Breaking News Today Live: ನಟಿ ಕೃಷಿ ತಾಪಂಡ ಮನೆಯಲ್ಲಿ ಆಪ್ತ ಸ್ನೇಹಿತ ವೈಶಾಕ್ ಆತ್ಮಹತ್ಯೆ, ಇಂದಿನ ಪ್ರಮುಖ ಸುದ್ದಿಗಳು ಇಲ್ಲಿದೆ

Karnataka News Today Live Updates: ವಿಜಯನಗರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಇನ್ನು ಇಂದು ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ ಸೇರಿದಂತೆ ಹಲವು ನಗರಗಳಲ್ಲಿ ಭೂಕಂಪ ಸಂಭವಿಸಿದ್ದು ಬಹುಮಹಡಿ ಕಟ್ಟಡಗಳು ಕುಸಿದು ಬಿದ್ದಿದ್ದು, ತೀವ್ರ ಹಾನಿಯಾಗಿದೆ. ಹೀಗೆ ಕ್ಷಣಕ್ಷಣದ ಪ್ರಮುಖ ಸುದ್ದಿಗಳು ಹಾಗೂ ಲೈವ್ ಅಪ್ಡೇಟ್‌ಗಳನ್ನು ಇಲ್ಲಿ ನೀಡಲಾಗುವುದು.

Breaking News Today Live: ನಟಿ ಕೃಷಿ ತಾಪಂಡ ಮನೆಯಲ್ಲಿ ಆಪ್ತ ಸ್ನೇಹಿತ ವೈಶಾಕ್ ಆತ್ಮಹತ್ಯೆ, ಇಂದಿನ ಪ್ರಮುಖ ಸುದ್ದಿಗಳು ಇಲ್ಲಿದೆ
ನಟಿ ಕೃಷಿ ತಾಪಂಡ

Updated on: Jun 25, 2026 | 11:42 AM

ಮುಖ್ಯಾಂಶಗಳು

  • ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ
  • ವೆನೆಜುವೆಲಾದಲ್ಲಿ ಬ್ಯಾಕ್-ಟು-ಬ್ಯಾಕ್ ಎರಡು ಭೀಕರ ಹಾಗೂ ಪ್ರಬಲ ಭೂಕಂಪ
  • ಅಸಿಮ್ ಮುನೀರ್ ಮತ್ತು ಅವರ ನಿಯೋಗದ ಸದಸ್ಯರ ಹತ್ಯೆಗೆ ಸಂಚು

LIVE NEWS & UPDATES

  • 25 Jun 2026 09:52 AM (IST)

    ಬೆಂಗಳೂರಿನಲ್ಲಿ ನಟಿ ಕೃಷಿ ತಾಪಂಡ ಸ್ನೇಹಿತ ವೈಶಾಕ್​ ಅತ್ಮಹತ್ಯೆ

    ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡ (Krishi Thapanda) ಅವರ ಆಪ್ತ ಸ್ನೇಹಿತ ವೈಶಾಕ್ (Vaisakh) ಬೆಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

  • 25 Jun 2026 09:51 AM (IST)

    ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆಗೆ ಕ್ಷಣಗಣನೆ

    ವಿಜಯನಗರ ಜಿಲ್ಲೆಯ ಕಣ್ಣೀರು ಮತ್ತು ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಕಳೆದ ವರ್ಷ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ, ಈಗ ಡ್ಯಾಂನ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಅವುಗಳ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ.

ಬೆಂಗಳೂರು, ಜೂ.25: ವಿಜಯನಗರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಕಳೆದ ವರ್ಷ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ, ಈಗ ಡ್ಯಾಂನ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಅವುಗಳ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಇದರ ನಡುವೆ ದಕ್ಷಿಣ ಅಮೆರಿಕದ ದೇಶವಾದ ವೆನೆಜುವೆಲಾದಲ್ಲಿ ಬ್ಯಾಕ್-ಟು-ಬ್ಯಾಕ್ ಎರಡು ಭೀಕರ ಹಾಗೂ ಪ್ರಬಲ ಭೂಕಂಪಗಳು ಸಂಭವಿಸಿದ್ದು, ಇಡೀ ದೇಶವೇ ನಡುಗಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ, ಮೊದಲು 7.2 ತೀವ್ರತೆ ಹಾಗೂ ಅದರ ಬೆನ್ನಲ್ಲೇ ಕೇವಲ 40 ಸೆಕೆಂಡುಗಳ ಅಂತರದಲ್ಲಿ 7.5 ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದೆ. ಇನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಮತ್ತು ಅವರ ನಿಯೋಗದ ಸದಸ್ಯರನ್ನು ಹತ್ಯೆ ಮಾಡಲು ಇಸ್ರೇಲ್‌ನ ರಹಸ್ಯ ಗುಪ್ತಚರ ಸಂಸ್ಥೆ ‘ಮೊಸಾದ್’ (Mossad) ಭೀಕರ ಸಂಚು ರೂಪಿಸಿತ್ತು ಎಂಬ ಆಘಾತಕಾರಿ ರಹಸ್ಯವನ್ನು ಬ್ರೆಜಿಲ್‌ನ ಖ್ಯಾತ ಪತ್ರಕರ್ತರೊಬ್ಬರು ಬಯಲಿಗೆಳೆದಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಲೈವ್​​​ ಅಪ್ಡೇಟ್​​​ಗಳನ್ನು ಇಲ್ಲಿ ನೀಡಲಾಗುತ್ತದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:51 am, Thu, 25 June 26

Follow Us