
ಸಿಂಧೂ ನದಿ ಹಂಚಿಕೆ ವಿಚಾರವಾಗಿ ಪಾಕಿಸ್ತಾನ ಮತ್ತೆ ಉದ್ಧಟತನ ಮೆರೆದಿದೆ. ‘ನಮಗೆ ಸೇರಬೇಕಾದ ನೀರು ತಡೆದವರ ಕೈ ಕತ್ತರಿಸುತ್ತೇವೆ’ ಎಂದು ಪಾಕಿಸ್ತಾನದ ಹವಾಮಾನ ಬದಲಾವಣೆ ಸಚಿವ ಮುಸಾದಿಕ್ ಮಲಿಕ್ ಬೆದರಿಕೆ ಹಾಕಿದ್ದಾರೆ. ಮತ್ತಷ್ಟು ಓದಿ
ಚಿಗಟೇರಿಯಲ್ಲಿರುವ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಅಕ್ಸಿಜನ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಆಪರೇಷನ್ ಥಿಯೇಟರ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಯಿತು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರಿನ ಆಳ ಸಮುದ್ರದಲ್ಲಿ ಐಎಫ್ಬಿ ಮಂಜುಮಾತಾ ಮೀನುಗಾರಿಕಾ ಬೋಟ್ ಒಂದು ಮುಳುಗಿ ಅವಘಡ ಸಂಭವಿಸಿದೆ. ಸದ್ಯ ಭಾರತೀಯ ಕರಾವಳಿ ರಕ್ಷಣಾ ಪಡೆ ಆರು ಜನ ಮೀನುಗಾರರ ರಕ್ಷಣೆ ಮಾಡಿದೆ. Indian Coast Guardಗೆ ಸೇರಿದ ಐಸಿಜಿಎಸ್ ಸಚೇತ್ (ICGS Sachet) ಹಡಗಿನಿಂದ ರಕ್ಷಣಾ ಕಾರ್ಯ ನೆರವೇರಿದೆ. ಪ್ರಕ್ಷುಬ್ಧ ವಾತಾವರಣ ಹಿನ್ನೆಲೆ ಸಮುದ್ರದಲ್ಲಿ ಅವಘಡ ನಡೆದು ಬೋಟ್ಗೆ ನೀರು ನುಗ್ಗಿ ಅನಾಹುತವಾಗಿದೆ.
ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಉಚಿತ ಸಮವಸ್ತ್ರವೇ ಈಗ ಹೊರೆಯಾಗಿ ಪರಿಣಮಿಸಿದೆ. ಅದಕ್ಕೆ ಕಾರಣ, ಹೊಲಿಗೆ ವೆಚ್ಚವೇ ಹೆಚ್ಚಾಗಿರುವುದು. ಪ್ರಸ್ತುತ ಬೆಂಗಳೂರಿನಲ್ಲಿ ಒಂದು ಜೊತೆ ಶರ್ಟ್ ಹಾಗೂ ಪ್ಯಾಂಟ್ ಅಥವಾ ಚಡ್ಡಿ ಹೊಲಿಸಲು ಕನಿಷ್ಠ 1,300 ರಿಂದ 1,500 ರೂಪಾಯಿಗೂ ಅಧಿಕ ಹಣವಿದೆ. ಹೀಗಾಗಿ, ಬಟ್ಟೆ ಕೊಡುವ ಬದಲು ನಮಗೆ ದುಡ್ಡು ಕೊಟ್ಟರೆ ರೆಡಿಮೇಡ್ ಬಟ್ಟೆಯೇ ಖರೀದಿಸುತ್ತೇವೆ ಎಂಬ ಮಾತು ಪೋಷಕರಿಂದ ಕೇಳಿಬಂದಿದೆ.
