈವ್ ಅಪ್ಡೇಟ್ಗಳನ್ನು ಇಲ್ಲಿ ನೀಡಲಾಗುವುದು.

LIVE NEWS & UPDATES
-
ಕೋಲ್ಕತ್ತಾ ಗೋದಾಮು ಶೆಡ್ ಕುಸಿತ ದುರಂತ; ಮೃತರ ಸಂಖ್ಯೆ 8ಕ್ಕೆ ಏರಿಕೆ
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ತರತಲಾ ಪ್ರದೇಶದಲ್ಲಿ ನಿನ್ನೆ ಸಂಭವಿಸಿದ ಭೀಕರ ನಿರ್ಮಾಣ ಹಂತದ ಗೋದಾಮು ಶೆಡ್ ಕುಸಿತದ ದುರಂತದಲ್ಲಿ ಮೃತರ ಸಂಖ್ಯೆ ಈಗ 8 ಕ್ಕೇರಿದೆ. ಧೂಳಿನ ರಾಶಿಯಡಿ ಸಿಲುಕಿರುವ ಇನ್ನೂ ಹಲವು ಕಾರ್ಮಿಕರನ್ನು ಹೊರತೆಗೆಯಲು ಭಾರತೀಯ ಸೇನೆ, ಎನ್ಡಿಆರ್ಎಫ್ ಹಾಗೂ ಸ್ಥಳೀಯ ವಿಪತ್ತು ನಿರ್ವಹಣಾ ಪಡೆಗಳು ಜಂಟಿಯಾಗಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿವೆ.
-
ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆಗೆ ಕ್ಷಣಗಣನೆ
ವಿಜಯನಗರ ಜಿಲ್ಲೆಯ ಕಣ್ಣೀರು ಮತ್ತು ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಕಳೆದ ವರ್ಷ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ, ಈಗ ಡ್ಯಾಂನ ಎಲ್ಲಾ 33 ಕ್ರಸ್ಟ್ ಗೇಟ್ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಅವುಗಳ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ.
-
ಬೆಂಗಳೂರು, ಜೂ.25: ವಿಜಯನಗರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಕಳೆದ ವರ್ಷ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ, ಈಗ ಡ್ಯಾಂನ ಎಲ್ಲಾ 33 ಕ್ರಸ್ಟ್ ಗೇಟ್ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಅವುಗಳ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಇದರ ನಡುವೆ ದಕ್ಷಿಣ ಅಮೆರಿಕದ ದೇಶವಾದ ವೆನೆಜುವೆಲಾದಲ್ಲಿ ಬ್ಯಾಕ್-ಟು-ಬ್ಯಾಕ್ ಎರಡು ಭೀಕರ ಹಾಗೂ ಪ್ರಬಲ ಭೂಕಂಪಗಳು ಸಂಭವಿಸಿದ್ದು, ಇಡೀ ದೇಶವೇ ನಡುಗಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ, ಮೊದಲು 7.2 ತೀವ್ರತೆ ಹಾಗೂ ಅದರ ಬೆನ್ನಲ್ಲೇ ಕೇವಲ 40 ಸೆಕೆಂಡುಗಳ ಅಂತರದಲ್ಲಿ 7.5 ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದೆ. ಇನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮತ್ತು ಅವರ ನಿಯೋಗದ ಸದಸ್ಯರನ್ನು ಹತ್ಯೆ ಮಾಡಲು ಇಸ್ರೇಲ್ನ ರಹಸ್ಯ ಗುಪ್ತಚರ ಸಂಸ್ಥೆ ‘ಮೊಸಾದ್’ (Mossad) ಭೀಕರ ಸಂಚು ರೂಪಿಸಿತ್ತು ಎಂಬ ಆಘಾತಕಾರಿ ರಹಸ್ಯವನ್ನು ಬ್ರೆಜಿಲ್ನ ಖ್ಯಾತ ಪತ್ರಕರ್ತರೊಬ್ಬರು ಬಯಲಿಗೆಳೆದಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಲೈವ್ ಅಪ್ಡೇಟ್ಗಳನ್ನು ಇಲ್ಲಿ ನೀಡಲಾಗುತ್ತದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - Jun 25,2026 9:51 AM




