TV9 Kannada News Live: ಜುಲೈನಲ್ಲಿ ಬರಲಿದೆ ಯಶ್ ‘ತಬಾಹಿ’ ಸಾಂಗ್! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ
Karnataka News Today Live Updates:ಜಾಗತಿಕ ಬಿಕ್ಕಟ್ಟಿನ ನಡುವೆಯೂ ಭಾರತಕ್ಕೆ ಹೂಡಿಕೆ ಹರಿದುಬರುತ್ತಿದೆ. ಇತ್ತ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡು ಜುಲೈನಲ್ಲಿ ರಿಲೀಸ್ ಆಗಲಿದ್ದು, ಮತ್ತೊಂದೆಡೆ ರಾಜ್ಯದಲ್ಲಿ ಶೇ 41 ರಷ್ಟು ಮಳೆ ಕೊರತೆಯ ಆತಂಕ ಎದುರಾಗಿದೆ. ಇಂದಿನ ಪ್ರಮುಖ ಸುದ್ದಿಗಳು ಇಲ್ಲಿವೆ.

LIVE NEWS & UPDATES
-
‘ಬಾಹುಬಲಿ 3’ ಬರೋದು ಪಕ್ಕಾ
ಅಭಿಮಾನಿಗಳ ಬಹುದಿನಗಳ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದ್ದು, ‘ಬಾಹುಬಲಿ 3’ ಸಿನಿಮಾ ಬರುವುದು ಅಧಿಕೃತವಾಗಿ ಖಚಿತವಾಗಿದೆ. ನಟರಾದ ಪ್ರಭಾಸ್, ರಾಣಾ ದಗ್ಗುಬಾಟಿ ಮತ್ತು ಅನುಷ್ಕಾ ಶೆಟ್ಟಿ ಅವರು ‘ಪರಂಪರೆ ಮುಂದುವರಿಯುತ್ತದೆ’ ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳುವ ಮೂಲಕ ಈ ಬಿಗ್ ಅಪ್ಡೇಟ್ ನೀಡಿದ್ದಾರೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಚಿತ್ರಪ್ರೇಮಿಗಳಲ್ಲಿ ಕುತೂಹಲ ಮೂಡಿಸಿದೆ. ಆದರೆ, ಸಿನಿಮಾ ಯಾವಾಗ ಸೆಟ್ಟೇರಲಿದೆ ಎಂಬ ಸಂಪೂರ್ಣ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ. ಮತ್ತಷ್ಟು ಓದಿ
-
ಸುಣ್ಣಘಟ್ಟದಲ್ಲಿ ನಾಡಬಾಂಬ್ ಸ್ಫೋಟ!
ಹಾರೋಹಳ್ಳಿ ತಾಲೂಕಿನ ಸುಣ್ಣಘಟ್ಟದ ಫಾರ್ಮ್ಹೌಸ್ ಗೇಟ್ ತೆರೆಯುವಾಗ ದುಷ್ಕರ್ಮಿಗಳು ಇಟ್ಟಿದ್ದ ನಾಡಬಾಂಬ್ ಸ್ಫೋಟಗೊಂಡು ವಕೀಲ ಎನ್.ಸಿ.ಮೋಹನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
-
ಜಾಗತಿಕ ತೈಲ ಬಿಕ್ಕಟ್ಟು ಹಾಗೂ ಪಶ್ಚಿಮ ಏಷ್ಯಾ ಸಂಘರ್ಷದ ಸವಾಲುಗಳ ನಡುವೆಯೂ ವಿಶ್ವದ ಪ್ರಮುಖ ಕಾರ್ಪೊರೇಟ್ ಕಂಪನಿಗಳು ಭಾರತದ ಬಲಿಷ್ಠ ಆರ್ಥಿಕತೆಯನ್ನು ನಂಬಿ ಬೃಹತ್ ಹೂಡಿಕೆ ಮಾಡಲು ಸಾಲುಗಟ್ಟಿ ನಿಂತಿರುವುದು ದೇಶಕ್ಕೆ ಅತ್ಯಂತ ಆಶಾದಾಯಕ ಸಂಗತಿಯಾಗಿದೆ. ಇತ್ತ ಸಿನಿರಂಗದಲ್ಲಿ ಭಾರಿ ಕುತೂಹಲ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ, ಗೀತು ಮೋಹನ್ದಾಸ್ ನಿರ್ದೇಶನದ ಹೈ-ಬಜೆಟ್ ಆಕ್ಷನ್ ಸಿನಿಮಾ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ವಿಡಿಯೋ ಸಾಂಗ್ ಜುಲೈ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದ್ದು, ಪ್ಯಾನ್-ಇಂಡಿಯಾ ಸಿನಿಮಾ ಆಗಸ್ಟ್ 26ರಂದು ತೆರೆಕಾಣಲು ಸಜ್ಜಾಗಿದೆ. ಆದರೆ, ಮತ್ತೊಂದೆಡೆ ಹವಾಮಾನ ವೈಪರೀತ್ಯ ಹಾಗೂ ಸೂಪರ್ ಎಲ್ ನಿನೋ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮುಂಗಾರು ಆರಂಭದಲ್ಲೇ ಭಾರಿ ಹಿನ್ನಡೆ ಅನುಭವಿಸಿದ್ದು, ಜೂನ್ ತಿಂಗಳಿನಲ್ಲಿ ಬರೋಬ್ಬರಿ ಶೇ 41 ರಷ್ಟು ಮಳೆ ಕೊರತೆಯಾಗಿರುವುದು ರಾಜ್ಯದಲ್ಲಿ ತೀವ್ರ ಆತಂಕ ಮೂಡಿಸಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಇತ್ಯಾದಿ ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Tv9 Kannada Live TV ಇಲ್ಲಿ ವೀಕ್ಷಿಸಿ
Published On - Jun 26,2026 8:57 AM