ಪೋಷಕರಿಗೆ ಉಚಿತ ಸಮವಸ್ತ್ರವೇ ಹೊರೆ!#GovernmentSchool #SchoolUniform #BengaluruNews #EducationDepartmenthttps://t.co/peGYwLfP7X
— TV9 Kannada (@tv9kannada) June 30, 2026
ಕಿಚ್ಚ ಸುದೀಪ್ ಅಭಿನಯದ ‘ಈಗ’ ಚಿತ್ರದ ದೃಶ್ಯವೊಂದಕ್ಕೆ ಪ್ಯಾರಿಸ್ನಲ್ಲಿ ಪ್ರೇಕ್ಷಕರು ಹುಚ್ಚೆದ್ದು ಸಂಭ್ರಮಿಸಿದ್ದಾರೆ. ಪ್ಯಾರಿಸ್ನಲ್ಲಿ ‘ಈಗ’ ಸಿನಿಮಾದ ಪ್ರದರ್ಶನ ನಡೆದಿದ್ದು, ಕ್ಲೈಮ್ಯಾಕ್ಸ್ ದೃಶ್ಯಕ್ಕೆ ಫ್ರೆಂಚ್ ಪ್ರೇಕ್ಷಕರು ಫಿದಾ ಆಗಿದ್ದಾರೆ. ಮತ್ತಷ್ಟು ಓದಿ
ಭಾರತ vs ಇಂಗ್ಲೆಂಡ್ ಟಿ20 ಸರಣಿ ಜುಲೈ ಒಂದರಿಂದ ಶುರುವಾಗಲಿದೆ. ಇದೇ ಸಂದರ್ಭದಲ್ಲಿ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವಿರುದ್ಧ ಮಾಜಿ ನಾಯಕ ಸುನಿಲ್ ಗಾವಸ್ಕರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐರ್ಲೆಂಡ್ ಪ್ರವಾಸದಲ್ಲಿ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿಗೆ ಪೆಡ್ಲರ್ಸ್ ಮೈದಾನದಲ್ಲಿ ಆಡಲು ಅವಕಾಶ ನೀಡದಿರುವುದು ಮ್ಯಾನೇಜ್ಮೆಂಟ್ ಮಾಡಿದ “ದೊಡ್ಡ ತಪ್ಪು” ಎಂದು ಗಾವಸ್ಕರ್ ಗುಡುಗಿದ್ದಾರೆ. ಮತ್ತಷ್ಟು ಓದಿ
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಇಂದಿನಿಂದ (ಜೂನ್ 30) ಶುರುವಾಗಿದೆ. ಜುಲೈ 29ರವರೆಗೆ ಮೊದಲ ಹಂತದ ಪ್ರಕ್ರಿಯೆ ನಡೆಯಲಿದೆ. ಮತ್ತಷ್ಟು ಓದಿ
ಕರ್ನಾಟಕದಲ್ಲಿ ಇಂದಿನಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಆರಂಭವಾಗಿದ್ದು, ಪಾರದರ್ಶಕತೆಗಾಗಿ ಚುನಾವಣಾ ಆಯೋಗ ಹಾಗೂ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿವೆ. ಬೆಂಗಳೂರಿನಲ್ಲಿ ಸಾರ್ವಜನಿಕರ ನೆರವಿಗಾಗಿ ಕಂಟ್ರೋಲ್ ರೂಂ, ಸಹಾಯವಾಣಿ ಆರಂಭಿಸಲಾಗಿದೆ. ರಾಜ್ಯಾದ್ಯಂತ ಇದೇ ಕ್ರಮ ಅನುಸರಿಸಲಾಗುವುದು ಎಂದು ಆಯೋಗ ತಿಳಿಸಿದೆ. ಮತ್ತೊಂದೆಡೆ, ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ವೈರಲ್ ಆಗಿರುವ ಆಡಿಯೋ ಬಿಸಿಬಿಸಿ ರಾಜಕೀಯ ಚರ್ಚೆಗಳಿಗೆ ಗ್ರಾಸವಾಗಿದೆ. ಮತ್ತೊಂದೆಡೆ, ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ, ವೆನೆಜುವೆಲಾದ ಭೀಕರ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 1,719ಕ್ಕೆ ಏರಿಕೆಯಾಗಿದೆ. ಪ್ಯಾರಿಸ್ನಲ್ಲಿ ಸುದೀಪ್ ‘ಈಗ’ ಚಿತ್ರಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದ್ದರೆ, ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ನಾಳೆಯಿಂದ (ಜುಲೈ 1) ಶುರುವಾಗಲಿದೆ. ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜ್ಯ, ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಲೇಟೆಸ್ಟ್ ಅಪ್ಡೇಟ್ಸ್ಗಾಗಿ ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 9:17 am, Tue, 30 June 26